ನವದೆಹಲಿ, ಜುಲೈ 11: ಈ ಬಾರಿಯ ಎನ್ಡಿಎ ಸರ್ಕಾರದಲ್ಲಿ ಪ್ರಮುಖ ಸ್ಥಾನ ಪಡೆದುಕೊಂಡಿರುವ ಒಂದರ್ಥದಲ್ಲಿ ಕಿಂಗ್ ಮೇಕರ್ ಎಂದೇ ಕರೆಸಿಕೊಂಡಿರುವವರು ಈಗ ಕೇಂದ್ರದ ಮುಂದೆಯೇ ದೊಡ್ಡ ಬೇಡಿಕೆ ಇಟ್ಟಿದ್ದಾರೆ ಎನ್ನುವ ಸುದ್ದಿ ಬಂದಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ನಲ್ಲಿ ತಮ್ಮ ರಾಜ್ಯಗಳಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸುಮಾರು 50 ಸಾವಿರ ಕೋಟಿ ರು.ಗೆ ಬೇಡಿಕೆ ಇಟ್ಟಿದ್ದಾರೆ ಎನ್ನುವ ವರದಿಗಳು ಬಂದಿವೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕಳೆದ ಬಾರಿಯಷ್ಟು ಬಹುಮತ ಸಾಧಿಸಲಿಲ್ಲ. ಚಂದ್ರಬಾಬು ನಾಯ್ಡು ಟಿಡಿಪಿ ಹಾಗೂ ನಿತೀಶ್ ಕುಮಾರ್ ಜೆಡಿಯು ಬೆಂಬಲ ಆಧರಿಸಿಕೊಂಡೆ ಸರ್ಕಾರ ರಚನೆ ಮಾಡಿಕೊಂಡಿದ್ದವು. ಈಗ ಬಜೆಟ್ ಗೂ ಮುನ್ನ ದೋಸ್ತಿಗಳು ಇಟ್ಟಿರುವ ಬೇಡಿಕೆ ಸಹಜವಾಗಿಯೇ ಮುಂದೆ ಯಾವುದಾದರೂ ರಾಜಕೀಯ ಬೆಳವಣಿಗೆಗೆ ಕಾರಣವಾಗಲಿದೆಯಾ ಎನ್ನುವುದನ್ನು ನೋಡಬೇಕಾಗಿದೆ.

ಆಂಧ್ರ ಮತ್ತು ಬಿಹಾರ ಎರಡು ರಾಜ್ಯಗಳು 2025ನೇ ಸಾಲಿಗೆ ಹೆಚ್ಚುವರಿ ನಿಧಿಯಾಗಿ ಸುಮಾರು 48,000 ಕೋಟಿ ರು.ಗೆ ಬೇಡಿಕೆ ಇಟ್ಟಿವೆ. ಇದರ ಜತೆಗೆ ಕೇಂದ್ರವು ಬಂಡವಾಳ ವೆಚ್ಚಕ್ಕಾಗಿ ನೀಡುವ 1 ಲಕ್ಷ ಕೋಟಿ ರು. ಬಡ್ಡಿ ರಹಿತ ದೀರ್ಘಾವಧಿಯ ಸಾಲವನ್ನು ದ್ವಿಗುಣಗೊಳಿಸಲು ರಾಜ್ಯಗಳು ಕೇಳಿಕೊಂಡಿವೆ ಎನ್ನುವ ವರದಿಗಳು ಬಂದಿವೆ.
ಮಾರುಕಟ್ಟೆಯಿಂದ ಸಾಲ ಪಡೆಯಲು ಇರುವ ನಿಯಮಗಳ ಸಡಿಲಿಕೆಗೆ ಈ ರಾಜ್ಯಗಳು ಬೇಡಿಕೆ ಇರಿಸಿವೆ. ಈಗ ಕೇಂದ್ರ ಸರ್ಕಾರವು ಸಾಲದ ಮಿತಿಯನ್ನು ರಾಜ್ಯದ ಆದಾಯ ಅಥವಾ ಒಟ್ಟು ರಾಜ್ಯ ದೇಶೀಯ ಉತ್ಪನ್ನದ (ಜಿಎಸ್ಡಿಪಿ) ಶೇ.3ಕ್ಕೆಸೀಮಿತಗೊಳಿಸಿದೆ. ಬಿಹಾರ ನಿರ್ದಿಷ್ಟವಾಗಿ 9 ಹೊಸ ವಿಮಾನ ನಿಲ್ದಾಣಗಳು, 2 ವಿದ್ಯುತ್ ಯೋಜನೆಗಳು, 2 ನದಿ ನೀರಿನ ಯೋಜನೆ ಮತ್ತು ಯಾವುದೇ ನಿರ್ದಿಷ್ಟ ಕಾಲಮಿತಿಯಿಲ್ಲದೆ 7 ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಹಣ ನೀಡುವಂತೆ ಕೋರಿದೆ.
ಇನ್ನು ಆಂಧ್ರಪ್ರದೇಶವು ರಾಜ್ಯದ ರಾಜಧಾನಿ ಅಮರಾವತಿಯನ್ನು ಅಭಿವೃದ್ಧಿಪಡಿಸಲು ಮತ್ತು ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮೀಸಲಿಡಬೇಕು ಎಂದು ಕೇಳಿಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾದ ಮೇಲೆ ಬಜೆಟ್ ಮಂಡನೆಯಾಗುತ್ತಿದ್ದು ಸಹಜವಾಗಿಯೇ ನಿರೀಕ್ಷೆಗಳು ಗರಿಗೆದರಿವೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ



Click it and Unblock the Notifications