Ram Mandir Pran Pratishtha: ಜನವರಿ 22ರಂದು ರಿಲಯನ್ಸ್ ಕಚೇರಿಗಳಿಗೆ ರಜೆ ಘೋಷಿಸಿದ ಅಂಬಾನಿ

ಜನವರಿ 22, 2024 ರಂದು ಬಹುನಿರೀಕ್ಷಿತ ರಾಮಮಂದಿರ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಅದಾದ ಬಳಿಕ ಭವ್ಯವಾದ ರಾಮಮಂದಿರದ ಉದ್ಘಾಟನೆಯಾಗಲಿದೆ. ಇಡೀ ದೇಶ ಮತ್ತು ವಿದೇಶದಲ್ಲಿರುವ ಭಾರತೀಯರು ಸಹ ಉತ್ಸುಕರಾಗಿದ್ದಾರೆ. ಹಲವಾರು ಕಚೇರಿಗಳು ಈ ದಿನ ರಜೆಯನ್ನು ಘೋಷಿಸಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರು ಪಾಲ್ಗೊಳ್ಳುವ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಮುನ್ನ, ಗಣ್ಯ ಅತಿಥಿಗಳಲ್ಲಿ ಒಬ್ಬರಾದ ಮತ್ತು ಉದ್ಯಮಿಯಾದ ಮುಕೇಶ್ ಅಂಬಾನಿ ಅತೀ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರು ಪ್ರಾಣ ಪ್ರತಿಷ್ಠೆಯ ಸಂದರ್ಭದಲ್ಲಿ ಜನವರಿ 22 ರಂದು ಎಲ್ಲಾ ರಿಲಯನ್ಸ್ ಕಚೇರಿಗಳಿಗೆ ರಜೆ ಘೋಷಿಸಿದ್ದಾರೆ. ಈ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ....

 ಜನವರಿ 22ರಂದು ರಿಲಯನ್ಸ್ ಕಚೇರಿಗಳಿಗೆ ರಜೆ ಘೋಷಿಸಿದ ಅಂಬಾನಿ

ಎಲ್ಲ ಕಚೇರಿಗೆ ರಜೆ ಘೋಷಿಸಿದ ಅಂಬಾನಿ

ಉದ್ಯಮಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್‌ನ ಎಂಡಿ ಮುಕೇಶ್ ಅಂಬಾನಿ ಅವರು ತಮ್ಮ ಎಲ್ಲಾ ಉದ್ಯೋಗಿಗಳಿಗೆ ರಿಲಯನ್ಸ್ ಇಂಡಸ್ಟ್ರೀಸ್‌ನ ಎಲ್ಲಾ ಕಚೇರಿಗಳಲ್ಲಿ ಜನವರಿ 22, 2024 ರಂದು ರಜೆ ಘೋಷಿಸಿದ್ದಾರೆ. ಜನವರಿ 22 ರಾಮಮಂದಿರ ಪ್ರಾಣ ಪ್ರತಿಷ್ಠೆಯ ದಿನ ಜನವರಿ 22 ರಂದು ಸಾರ್ವಜನಿಕ ರಜೆ ಘೋಷಿಸುವ ಮಹಾರಾಷ್ಟ್ರ ಸರ್ಕಾರದ ಘೋಷಣೆಯ ನಂತರ ಅಂಬಾನಿ ಈ ಘೋಷಣೆಯನ್ನು ಮಾಡಿದ್ದಾರೆ.

ಜನವರಿ 22 ಕ್ಕೆ ರಜೆಯನ್ನು ಘೋಷಣೆ ಮಾಡುವ ಮೊದಲು, ಕಂಪನಿಯು 2023-24 ಹಣಕಾಸು ವರ್ಷದ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕ ಫಲಿತಾಂಶಗಳನ್ನು ಬಹಿರಂಗಪಡಿಸಿದೆ. ಕಂಪನಿಯು 17,706 ಕೋಟಿ ರೂಪಾಯಿಗಳಿಂದ 19,641 ಕೋಟಿ ರೂಪಾಯಿಗೆ ಏಕೀಕೃತ ನಿವ್ವಳ ಲಾಭವು ಶೇಕಡ 11 ರಷ್ಟು ಹೆಚ್ಚಳವನ್ನು ಘೋಷಿಸಿದೆ.

ಜನವರಿ 22 ರಂದು ರಜೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ರಾಮಮಂದಿರ ಪ್ರಾಣ ಪ್ರತಿಷ್ಠೆಯ ಮುನ್ನ, ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ-ಬಿಜೆಪಿ ಸರ್ಕಾರವು ಜನವರಿ 22, 2024 ರಂದು ಸಾರ್ವಜನಿಕ ರಜೆಯನ್ನು ಘೋಷಿಸಿದೆ. ರಾಜ್ಯ ಸರ್ಕಾರವು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಜನವರಿ 22 ರಂದು ಸಾರ್ವಜನಿಕ ರಜಾದಿನವಾಗಿದೆ.

ದೇಶಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಸಂಸ್ಥೆಗಳು ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ಅರ್ಧ ದಿನದ ರಜೆಯನ್ನು ಕೇಂದ್ರವು ಈಗಾಗಲೇ ಘೋಷಿಸಿದೆ. ಜನವರಿ 22, 2024 ಕ್ಕೆ ಮಧ್ಯಪ್ರದೇಶ ಸರ್ಕಾರವು ಎಲ್ಲಾ ಕಚೇರಿಗಳಿಗೆ ಅರ್ಧ ದಿನದ ರಜೆಯನ್ನು ಘೋಷಿಸಿದೆ. ಉತ್ತರ ಪ್ರದೇಶ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ಗೋವಾ ಸೇರಿದಂತೆ ಹಲವು ರಾಜ್ಯಗಳು ರಾಮಮಂದಿರ ಪ್ರಾಣ ಪ್ರತಿಷ್ಠೆಯ ನಿಮಿತ್ತ ಎಲ್ಲಾ ಶಾಲಾ-ಕಾಲೇಜುಗಳಿಗೆ, ಅಂದರೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ.

ಪ್ರಧಾನಿ ಮೋದಿ ವೇಳಾಪಟ್ಟಿ

ರಾಮಮಂದಿರ ಪ್ರಾಣ ಪ್ರತಿಷ್ಠೆಯ ಸಿದ್ಧತೆಗಳು ಭರದಿಂದ ಸಾಗಿವೆ. ಈ ಮೆಗಾ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಜನವರಿ 22, 2024 ರ ಪ್ರಧಾನಿ ಮೋದಿಯವರ ವಿವರವಾದ, ಸಂಪೂರ್ಣ ವೇಳಾಪಟ್ಟಿಯನ್ನು ನೋಡೋಣ..

  • ಬೆಳಿಗ್ಗೆ 10:25: ಅಯೋಧ್ಯೆಯ ನೂತನ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.
  • ಬೆಳಿಗ್ಗೆ 10:45: ಅಯೋಧ್ಯೆಯ ಹೆಲಿಪ್ಯಾಡ್‌ಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.
  • ಬೆಳಿಗ್ಗೆ 10:55: ಪ್ರಾಣ ಪ್ರತಿಷ್ಠೆ ಅಥವಾ ಪ್ರತಿಷ್ಠಾಪನಾ ಸಮಾರಂಭಕ್ಕಾಗಿ ಪ್ರಧಾನ ಮಂತ್ರಿ ಶ್ರೀರಾಮ ಜನ್ಮಭೂಮಿಯನ್ನು ತಲುಪುವ ಸಮಯ.
  • ಮಧ್ಯಾಹ್ನ 12:05 - 12:55: ನಿರೀಕ್ಷಿತ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭವು ಈ ಸಮಯದಲ್ಲಿ ನಡೆಯಲಿದೆ.
  • ಮಧ್ಯಾಹ್ನ 12:55: ಮಹಾಮಸ್ತಕಾಭಿಷೇಕ ಪೂರ್ಣಗೊಂಡ ನಂತರ, ಪ್ರಧಾನಿ ಮೋದಿ ಸಾರ್ವಜನಿಕ ಕಾರ್ಯಕ್ರಮಕ್ಕೆ ತೆರಳಲು ಪೂಜಾ ಸ್ಥಳದಿಂದ ಹೊರಡಲಿದ್ದಾರೆ.
  • ಮಧ್ಯಾಹ್ನ 1:00: ಸಾರ್ವಜನಿಕ ಕಾರ್ಯಕ್ರಮದ ಸ್ಥಳಕ್ಕೆ ಪ್ರಧಾನಿ ಆಗಮಿಸಲಿದ್ದು, ಅಲ್ಲಿ ಅವರು ಭಕ್ತರೊಂದಿಗೆ ಸಂವಾದ ನಡೆಸಲಿದ್ದಾರೆ.
  • ಮಧ್ಯಾಹ್ನ 1:00 - 2:00: ಇದು ಒಂದು ಗಂಟೆಯ ಅವಧಿಯಾಗಿದ್ದು, ಪ್ರಧಾನಿ ಮೋದಿ ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ನಗರದಲ್ಲಿ ಇರುವ ಜನರೊಂದಿಗೆ ಸಂವಾದಿಸುತ್ತಾರೆ.
  • ಮಧ್ಯಾಹ್ನ 2:10: ಮಹಾಮಸ್ತಕಾಭಿಷೇಕ ಮತ್ತು ಸಾರ್ವಜನಿಕ ಕಾರ್ಯಕ್ರಮದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯ ಕುಬೇರ್ ತಿಲಾ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ಪ್ರಾಣ್ ಪ್ರತಿಷ್ಠಾ ಅತಿಥಿಗಳ ಪಟ್ಟಿಯಲ್ಲಿ ಎಲ್‌ಕೆ ಅಡ್ವಾಣಿ, ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ, ಮುಕೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಅವರಂತಹ ಉದ್ಯಮಿಗಳು ಮತ್ತು ರಾಮ್ ಚರಣ್, ರಣಬೀರ್ ಕಪೂರ್, ಆಲಿಯಾ ಭಟ್ ಮತ್ತು ಆಯುಷ್ಮಾನ್ ಖುರಾನಾ ಅವರಂತಹ ಚಿತ್ರರಂಗದ ಗಣ್ಯರು ಇದ್ದಾರೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+