ರಾಜೀವ್ ಸಬರ್ವಾಲ್ ಅವರು ಟಾಟಾ ಕ್ಯಾಪಿಟಲ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಿಇಒ ಆಗಿದ್ದಾರೆ. 2018 ರ ಜನವರಿಂದ ಅವರು ಕಂಪನಿಯನ್ನು ಮುನ್ನಡೆಸುತ್ತಿದ್ದಾರೆ. ಸಬರ್ವಾಲ್ ಅವರು ಬ್ಯಾಂಕಿಂಗ್ ಹಾಗೂ ಹಣಕಾಸು ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುಮಾರು 28 ವರ್ಷಗಳ ಅನುಭವ ಹೊಂದಿದ್ದಾರೆ. ಟಾಟಾ ಕ್ಯಾಪಿಟಲ್, ಟಾಟಾ ಗ್ರೂಪ್ನ ಜನಪ್ರಿಯ ಹಣಕಾಸು ವ್ಯವಹಾರ ಸೇವೆಯಾಗಿದೆ.
ಕಳೆದ ಸೆಪ್ಟಂಬರ್ ತಿಂಗಳಿನಲ್ಲಿ ಕಂಪನಿಯು ಭಾರತೀಯ ಯುವ ಕ್ರಿಕೆಟರ್ ಶುಭಮನ್ ಗಿಲ್ ಅವರನ್ನು ತನ್ನ ಅಧಿಕೃತ ರಾಯಭಾರಿಯನ್ನಾಗಿ ನೇಮಕಗೊಳಿಸಿದೆ. ಸಬರ್ವಾಲ್ ಅವರು ದಿಲ್ಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯಿಂದ ಮೆಕ್ಯಾನಿಲ್ ಎಂಜಿನಿಯರಿಂಗ್(ಬಿ-ಟೆಕ್)ನಲ್ಲಿ ಪದವಿಯನ್ನು ಪಡೆದುಕೊಂಡಿದ್ದಾರೆ.

ಸಬರ್ವಾಲ್ ಅವರು ಲಕ್ನೋದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ನಿಂದ ಮ್ಯಾನೇಜ್ಮೆಂಟ್ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದಾರೆ. ಟಾಟಾ ಕ್ಯಾಪಿಟಲ್ ಕಂಪನಿಗೆ ಸೇರುವ ಮೊದಲು ಅವರು ಬಿಲ್ಡಿಂಗ್ ಹಾಗೂ ಹಣಕಾಸು ಸೇವೆ ಒದಗಿಸುವ ಟ್ರೂ ನಾರ್ತ್ ಮ್ಯಾನೇಜರ್ಸ್ ಎಲ್ಎಲ್ಪಿ ಕಂಪನಿಯಲ್ಲಿ ಪಾಲುದಾರರಾಗಿದ್ದರು.
ಸಬರ್ವಾಲ್ ಅವರು ದೇಶದ ರಿಟೇಲ್ ಬ್ಯಾಂಕಿಂಗ್, ರಿಯಲ್ ಎಸ್ಟೇಟ್ ಹಾಗೂ ಹೌಸಿಂಗ್ ಫೈನಾನ್ಸ್ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆ ನೀಡಿದ್ದಾರೆ. ಸಬರ್ವಾಲ್ ಅವರು ಈ ಹಿಂದೆ ಐಸಿಐಸಿಐ ಬ್ಯಾಂಕ್ನ ಆಡಳಿತ ಮಂಡಳಿಯಲ್ಲಿ ಕಾರ್ಯಕಾರಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.
ರಿಟೇಲ್ ಬ್ಯಾಂಕಿಂಗ್, ರೂರಲ್ ಬ್ಯಾಂಕಿಂಗ್, ಹಣಕಾಸು ಶಿಕ್ಷಣ, ಆರ್ಥಿಕ ಸೇರ್ಪಡೆ ಬಿಸಿನೆಸ್ ಹಾಗೂ ಡಿಜಿಟಲ್ ಬ್ಯಾಂಕಿಂಗ್ ಟೆಕ್ನಾಲಜಿ ಸೇರಿದಂತೆ ಹಲವಾರು ವ್ಯವಹಾರದ ಜವಾಬ್ದಾರಿಯನ್ನುನಿರ್ವಹಿಸಿದ್ದರು. ಅಲ್ಲದೆ ಅವರು ನಾರ್ತ್ ಮ್ಯಾನೇಜರ್ಸ್ ಎಲ್ಎಸ್ಪಿ, ಸಿಕ್ವೊಯಾ ಕ್ಯಾಪಿಟಲ್, ಗೋದ್ರೇಜ್ ಗ್ರೂಪ್, ಎಸ್ಆರ್ಎಫ್ ಫೈನಾನ್ಸ್, ಜಿಇ ಕ್ಯಾಪಿಟಲ್ ಹಾಗೂ ಟೈಮ್ಸ್ ಬ್ಯಾಂಕ್ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ತಮ್ಮ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
ಸಬರ್ವಾಲ್ ಅವರು ಐಸಿಐಸಿಐ ಹೋಮ್ ಫೈನಾನ್ಸ್ ಕಂಪನಿ ಲಿಮಿಟೆಡ್ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಜತೆಗೆ ಐಸಿಐಸಿಐ ಪ್ರುಡೆನ್ಶಿಯಲ್ ಲೈಫ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ನ ಮಂಡಳಿಯಲ್ಲಿಯೂ ಇದ್ದರು.
ಅವರು ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಹಾಗೂ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ನ ಹಲವಾರು ಸಮಿತಿಗಳಲ್ಲಿಯೂ ಸೇವೆ ಸಲ್ಲಿಸಿದ್ದಾರೆ. ಟಾಟಾ ಕ್ಯಾಪಿಟಲ್ ಹಾಗೂ ತನ್ನ ಅಂಗ ಸಂಸ್ಥೆಗಳ ಮೂಲಕ ಕಮರ್ಷಿಯಲ್ ಫೈನಾನ್ಸ್, ಕನ್ಸೂಮರ್ ಲೋನ್ಸ್ ಸೇರಿದಂತೆ ಹಣಕಾಸು ಸೇವಾ ಕ್ಷೇತ್ರಕ್ಕೆ ಸಂಬಂಧಿಸಿ ನಾನಾ ರೀತಿಯ ಪ್ರಾಡೆಕ್ಟ್- ಸರ್ವೀಸ್ಗಳನ್ನು ಪರಿಚಯಿಸಲಾಗಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!



Click it and Unblock the Notifications