ದೇಶದಲ್ಲಿ ಅತೀ ದೊಡ್ಡ ಬ್ಯಾಂಕ್ಗಳ ಪೈಕಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಕೂಡಾ ಒಂದಾಗಿದೆ. ಈ ಸಾರ್ವಜನಿಕ ವಲಯದ ಬ್ಯಾಂಕ್ ಜನರಿಗೆ ಹಲವಾರು ಡಿಜಿಟಲ್ ಸ್ವರೂಪದ ಆಯ್ಕೆಗಳನ್ನು ನೀಡುತ್ತಾ ಬಂದಿದೆ. ಜನರಿಗೆ ಎಲ್ಲ ಕಾರ್ಯವು ಸುಲಭವಾಗುವಂತೆ ಎಸ್ಬಿಐ ಮಾಡಿದೆ. ಎಲ್ಲಾ ವಹಿವಾಟುಗಳ ಮೇಲೆ ನಿಗಾ ಇಡಬೇಕಾದರೆ, ಎಲ್ಲ ಗ್ರಾಹಕರು ತಮ್ಮ ಮೊಬೈಲ್ ಫೋನ್ ಸಂಖ್ಯೆಯನ್ನು ಉಳಿತಾಯ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಬೇಕಾಗುತ್ತದೆ.
ಇದಲ್ಲದೆ, ಬ್ಯಾಂಕ್ ಖಾತೆಯಲ್ಲಿ ಅನಧಿಕೃತ ವಹಿವಾಟು ನಡೆದಾಗ ಕೂಡಲೇ ಮಾಹಿತಿ ಲಭ್ಯವಾಗುತ್ತದೆ. ಆದ್ದರಿಂದ, ಇಂಟರ್ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ಪಡೆಯಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಉಳಿತಾಯ ಬ್ಯಾಂಕ್ ಖಾತೆಯಲ್ಲಿ ಮೊಬೈಲ್ ಫೋನ್ ಸಂಖ್ಯೆಯನ್ನು ನೋಂದಾಯಿಸುವುದು ಕಡ್ಡಾಯವಾಗಿದೆ. ಆದರೆ ಎಸ್ಬಿಐ ಬ್ಯಾಂಕ್ ಖಾತೆಗೆ ಮೊಬೈಲ್ ನಂಬರ್ ಅಪ್ಡೇಟ್ ಮಾಡುವುದು ಹೇಗೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ ಮುಂದೆ ಓದಿ...

ಇಂಟರ್ನೆಟ್ ಬ್ಯಾಂಕಿಂಗ್ನಲ್ಲಿ ಮೊಬೈಲ್ ಸಂಖ್ಯೆ ಅಪ್ಡೇಟ್ ಮಾಡಿ
ಹಂತ 1: www.onlinesbi.com ಗೆ ಲಾಗಿನ್ ಆಗಿ
ಹಂತ 2: My Accounts ಅಡಿಯಲ್ಲಿನ Profile-Personal Details-Change mobile No ಮೇಲೆ ಕ್ಲಿಕ್ ಮಾಡಿ
ಹಂತ 3: ಮುಂದಿನ ಪೇಜ್ನಲ್ಲಿ ಖಾತೆ ಸಂಖ್ಯೆಯನ್ನು ಆಯ್ಕೆ ಮಾಡಿ, ಮೊಬೈಲ್ ಸಂಖ್ಯೆ ನಮೂದಿಸಿ
ಹಂತ 4: ಮೊಬೈಲ್ ಸಂಖ್ಯೆ ನಮೂದಿಸಿದ ಬಳಿಕ Submit ಮಾಡಿ
ಹಂತ 5: ರಿಜಿಸ್ಟಾರ್ ಆದ ಮೊಬೈಲ್ ಸಂಖ್ಯೆಯ ಕೊನೆಯ ಎರಡು ಡಿಜಿಟ್ ಡಿಸ್ಪ್ಲೇ ಆಗಲಿದೆ
ಹಂತ 6: ನಿಮ್ಮ ಖಾತೆಯಲ್ಲಿ ಯಾವುದೇ ಅವ್ಯವಹಾರ ಉಂಟಾದರೆ ನಿಮಗೆ ಮಾಹಿತಿ ಲಭ್ಯವಾಗಲಿದೆ.
ಎಸ್ಬಿಐ ಬ್ರಾಂಚ್ನಲ್ಲಿ ಮೊಬೈಲ್ ನಂಬರ್ ಅಪ್ಡೇಟ್
ಹಂತ 1: ಸಮೀಪದ ಎಸ್ಬಿಐ ಬ್ರ್ಯಾಂಚ್ಗೆ ಭೇಟಿ ನೀಡಿ
ಹಂತ 2: ರಿಕ್ವೆಸ್ಟ್ ಪತ್ರವನ್ನು ಭರ್ತಿ ಮಾಡಿ
ಹಂತ 3: ಪತ್ರವನ್ನು ಭರ್ತಿ ಮಾಡಿ ಬಳಿಕ ಅದನ್ನು ಬ್ಯಾಂಕ್ನಲ್ಲಿ ನೀಡಿ
ಹಂತ 4: ವೆರಿಫಿಕೇಷನ್ ಬಳಿಕ ನಿಮ್ಮ ಮೊಬೈಲ್ ನಂಬರ್ ಖಾತೆಗೆ ಅಪ್ಡೇಟ್ ಆಗಲಿದೆ
ಹಂತ 5: ಇದಾದ ಬಳಿಕ ನಿಮ್ಮ ರಿಜಿಸ್ಟಾರ್ ಆದ ಮೊಬೈಲ್ ಸಂಖ್ಯೆಗೆ ಈ ಬಗ್ಗೆ ಎಸ್ಎಂಎಸ್ ಲಭ್ಯವಾಗಲಿದೆ.
ಎಟಿಎಂನಲ್ಲಿ ಮೊಬೈಲ್ ಸಂಖ್ಯೆ ಅಪ್ಡೇಟ್ ಮಾಡಿ
ಹಂತ 1: ನಿಮ್ಮ ಸಮೀಪದ ಎಟಿಎಂಗೆ ಭೇಟಿ ನೀಡಿ
ಹಂತ 2: ರಿಜಿಸ್ಟ್ರೇಷನ್ ಆಯ್ಕೆಯನ್ನು ಮಾಡಿ
ಹಂತ 3: ಎಟಿಎಂ ಪಿನ್ ಅನ್ನು ನಮೂದಿಸಿ
ಹಂತ 4: ಮೊಬೈಲ್ ನಂಬರ್ ರಿಜಿಸ್ಟ್ರೇಚನ್ ಆಯ್ಕೆ ಮಾಡಿ
ಹಂತ 5: Change Mobile Number ಆಯ್ಕೆಯನ್ನು ಮಾಡಿ
ಹಂತ 6: ನಿಮ್ಮ ಹಳೆಯ ಮೊಬೈಲ್ ಸಂಖ್ಯೆಯನ್ನು ನಮೂದಿಸಿ confirm ಮಾಡಬೇಕಾಗುತ್ತದೆ.
ಹಂತ 7: ಹೊಸ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಅದನ್ನು confirm ಮಾಡಿ
ಹಂತ 8: ಹೊಸ ಹಾಗೂ ಹಳೆಯ ಮೊಬೈಲ್ ಸಂಖ್ಯೆಗೆ ಒಟಿಪಿಗಳು ಕಳುಹಿಸಲಾಗುತ್ತದೆ.
ಹಂತ 9: ಒಟಿಪಿ ಅನ್ನು ನಮೂದಿಸಿ, ಮೊಬೈಲ್ ನಂಬರ್ ಅನ್ನು ಅಪ್ಡೇಟ್ ಮಾಡಲಾಗುತ್ತದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ

Vande Bharat: ಸುಂದರ ನೋಟ, ವೇಗದ ಸೇವೆ; ವಂದೇ ಭಾರತ್ ರೈಲಿನ ವಿಶೇಷ ಮಾರ್ಗಗಳಿವು!



Click it and Unblock the Notifications