ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಒಂದು ಯೋಜನೆಯು ನಿರ್ದಿಷ್ಟವಾಗಿ ಒಂದು ಸಮುದಾಯಕ್ಕಾಗಿ ಕೇಂದ್ರ ಸರ್ಕಾರವು ಜಾರಿ ಮಾಡಿರುತ್ತದೆ. ಶಿಶುವಿನಿಂದ ಹಿಡಿದು ಹಿರಿಯ ನಾಗರಿಕರವರೆಗೂ ಕೇಂದ್ರ ಸರ್ಕಾರದ ಯೋಜನೆಯಿದೆ. ಅದರಂತೆಯೇ ಗರ್ಭಿಣಿಯರಿಗೆ ಆರ್ಥಿಕ ಸಹಾಯ ಮಾಡುವ ನಿಟ್ಟಿನಲ್ಲಿಯೂ ಕೇಂದ್ರ ಸರ್ಕಾರ ಯೋಜನೆಯೊಂದನ್ನು ಜಾರಿ ಮಾಡಿದೆ.
ಈ ಯೋಜನೆ ಮೂಲಕ ಜನರು ಹಣಕಾಸು ಸಹಾಯವನ್ನು ಪಡೆಯಲು ಸಾಧ್ಯವಾಗುತ್ತದೆ. ನೇರವಾಗಿ ಅಥವಾ ಸಾಲದ ಮೂಲಕ ನೀವು ಯೋಜನೆಯ ಮೊತ್ತವನ್ನು ಪಡೆಯಬಹುದು. ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಜಾರಿ ಮಾಡಿರುವ ಈ ಯೋಜನೆಯಲ್ಲಿ ಗರ್ಭಿಣಿಯರು ಆರು ಸಾವಿರ ರೂಪಾಯಿಯನ್ನು ಪಡೆಯಬಹುದು.
ಪ್ರಮುಖವಾಗಿ ಶಿಶುವಿನ ಆರೋಗ್ಯಕ್ಕಾಗಿ, ಗರ್ಭಿಣಿಯರ ಚಿಕಿತ್ಸೆಗಾಗಿ ಈ ಆರು ಸಾವಿರ ರೂಪಾಯಿಯನ್ನು ಸರ್ಕಾರವು ನೀಡುತ್ತದೆ. ಈ ಯೋಜನೆಯನ್ನು ಶಿಶುವಿನ ಆರ್ಥಿಕ ಸುರಕ್ಷತೆಗಾಗಿ ಆರಂಭ ಮಾಡಲಾಗಿದೆ. ಆರು ಸಾವಿರ ರೂಪಾಯಿಯನ್ನು ಪಡೆಯುವುದು ಹೇಗೆ, ಈ ಯೋಜನೆಯ ಬಗ್ಗೆ ಇಲ್ಲಿದೆ ಅಧಿಕ ಮಾಹಿತಿ ಮುಂದೆ ಓದಿ...
ಅರ್ಹತೆ ಏನು, ಯೋಜನೆ ಬಗ್ಗೆ ಮಾಹಿತಿ
ಪ್ರಮುಖವಾಗಿ ಕಡಿಮೆ ಆದಾಯವಿರುವ ಕುಟುಂಬಕ್ಕೆ ಸೇರಿದ ಮಹಿಳೆಯರು ಮಾತ್ರ ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯ. ಜನನಿ ಸುರಕ್ಷ ಯೋಜನೆಯಡಿಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಗರ್ಭಿಣಿ ಮಹಿಳೆಯರು ಆರ್ಥಿಕ ಸಹಾಯವನ್ನು ಪಡೆಯಬಹುದು. ಸರ್ಕಾರದಿಂದ ಪರವಾನಗಿ ಪಡೆದಿರುವ ಖಾಸಗಿ ಆಸ್ಪತ್ರೆಗಳು, ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಯೋಜನೆಯಿದೆ. ಬೇರೆ ಆಸ್ಪತ್ರೆಗಳಲ್ಲಿ ಶಿಶುವಿಗೆ ಜನನ ನೀಡಿದರೆ ಈ ಯೋಜನೆಯು ಅನ್ವಯವಾಗುವುದಿಲ್ಲ. ಇದನ್ನು ಹೊರತುಪಡಿಸಿ ಪ್ರಧಾನ ಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದಡಿಯಲ್ಲಿ 1ನೇ ತಿಂಗಳಿನಿಂದ 9ನೇ ತಿಂಗಳವರೆಗೆ ಚಿಕಿತ್ಸೆಯನ್ನು ಪಡೆಯಬಹುದು.
ಬೇಕಾದ ದಾಖಲೆಗಳು ಯಾವುದು?
ಜನನಿ ಸುರಕ್ಷ ಯೋಜನೆಯ ಫಲಾನುಭವಿಗಳು ಬ್ಯಾಂಕ್ ಖಾತೆಯನ್ನು ಹೊಂದಿರಬೇಕಾಗುತ್ತದೆ. ಹಾಗೆಯೇ ಆಧಾರ್ ಕಾರ್ಡ್, ವೋಟರ್ ಐಡಿ, ಶಿಶುವಿನ ಜನನ ಪ್ರಮಾಣಪತ್ರವನ್ನು ಹೊಂದಿರಬೇಕಾಗುತ್ತದೆ. ಈ ಯೋಜನೆಯ ಅರ್ಜಿಯೊಂದಿಗೆ ಈ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಈ ಅರ್ಜಿ ಅನುಮೋದನೆಯಾದ ಬಳಿಕವೇ ಯೋಜನೆಯ ಫಲಾನುಭವ ನಿಮಗೆ ಲಭ್ಯವಾಗಲಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ನೀವು ಆಶಾಗಳ ಸಹಾಯದ ಮೂಲಕ ಈ ಯೋಜನೆಯ ಫಲಾನುಭವವನ್ನು ಪಡೆಯಬಹುದು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಪ್ರಯೋಜನ ಲಭ್ಯವಾಗುವಂತೆ ಮಾಡುವುದು ಆಶಾ ಕಾರ್ಯಕರ್ತರ ಜವಾಬ್ದಾರಿಯಾಗಿರುತ್ತದೆ. ಡೇಟ್ ಅಪ್ಡೇಟ್ ಮಾಡುವುದು, ಗರ್ಭಿಣಿಯರಿಗೆ ಅಥವಾ ಬಾಣಂತಿಯರಿಗೆ ಈ ಬಗ್ಗೆ ಮಾಹಿತಿ ನೀಡುವುದು ಆಶಾ ಕಾರ್ಯಕರ್ತರ ಜವಾಬ್ದಾರಿಯಾಗಿದೆ. ಯಾರಿಗೆ ಈ ಯೋಜನೆಯ ಲಾಭವನ್ನು ಪಡೆಯಬೇಕೋ ಅವರು ಗ್ರಾಮ ಪಂಚಾಯತ್ ಮೂಲಕ ಆಶಾ ಕಾರ್ಯಕರ್ತೆಯರನ್ನು ಸಂಪರ್ಕ ಮಾಡಬಹುದು. ಹಾಗೆಯೇ ಗ್ರಾಮದ ಮುಖ್ಯಸ್ಥರು ಕೂಡಾ ಆಶಾ ಕಾರ್ಯಕರ್ತೆಯರಿಗೆ ಈ ಬಗ್ಗೆ ಮಾಹಿತಿ ನೀಡಬಹುದು.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!



Click it and Unblock the Notifications