ಜನವರಿ 31ರಿಂದ (ಇಂದಿನಿಂದ) ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣದೊಂದಿಗೆ ಬಜೆಟ್ ಅಧಿವೇಶನ ಶುರವಾಗಲಿದೆ. ಹಾಗೆಯೇ ದ್ರೌಪದಿ ಮುರ್ಮು ಚೊಚ್ಚಲ ಬಜೆಟ್ ಭಾಷಣ ಇದಾಗಿದೆ. ಚುನಾವಣೆಗೂ ಮುನ್ನ ಬರುವ ಬಜೆಟ್ ಇದಾದ ಕಾರಣ ಜನರ ನಿರೀಕ್ಷೆ ಅಧಿಕವಾಗಿಯೇ ಇದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಅನ್ನು ಮಂಡನೆ ಮಾಡಲಿದ್ದಾರೆ. ಸತತ ಐದನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ರಾಷ್ಟ್ರಪತಿ ಬಜೆಟ್ ಭಾಷಣ ಆರಂಭವಾಗಲಿದ್ದು, ಬಳಿಕ ಮಧ್ಯಾಹ್ನ ಒಂದು ಗಂಟೆಗೆ ಸರಿಯಾಗಿ ಆರ್ಥಿಕ ಸಮೀಕ್ಷೆಯನ್ನು ಕೇಂದ್ರ ಸರ್ಕಾರವು ಮಂಡನೆ ಮಾಡಲಿದೆ.
2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಕಾರಣ ಬಜೆಟ್ ಮೇಲೆ ಹಲವಾರು ನಿರೀಕ್ಷೆಗಳು ಇದೆ. ಮುಖ್ಯವಾಗಿ ತೆರಿಗೆದಾರರು ತೆರಿಗೆ ವಿನಾಯಿತಿ, ಕಡಿತ, ಸ್ಲ್ಯಾಬ್ ಪರಿಷ್ಕರಣೆಯ ನಿರೀಕ್ಷೆಯನ್ನು ಹೊಂದಿದ್ದರೆ, ಈ ಬಾರಿ ಸರ್ಕಾರವು ಹೆಚ್ಚಾಗಿ ಉದ್ಯೋಗ ಸೃಷ್ಟಿ, ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವ ಸಾಧ್ಯತೆಯಿದೆ.

ಬಜೆಟ್ ಅಧಿವೇಶನದಲ್ಲಿ ಯಾವೆಲ್ಲ ಚರ್ಚೆ ಸಾಧ್ಯತೆ?
ಕಳೆದ ಬಜೆಟ್ ಅಧಿವೇಶನದಲ್ಲಿ ಪ್ರಮುಖವಾಗಿ ಕೋವಿಡ್ ಸಾಂಕ್ರಾಮಿಕದಿಂದ ಮೃತಪಟ್ಟವರಿಗೆ ಪರಿಹಾರ, ಪೆಗಾಗಸ್ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ವರ್ಷದ ಅಂದರೆ 2023-2024ನೇ ಸಾಲಿನ ಬಜೆಟ್ನಲ್ಲಿ ರಾಷ್ಟ್ರವ್ಯಾಪಿ ಜಾತಿ ಆಧಾರಿತ ಆರ್ಥಿಕ ಗಣತಿ, ಅದಾನಿ-ಹಿಂಡನ್ಬರ್ಗ್ ವಿವಾದ ಮತ್ತು ಮಹಿಳಾ ಮೀಸಲಾತಿ ಮಸೂದೆ ವಿಚಾರದಲ್ಲಿ ಗದ್ದಲ ಸೃಷ್ಟಿಯಾಗುವ ಸಾಧ್ಯತೆಯಿದೆ.
ಸಂಪ್ರದಾಯದಂತೆ ಬಜೆಟ್ ಅಧಿವೇಶನ ಆರಂಭಕ್ಕೂ ಒಂದು ದಿನ ಮುನ್ನ ಅಂದರೆ ಸೋಮವಾರ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ನಡೆಸಿದೆ. ಸಭೆಗೆ ಕಾಂಗ್ರೆಸ್ ಗೈರುಹಾಜಾರಾಗಿದೆ. ಉಳಿದಂತೆ ಎಡಪಕ್ಷಗಳು, ಜೆಡಿಯು, ಟಿಆರ್ಎಸ್, ಟಿಎಂಸಿ, ಆಮ್ ಆದ್ಮಿ ಪಕ್ಷ, ಡಿಎಂಕೆ, ಆರ್ಜೆಡಿ, ಬಿಜೆಡಿ ಮೊದಲಾದವು ಭಾಗಿಯಾಗಿದೆ. ಇನ್ನು ಇಂದು ಆರ್ಥಿಕ ಸಮೀಕ್ಷೆ ಮಂಡನೆಯಾಗಲಿದ್ದು, ಸಮೀಕ್ಷೆ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಆರ್ಥಿಕ ಸಮೀಕ್ಷೆ ಎಂಬುವುದು ಒಂದು ಹಣಕಾಸು ವರ್ಷದ ಲೆಕ್ಕಾಚಾರವಾಗಿದೆ. ಸರ್ಕಾರದ ಮುಖ್ಯ ಹಣಕಾಸು ಸಲಹಗಾರ (ಸಿಇಎ) ವಿ ಅನಂತ್ ನಾಗೇಶ್ವರಮ್ ಈ ಆರ್ಥಿಕ ಸಮೀಕ್ಷೆಯನ್ನು ತಯಾರಿ ಮಾಡುತ್ತಾರೆ. ಪ್ರಸ್ತುತ ಹಣಕಾಸು ವರ್ಷ 2022-2024ರ ಭಾರತದ ಆರ್ಥಿಕ ಸ್ಥಿತಿಯ ಬಗ್ಗೆ ಈ ಸಮೀಕ್ಷೆಯಲ್ಲಿ ಉಲ್ಲೇಖ ಮಾಡಲಾಗಿರುತ್ತದೆ. http://www.indiabudget.gov.in/economicsurvey ರಲ್ಲಿ ಆರ್ಥಿಕ ಸಮೀಕ್ಷೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications