ತಿರುಮಲ ಬೆಟ್ಟದಲ್ಲಿನ ವೆಂಕಟೇಶ್ವರ ಸ್ವಾಮಿ ದೇವಾಲಯವು ವಿಶ್ವದ ಶ್ರೀಮಂತ ಹಿಂದೂ ದೇವಾಲಯಗಳಲ್ಲಿ ಒಂದಾಗಿದೆ. ಶ್ರೀಮಂತಿಕೆಗೆ ಹಾಗೂ ಭಾರೀ ಹುಂಡಿ ಹಣ ಸಂಗ್ರಹದ ಮೂಲಕವೇ ಹೆಸರುವಾಸಿಯಾದ ಈ ದೇವಾಲಯದಲ್ಲಿ 2022ರಲ್ಲಿ ಹುಂಡಿ ಸಂಗ್ರಹವು ಭಾರೀ ಪ್ರಮಾಣದಲ್ಲಿ ಆಗಿದೆ.
ವಿಶ್ವದ ಅತೀ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ತಿರುಮಲ ತಿರುಪತಿ ದೇವಾಲಯದಲ್ಲಿ 2022ರಲ್ಲಿ 1450 ಕೋಟಿ ರೂಪಾಯಿ ಹುಂಡಿಗೆ ಭಕ್ತರು ಹಾಕಿದ ಕಾಣಿಕೆಯ ಮೂಲಕ ಸಂಗ್ರಹವಾಗಿದೆ. ತಿರುಮಲ ತಿರುಪತಿ ದೇವಸ್ಥಾನಂಸ್ನ (ಟಿಟಿಡಿ) ಅಧಿಕಾರಿ ಧರ್ಮ ರೆಡ್ಡಿ ಪ್ರಕಾರ 2022ರಲ್ಲಿ ತಿರುಮಲ ದೇವಾಲಯಕ್ಕೆ ಬರೋಬ್ಬರಿ 2.37 ಕೋಟಿ ಭಕ್ತರು ಆಗಮಿಸಿದ್ದಾರೆ.
2021ರಲ್ಲಿ ದೇವಾಲಯಕ್ಕೆ ಹುಂಡಿಗೆ ಭಕ್ತರು ಹಾಕಿದ ಹಣದ ಮೂಲಕ ಸುಮಾರು 853.41 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿತ್ತು. ಹಾಗೆಯೇ ಸುಮಾರು 1.04 ಕೋಟಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದರು. ಆದರೆ ಈ ವರ್ಷ ಭಕ್ತರ ಸಂಖ್ಯೆಯು ದುಪ್ಪಟ್ಟಾಗಿದೆ. ಹುಂಡಿ ಸಂಗ್ರಹವೂ ಕೂಡಾ ಅಧಿಕವಾಗಿದೆ.
ಟಿಟಿಡಿ ಅಧಿಕಾರಿ ಧರ್ಮ ರೆಡ್ಡಿ ಹೇಳುವುದೇನು?
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ತಿರುಮಲ ತಿರುಪತಿ ದೇವಸ್ಥಾನಂಸ್ನ (ಟಿಟಿಡಿ) ಅಧಿಕಾರಿ ಧರ್ಮ ರೆಡ್ಡಿ, "2022ರಲ್ಲಿ 2.37 ಕೋಟಿ ಭಕ್ತರು ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಆಗಮಿಸಿದ್ದಾರೆ. 1450 ಕೋಟಿ ರೂಪಾಯಿ ಹುಂಡಿ ಸಂಗ್ರಹವಾಗಿದೆ," ಎಂದು ತಿಳಿಸಿದ್ದಾರೆ. ದೇಶದಲ್ಲಿ ಕೊರೊನಾ ಸಾಂಕ್ರಾಮಿಕದಿಂದಾಗಿ ಹಲವಾರು ನಿರ್ಬಂಧಗಳು ಇದ್ದ ಕಾರಣದಿಂದಾಗಿ 2022, 2021ರಲ್ಲಿನ ಹುಂಡಿ ಸಂಗ್ರಹವನ್ನು ನಾವು ತುಲನೆ ಮಾಡಲಾಗದು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಡಿಸೆಂಬರ್ನಲ್ಲಿ ಅಧಿಕ ಹುಂಡಿ ಸಂಗ್ರಹ
2022ರ ಡಿಸೆಂಬರ್ ತಿಂಗಳಿನಲ್ಲೇ ತಿರುಮಲ ತಿರುಪತಿ ದೇವಾಲಯದಲ್ಲಿ ಅಧಿಕ ಹುಂಡಿ ಸಂಗ್ರಹವಾಗಿದೆ. ಡಿಸೆಂಬರ್ನಲ್ಲಿ ಬರೋಬ್ಬರಿ 129.37 ಕೋಟಿ ರೂಪಾಯಿ ಹುಂಡಿ ಸಂಗ್ರಹವಾಗಿದೆ. ಹಾಗೆಯೇ ಈ ತಿಂಗಳಿನಲ್ಲಿ ಬಾಲಾಜಿ ದೇವಾಲಯಕ್ಕೆ 20.25 ಲಕ್ಷ ಜನರು ಭೇಟಿ ನೀಡಿದ್ದಾರೆ. 2023ರ ಜನವರಿ ತಿಂಗಳಲ್ಲಿ 11 ದಿನದಲ್ಲಿ ಸುಮಾರು 6 ಲಕ್ಷ ಮಂದಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಹಾಗೆಯೇ 39.40 ಕೋಟಿ ರೂಪಾಯಿ ಹುಂಡಿ ಸಂಗ್ರಹವಾಗಿದೆ. 2022ರಲ್ಲಿ ಟಿಟಿಡಿ 11.54 ಲಕ್ಷ ಲಡ್ಡು ಪ್ರಸಾದ ಮಾರಾಟ ಮಾಡಿದೆ. ಇದಕ್ಕೂ ಹಿಂದಿನ ವರ್ಷ 5.96 ಲಕ್ಷ ಸಂಗ್ರಹವಾಗಿದೆ.
ವೈಕುಂಠ ಏಕಾದಶಿ ದಿನ ಬರೋಬ್ಬರಿ ಹಣ ಸಂಗ್ರಹ!
ತಿರುಮಲ ತಿರುಪತಿ ದೇವಸ್ಥಾನದಲ್ಲಿ ಹುಂಡಿಗೆ ಭಕ್ತರು ಹಾಕಿದ ಒಂದು ದಿನದ ಹಣವು ಈ ಹಿಂದಿನ ದಾಖಲೆಯನ್ನು ಮುರಿದಿದೆ. ವೈಕುಂಠ ಏಕಾದಶಿ ದಿನವೇ ಸುಮಾರು 7.68 ಕೋಟಿ ರೂಪಾಯಿಯನ್ನು ಜನರು ಹುಂಡಿಗೆ ಹಾಕಿದ್ದಾರೆ. ಈ ಹಿಂದಿನ ದಾಖಲೆಯನ್ನು ಬ್ರೇಕ್ ಮಾಡಲಾಗಿದೆ. ಈ ಹಿಂದೆ ಅಕ್ಟೋಬರ್ 23ರಂದು ಒಂದು ದಿನದಲ್ಲಿಯೇ ತಿರುಮಲ ತಿರುಪತಿ ದೇವಸ್ಥಾನದ ಹುಂಡಿಗೆ 6.31 ಕೋಟಿ ರೂಪಾಯಿ ಹುಂಡಿಗೆ ಹಾಕಿದ್ದಾರೆ. ಒಟ್ಟಾಗಿ 69,414 ಕೋಟಿ ಯಾತ್ರಿಗಳು ದೇವಾಲಯಕ್ಕೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ 7.68 ಕೋಟಿ ರೂಪಾಯಿಯನ್ನು ಜನರು ಹುಂಡಿಗೆ ಹಾಕಿದ್ದಾರೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications