ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಕೆಲವು ಆಧಾರ್ ಕಾರ್ಡ್ ಹೋಲ್ಡರ್ಗಳು ತಮ್ಮ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡುವಂತೆ ಸೂಚನೆ ನೀಡಿದೆ. ಸುಮಾರು 10 ವರ್ಷಗಳ ಹಿಂದೆ ಯಾರು ಆಧಾರ್ ಕಾರ್ಡ್ ಅನ್ನು ಮಾಡಿಸಿಕೊಂಡಿದ್ದರೋ ಅವರು ತಮ್ಮ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಬೇಕು ಎಂದು ಯುಐಡಿಎಐ ಹೇಳಿದೆ.
ತಮ್ಮ ದಾಖಲೆಗಳನ್ನು ಮತ್ತೆ ಸಬ್ಮಿಟ್ ಮಾಡಿ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದೆ. ಆಧಾರ್ ಕಾರ್ಡ್ನಲ್ಲಿ ಬಯೋಮೆಟ್ರಿಕ್ ಮಾಹಿತಿಗಳಾದ ಕಣ್ಣಿನ ಸ್ಕ್ಯಾನ್, ಬೆರಳಚ್ಚು, ಫೋಟೋ ಮೊದಲಾದ ಒಬ್ಬ ವ್ಯಕ್ತಿಯ ಮಾಹಿತಿ ಇರುತ್ತದೆ. ಈ ಮಾಹಿತಿಯನ್ನು ಮತ್ತೆ ಅಪ್ಡೇಟ್ ಮಾಡಲು ತಿಳಿಸಲಾಗಿದೆ.
ಸುಮಾರು 12 ವರ್ಷಗಳಿಂದ ದೇಶದಲ್ಲಿ ಆಧಾರ್ ಕಾರ್ಡ್ ಅನ್ನು ಬಳಕೆ ಮಾಡಲಾಗುತ್ತಿದೆ. ಈ ಆಧಾರ್ ಕಾರ್ಡ್ ಪ್ರಸ್ತುತ ಜನರ ಪ್ರಮುಖ ದಾಖಲೆಯಾಗಿದೆ. ಎಲ್ಲ ಕಚೇರಿ, ಕೆಲಸಗಳಿಗೂ ಆಧಾರ್ ಕಾರ್ಡ್ ಪ್ರಮುಖವಾಗಿದೆ. ಪ್ರಮುಖವಾಗಿ ಈ ಆಧಾರ್ ಕಾರ್ಡ್ ಸಂಖ್ಯೆಯನ್ನು ಸರ್ಕಾರದ ಯೋಜನೆ ಹಾಗೂ ಸೇವೆಗಳನ್ನು ಪಡೆಯಲು ಬಳಕೆ ಮಾಡಲಾಗುತ್ತದೆ. ಇನ್ನು ಪ್ಯಾನ್ ಜೊತೆ ಎಲ್ಲ ಬ್ಯಾಂಕಿಂಗ್ ಕಾರ್ಯಗಳಿಗೂ ಆಧಾರ್ ಅನ್ನು ಬಳಕೆ ಮಾಡಲಾಗುತ್ತದೆ.

ಯಾಕಾಗಿ ಆಧಾರ್ ಅಪ್ಡೇಟ್?
ನಾವು ಮೊಬೈಲ್ ಫೋನ್ಗೆ ಸಿಮ್ ಅನ್ನು ಖರೀದಿ ಮಾಡುವುದರಿಂದ ಹಿಡಿದು, ಕಾರನ್ನು ಖರೀದಿ ಮಾಡುವವರೆಗೂ ಪ್ರಸ್ತುತ ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಇನ್ನು ಪಾಸ್ಪೋರ್ಟ್ ಪಡೆಯಲು ಕೂಡಾ ಆಧಾರ್ ಕಾರ್ಡ್ ಅಗತ್ಯವಾಗಿದೆ. ಈ ಆಧಾರ್ ಅಪ್ಡೇಟ್ ಆಗದಿದ್ದರೆ ಯಾವುದೇ ಯೋಜನೆಯ ಸವಲತ್ತನ್ನು ಪಡೆಯಲು ಸಾಧ್ಯವಾಗದೆ ಇರಬಹುದು. ಆದ್ದರಿಂದಾಗಿ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡುವುದು ಅತೀ ಮುಖ್ಯವಾಗಿದೆ.
ಇನ್ನು ಆಧಾರ್ ಕಾರ್ಡ್ ಅನ್ನು ನಾವು ಶುಲ್ಕವನ್ನು ಪಾವತಿ ಮಾಡಿ ಅಪ್ಡೇಟ್ ಮಾಡಿಕೊಳ್ಳಬಹುದು. ನಾವು ಆಧಾರ್ ಸೆಂಟರ್ ಅಥವಾ ಆಧಾರ್ ಕೇಂದ್ರ, ಅಂಚೆ ಕಚೇರಿಗೆ ಭೇಟಿ ನೀಡಿ ಆಧಾರ್ ಅನ್ನು ಅಪ್ಡೇಟ್ ಮಾಡಿಕೊಳ್ಳಬೇಕಾಗುತ್ತದೆ. ಆಧಾರ್ನಲ್ಲಿ ನಮ್ಮ ಫೋಟೋ, ವಿಳಾಸವನ್ನು ನಾವಾಗಿಯೇ ಆನ್ಲೈನ್ ಮೂಲಕ ಅಪ್ಡೇಟ್ ಮಾಡಿಕೊಳ್ಳಬಹುದು. ಆದರೆ ನಮ್ಮ ಬೆರಳಚ್ಚು ಮೊದಲಾದವುಗಳನ್ನು ಅಪ್ಡೇಟ್ ಮಾಡಬೇಕಾದರೆ ನಾವು ಆಧಾರ್ ಕೇಂದ್ರಕ್ಕೆ ಭೇಟಿ ನೀಡಬೇಕಾಗುತ್ತದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ

Vande Bharat: ಸುಂದರ ನೋಟ, ವೇಗದ ಸೇವೆ; ವಂದೇ ಭಾರತ್ ರೈಲಿನ ವಿಶೇಷ ಮಾರ್ಗಗಳಿವು!



Click it and Unblock the Notifications