ಪ್ರಧಾನ ಮಂತ್ರಿ ಜನ-ಧನ ಯೋಜನೆ (ಪಿಎಂಜೆಡಿವೈ) ಕೇಂದ್ರ ಸರ್ಕಾರದ ಹಣಕಾಸು ಯೋಜನೆಯಾಗಿದೆ. ಇದು ಪ್ರಮುಖವಾಗಿ ಮಹಿಳೆಯರಿಗೆ ಧನ ಸಹಾಯ ಮಾಡುವ ನಿಟ್ಟಿನಲ್ಲಿ ಆರಂಭ ಮಾಡಲಾದ ಯೋಜನೆಯಾಗಿದೆ. ಇದರಲ್ಲಿ ವಿಶೇಷ ಪ್ರಯೋಜನಗಳು ಇದೆ. ನೀವು ಮಿಸ್ ಮಾಡ್ಕೋಬೇಡಿ.
2014ರಲ್ಲಿ ಪ್ರಧಾನ ಮಂತ್ರಿ ನರೇದ್ರ ಮೋದಿ ಈ ಯೋಜನೆಯನ್ನು ಆರಂಭ ಮಾಡಿದ್ದಾರೆ. ಎಲ್ಲಾ ಜನರು ಬ್ಯಾಂಕ್ ಖಾತೆಯನ್ನು ಹೊಂದಿರಬೇಕು ಎಂಬುವುದು ಇದರ ಮುಖ್ಯ ಉದ್ದೇಶವಾಗಿದೆ. ಪಿಎಂಜೆಡಿವೈ ಮೂಲಕ ಜನರು ಬ್ಯಾಂಕಿಂಗ್, ಉಳಿತಾಯ, ಠೇವಣಿ ಖಾತೆ, ಹಣ ರವಾನೆ, ಪಿಂಚಣಿ, ಕ್ರೆಡಿಟ್ ವಿಮೆ ಮಾಡಲಾಗುತ್ತದೆ. ನಾವು ಯಾವುದೇ ಬ್ಯಾಂಕ್ನಲ್ಲಿ ಪ್ರಧಾನ ಮಂತ್ರಿ ಜನ-ಧನ ಯೋಜನೆ ಖಾತೆಯನ್ನು ತೆರೆಯಬಹುದಾಗಿದೆ.
ಈ ಖಾತೆಗೆ ಯಾವುದೇ ಕನಿಷ್ಠ ಮಿತಿ ಇಲ್ಲ. ಹಾಗೆಯೇ ಈ ಖಾತೆಗೂ ಕೂಡಾ ಸಾಮಾನ್ಯ ಉಳಿತಾಯ ಖಾತೆಯಂತೆ ಬಡ್ಡಿದರವನ್ನು ಜಮೆ ಮಾಡಲಾಗುತ್ತದೆ. ವಾರ್ಷಿಕವಾಗಿ ಶೇಕಡ 3ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ. ಆದರೆ ಈ ಖಾತೆಗೆ ಚೆಕ್ ಬುಕ್ ಅನ್ನು ನೀಡಲಾಗುವುದಿಲ್ಲ. ಈ ಯೋಜನೆಯಲ್ಲಿ ಏನೆಲ್ಲ ವಿಶೇಷ ಪ್ರಯೋಜನ ಇದೆ, ಯಾರೆಲ್ಲಾ ಈ ಖಾತೆಯನ್ನು ತೆರೆಯಬಹುದು ಎಂಬ ಬಗ್ಗೆ ಇಲ್ಲಿದೆ ಮಾಹಿತಿ ಮುಂದೆ ಓದಿ...
ಸ್ವಾಭಿಮಾನ ಯೋಜನೆಗಿಂತ ಪಿಎಂ ಜನ-ಧನ ಯೋಜನೆ ಹೇಗೆ ಭಿನ್ನ
ಆರಂಭದಲ್ಲಿ ಈ ಯೋಜನೆಯು ಗ್ರಾಮೀಣ ಜನರ ಮೇಲೆ ಕೇಂದ್ರೀಕರಿಸಿತ್ತು. ಆದರೆ ಈಗ ಎಲ್ಲಾ ವಯಸ್ಕ ಜನರ ಮೇಲೆ ಕೇಂದ್ರೀಕರಿಸಿದೆ. ಇದು ಗ್ರಾಮೀಣ ಹಾಗೂ ನಗರದ ಜನರ ಮೇಲೆ ಕೇಂದ್ರೀಕರಿಸಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ವೆಬ್ಸೈಟ್ ಪ್ರಕಾರ ದೇಶದ ಎಲ್ಲಾ ವಯಸ್ಕರು ಬ್ಯಾಂಕ್ ಖಾತೆಯನ್ನು ಹೊಂದುವಂತೆ ನೋಡಿಕೊಳ್ಳುವುದು ಇದರ ಗುರಿಯಾಗಿದೆ. ಈ ಹಿಂದೆ ಎಲ್ಲ ಮನೆಗೂ ಒಂದು ಬ್ಯಾಂಕ್ ಖಾತೆ ಇರಬೇಕು ಎಂಬ ಗುರಿಯನ್ನು ಹೊಂದಲಾಗಿತ್ತು. ಆದರೆ ಈಗ ಎಲ್ಲ ವಯಸ್ಕರು ಬ್ಯಾಂಕ್ ಖಾತೆಯನ್ನು ಹೊಂದಿರಬೇಕು ಎಂಬ ಉದ್ದೇಶವನ್ನು ಹೊಂದಲಾಗಿದೆ.
ಪಿಎಂಜಿಡಿವೈ ಖಾತೆಯನ್ನು ಯಾರು ತೆರೆಯಬಹುದು?
ಯಾವುದೇ ವ್ಯಕ್ತಿಯು ಪ್ರಧಾನ ಮಂತ್ರಿ ಜನ ಧನ ಯೋಜನೆಯ ಅಡಿಯಲ್ಲಿ ಖಾತೆಯನ್ನು ತೆರೆಯಬಹುದು. ಇದಕ್ಕೆ ಯಾವುದೇ ವಯಸ್ಸಿನ ಮಿತಿ ಇಲ್ಲ. ನೀವು ವ್ಯಾಪಾರ ಖಾತೆಯನ್ನು ಹೊಂದುವುದಾದರೆ ಮಾತ್ರ ಅದಕ್ಕೆ 10 ವರ್ಷ ಅಥವಾ ಅದಕ್ಕಿಂತ ಅಧಿಕ ವಯಸ್ಸಿನ ಮಿತಿ ಇದೆ. ಇನ್ನು ಪ್ರಧಾನ ಮಂತ್ರಿ ಜನ ಧನ ಯೋಜನೆಯ ಅಡಿಯಲ್ಲಿ ನೀವು ಜಂಟಿ ಖಾತೆಯನ್ನು ಕೂಡಾ ತೆರೆಯುವ ಅವಕಾಶವಿದೆ. ಯಾವುದೇ ಬ್ರಾಂಚ್ನಲ್ಲಿ ಜಂಟಿ ಖಾತೆಯನ್ನು ತೆರೆಯಬಹುದು.
ಯಾವೆಲ್ಲಾ ವಿಶೇಷ ಪ್ರಯೋಜನವಿದೆ?
ಪ್ರಧಾನ ಮಂತ್ರಿ ಜನ ಧನ ಯೋಜನೆಯಲ್ಲಿ ನೇರ ಹಾಗೂ ವಿಶೇಷ ಪ್ರಯೋಜನಗಳು ಇದೆ. ಆ ಪ್ರಯೋಜನಗಳನ್ನು ನಾವು ಈ ಕೆಳಗೆ ಪಟ್ಟಿ ಮಾಡಿದ್ದೇವೆ.
1. ಪಿಎಂಜೆಡಿವೈ ಅಡಿಯಲ್ಲಿ ಬ್ಯಾಂಕ್ನಲ್ಲಿ ತೆರೆಯಲಾಗುವ ಖಾತೆಯಲ್ಲಿ ಡೆಪಾಸಿಟ್ ಮಾಡಲಾಗುವ ಹಣದ ಮೇಲೆ ಬಡ್ಡಿದರ ಲಭ್ಯವಾಗಲಿದೆ.
2. 1 ಲಕ್ಷದವರೆಗೆ ನೀವು ಅಪಘಾತ ವಿಮೆಯನ್ನು ನೀವು ಪಡೆಯಬಹುದು. 28.08.2018ರ ಬಳಿಕ ತೆರೆದ ಖಾತೆಗೆ 2 ಲಕ್ಷ ರೂಪಾಯಿ ವಿಮೆಯನ್ನು ಕೋರುವ ಅವಕಾಶವಿದೆ.
3. ಯಾವುದೇ ಕನಿಷ್ಠ ಬ್ಯಾಲೆನ್ಸ್ ಮಿತಿ ಇಲ್ಲ. ಜಿರೋ ಅಮೌಂಟ್ ಅಕೌಂಟ್ ಇದಾಗಿದೆ.
4. ಭಾರತದಾದ್ಯಂತ ಹಣವನ್ನು ಸುಲಭವಾಗಿ ವರ್ಗಾವಣೆ ಮಾಡುವ ಅವಕಾಶ ನೀಡುತ್ತದೆ. ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯುವವರಿಗೆ ಈ ಖಾತೆಗೆ ನೇರವಾಗಿ ಹಣ ಜಮೆ ಆಗಲಿದೆ.
5. ಆರು ತಿಂಗಳುಗಳ ಕಾಲ ಈ ಖಾತೆಯಲ್ಲಿ ಯಶಸ್ವಿ ವಹಿವಾಟು ನಡೆದರೆ, ಓವರ್ಡ್ರಾಫ್ಟ್ ಸೌಲಭ್ಯ ಲಭ್ಯವಾಗಲಿದೆ. ಇದಕ್ಕೆ ಅರ್ಹತಾ ಮಾನದಂಡವಿದೆ.
6. ಪಿಂಚಣಿ ಹಾಗೂ ವಿಮೆಯ ಮೊತ್ತ ಈ ಖಾತೆಗೆ ಜಮೆ ಆಗಲಿದೆ.
More From GoodReturns

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!



Click it and Unblock the Notifications