ಪಿಎಂ ಕಿಸಾನ್ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಶೇಕಡ ನೂರರಷ್ಟು ಭಾರತ ಸರ್ಕಾರವೇ ಇದಕ್ಕೆ ಬಂಡವಾಳ ಹಾಕುತ್ತದೆ. 2018ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು, ವಾರ್ಷಿಕವಾಗಿ ರೈತರಿಗೆ ಆರು ಸಾವಿರ ರೂಪಾಯಿ ನೀಡಲಾಗುತ್ತದೆ.
ಈ ಆರು ಸಾವಿರ ರೂಪಾಯಿಯನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಪ್ರತಿ ನಾಲ್ಕು ತಿಂಗಳಿಗೆ ಒಂದು ಕಂತಿನಂತೆ ಪ್ರತಿ ಕಂತಿನಲ್ಲಿ ಎರಡು ಸಾವಿರ ರೂಪಾಯಿಯನ್ನು ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳಾದ ರೈತರ ಖಾತೆಗೆ ಹೂಡಿಕೆ ಮಾಡಲಾಗುತ್ತದೆ. ಈ ಯೋಜನೆಯ ಅಡಿಯಲ್ಲಿ ಒಂದು ಕುಟುಂಬವೆಂದರೆ ತಂದೆ, ತಾಯಿ ಹಾಗೂ ಅಪ್ರಾಪ್ತ ಮಕ್ಕಳು ಆಗಿದ್ದಾರೆ.
ಈ ವೆಬ್ಸೈಟ್ ಪ್ರಕಾರ ರಾಜ್ಯ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶದ ರೈತರು ಈ ಯೋಜನೆಯ ಫಲಾನುಭವವನ್ನು ಪಡೆಯಬಹುದಾಗಿದೆ. ಈ ಯೋಜನೆಯ ಮಾರ್ಗಸೂಚಿ ಪ್ರಕಾರ ಯಾರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವೋ ಅವರಿಗೆ ಮಾತ್ರ ಮೂರು ಕಂತಿನಲ್ಲಿ ಹಣ ನೀಡಲಾಗುತ್ತದೆ. ಹಾಗಾದರೆ ಮುಂದಿನ ಕಂತು ಯಾವಾಗ ಬರಲಿದೆ, ನೀವು ಅದಕ್ಕೂ ಮುನ್ನ ಮಾಡಬೇಕಾದ ಕೆಲಸ ಏನಿದೆ ಎಂಬ ಬಗ್ಗೆ ತಿಳಿಯಲು ಮುಂದೆ ಓದಿ....
ಮುಂದಿನ ಕಂತು ಯಾವಾಗ?
ಸಾಮಾನ್ಯವಾಗಿ ಪಿಎಂ ಕಿಸಾನ್ ಯೋಜನೆಯ ಮೊದಲ ಕಂತು ಏಪ್ರಿಲ್ನಿಂದ ಜುಲೈ ಎಂದು ಪರಿಗಣಿಸಲಾಗುತ್ತದೆ. ಹಾಗೆಯೇ ಎರಡನೇ ಕಂತನ್ನು ಆಗಸ್ಟ್ನಿಂದ ನವೆಂಬರ್ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಇನ್ನು ಮೂರನೇ ಕಂತನ್ನು ಡಿಸೆಂಬರ್ನಿಂದ ಮುಂದಿನ ವರ್ಷದ ಮಾರ್ಚ್ವರೆಗೆ ಜಮೆ ಆಗಲಿದೆ. ಇದರ ಪ್ರಕಾರ ಹನ್ನೊಂದನೇ ಕಂತಿನ ಕೊನೆಯ ದಿನಾಂಕ ಮಾರ್ಚ್ 31 ಆಗಿದೆ. ಜುಲೈ ಒಂದರಂದು ಮುಂದಿನ ಕಂತು ಜಮೆ ಆಗುವ ಸಾಧ್ಯತೆ ಇದೆ. ಜುಲೈ ಬಳಿಕ ನಿಮ್ಮ ಖಾತೆಗೆ ಹನ್ನೆರಡನೇ ಕಂತಿನ ಹಣ ಜಮೆ ಆಗಲಿದೆ.
ಪಿಎಂ ಇಕೆವೈಸಿ ಕಡ್ಡಾಯ
ಪಿಎಂ ಕಿಸಾನ್ ವೆಬ್ಸೈಟ್ ಪ್ರಕಾರ ಪ್ರಸ್ತುತ ಇಕೆವೈಸಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ನೀವು ಇಕೆವೈಸಿ ಮಾಡಿಕೊಂಡಿಲ್ಲದಿದ್ದರೆ, ನಿಮ್ಮ ಖಾತೆಗೆ ಕಂತಿನ ಹಣ ಜಮೆ ಆಗದೆ ಇರಬಹುದು. ಆದ್ದರಿಂದ ಶೀಘ್ರವೇ ಇಕೆವೈಸಿ ಮಾಡಿಕೊಳ್ಳುವುದು ಉತ್ತಮ. ಇತ್ತೀಚೆಗೆ ಇಕೆವೈಸಿ ಗಡುವನ್ನು ಜುಲೈ 31, 2022ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಗಡುವನ್ನು ಮೇ 31, 2022 ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಬಳಿಕ ವಿಸ್ತರಣೆ ಮಾಡಲಾಗಿದೆ. ಎರಡು ಬಾರಿಗೆ ಗಡುವನ್ನು ವಿಸ್ತರಣೆ ಮಾಡಲಾಗಿದೆ.
ಇಕೆವೈಸಿ ಹೇಗೆ ಮಾಡುವುದು?
* ಅಧಿಕೃತ ಪಿಎಂ ಕಿಸಾನ್ ವೆಬ್ಸೈಟ್ ಗೆ ಭೇಟಿ ನೀಡಿ
* ಬಲಭಾಗದಲ್ಲಿ, ಮುಖಪುಟದ ಕೆಳಗೆ, ಇಕೆವೈಸಿ ಕಾಣಲಿದೆ.
* ಫಾರ್ಮರ್ಸ್ ಕಾರ್ನರ್ನ ಕೆಳಗೆ ಇಕೆವೈಸಿ ನಮೂದಿಸುವ ಬಾಕ್ಸ್ ಇದೆ
* ಅಲ್ಲಿ ನೀವು e-kyc ಅನ್ನು ಕ್ಲಿಕ್ ಮಾಡಿ
* ಆಧಾರ್ Ekyc ಯ ಪುಟ ತೆರೆಯಲಿದೆ
* ಈಗ, ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು
* ನಂತರ ತೋರಿಸಿರುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಬೇಕು
* ಬಳಿಕ search ಬಟನ್ ಕ್ಲಿಕ್ ಮಾಡಬೇಕು
* ಅದರ ನಂತರ, ನಿಮ್ಮ ಆಧಾರ್ ಕಾರ್ಡ್ಗೆ ಲಿಂಕ್ ಮಾಡಲಾದ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀವು ನಮೂದಿಸಬೇಕು
* ಬಳಿಕ Get OTP ಅನ್ನು ಕ್ಲಿಕ್ ಮಾಡಿ
* ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ
* ಒಟಿಪಿಯನ್ನು ನಮೂದಿಸಿ, Submit ಮಾಡಿ
* ನೀವು Submit ಬಟನ್ ಕ್ಲಿಕ್ ಮಾಡಿದ ಬಳಿಕ ನಿಮ್ಮ ಪಿಎಂ ಕಿಸಾನ್ ಇ-ಕೆವೈಸಿ ಯಶಸ್ವಿಯಾಗುತ್ತದೆ
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications