ಕೇಂದ್ರ ಬಜೆಟ್ 2020 ಮಂಡನೆಗೂ ಮುನ್ನ ಆಯಾ ವಲಯಕ್ಕೆ ಸಂಬಂಧಪಟ್ಟ ತಜ್ಞರು ಅಥವಾ ಸಂಘ-ಸಂಸ್ಥೆಗಳು ಸರ್ಕಾರದ ಮುಂದೆ ಬೇಡಿಕೆ, ನಿರೀಕ್ಷೆಗಳ ಪ್ರಸ್ತಾಪವನ್ನು ಇಟ್ಟಿದ್ದಾರೆ.
"ಪ್ರವಾಸೋದ್ಯಮ ಉತ್ತೇಜನ ಮತ್ತು ಪ್ರಚಾರಕ್ಕಾಗಿ ಮತ್ತು ದೇಶೀಯ ಪ್ರವಾಸೋದ್ಯಮ ಮೂಲಸೌಕರ್ಯದ ಅಭಿವೃದ್ಧಿಗಾಗಿ 3000 ಕೋಟಿ ರೂ.ಗಳ ಬಜೆಟ್ ಹಂಚಿಕೆಯನ್ನು ನಾವು ನಿರೀಕ್ಷಿಸುತ್ತೇವೆ" ಎಂದು ಬೆಂಗಳೂರು ಮೂಲದ ಸವಾರಿ ಕಾರ್ ರೆಂಟಲ್ಸ್, ಸ್ಥಾಪಕ ಮತ್ತು ಸಿಇಒ ಗೌರವ್ ಅಗರ್ವಾಲ್ ಅಭಿಪ್ರಾಯಪಟ್ಟಿದ್ದಾರೆ.
"2021 ರ ಆರಂಭದಲ್ಲಿ ಡೆಲ್ಟಾ ವೇರಿಯಂಟ್ ಜಗತ್ತನ್ನು ಅಪ್ಪಳಿಸಿದರೂ, ಪ್ರಯಾಣ ಮತ್ತು ಪ್ರವಾಸೋದ್ಯಮ ಉದ್ಯಮವು ದ್ವಿತೀಯಾರ್ಧದಲ್ಲಿ ಬಲವಾದ ಪುನರಾರಂಭಕ್ಕೆ ಸಾಕ್ಷಿಯಾಯಿತು. ಆದಾಗ್ಯೂ, ಬೆಳವಣಿಗೆಯನ್ನು ಹೆಚ್ಚಿಸಲು ಸರ್ಕಾರದ ಬೆಂಬಲವು ನಿರೀಕ್ಷಿತ ಮಟ್ಟದಲ್ಲಿರಲಿಲ್ಲ, 2020-21 ರ ಸಂಖ್ಯೆಗಳಿಗೆ ಹೋಲಿಸಿದರೆ 2021-22 ರಲ್ಲಿ ಪ್ರವಾಸೋದ್ಯಮ ಬಜೆಟ್ ಸಚಿವಾಲಯದ ಬಜೆಟ್ ಅನ್ನು 19% ನಷ್ಟು ಕಡಿತಗೊಳಿಸಲಾಗಿದೆ.
ಇಂದು, ಜಾಗತಿಕ ಒಮಿಕ್ರಾನ್ನ ಭಯದೊಂದಿಗೆ, ಈ ವಲಯದ ಪರಿಸ್ಥಿತಿಯು 2021ರ ಪುನರಾವರ್ತನೆಯ ಹತ್ತಿರದಲ್ಲಿದೆ. ಈ ವರ್ಷ ಅಂತರರಾಷ್ಟ್ರೀಯ ಪ್ರಯಾಣವನ್ನು ಹೆಚ್ಚಾಗಿ ನಿರ್ಬಂಧಿಸಲಾಗಿದೆಯಾದರೂ, ಸಾಂಕ್ರಾಮಿಕ ರೋಗದ ನಂತರ ಉಂಟಾದ ಭಾರಿ ನಷ್ಟವನ್ನು ಪುನರುಜ್ಜೀವನಗೊಳಿಸಲು ಮತ್ತು ಮರುಪಡೆಯಲು ದೇಶೀಯ ಆತಿಥ್ಯ ವಲಯಕ್ಕೆ ಇದು ಸೂಕ್ತ ಅವಕಾಶವಾಗಿ ಕಾರ್ಯನಿರ್ವಹಿಸುತ್ತದೆ. ಪ್ರಸ್ತುತ ಈ ರೀತಿಯ ತೊಂದರೆಗೀಡಾದ ವಲಯಕ್ಕೆ ಸುಧಾರಣೆ ಜೀವನಕ್ಕಾಗಿ ಸರ್ಕಾರದ ತೀರ್ಮಾನ/ಯೋಜನೆ/ಪಾತ್ರ ನಿರ್ಣಾಯಕವಾಗಿದೆ.

ಉದ್ಯಮ ಹೂಡಿಕೆಗಳು, ತೆರಿಗೆ ಪರಿಹಾರ ಮತ್ತು 2022 ರಲ್ಲಿ ವರ್ಧಿತ ಮೂಲಸೌಕರ್ಯಕ್ಕಾಗಿ ವಿಸ್ತೃತ ಬಜೆಟ್ ಹಂಚಿಕೆಗಳನ್ನು ಉದ್ಯಮವು ಎದುರು ನೋಡುತ್ತಿದೆ. ಪ್ರವಾಸೋದ್ಯಮ ಉತ್ತೇಜನ ಮತ್ತು ಪ್ರಚಾರಕ್ಕಾಗಿ ಮತ್ತು ದೇಶೀಯ ಪ್ರವಾಸೋದ್ಯಮ ಮೂಲಸೌಕರ್ಯದ ಅಭಿವೃದ್ಧಿಗಾಗಿ 3000 ಕೋಟಿ ರೂ.ಗಳ ಬಜೆಟ್ ಹಂಚಿಕೆಯನ್ನು ನಾವು ನಿರೀಕ್ಷಿಸುತ್ತೇವೆ". ಎಂದರು.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2022 ರಂದು ತಮ್ಮ ನಾಲ್ಕನೇ ಕೇಂದ್ರ ಬಜೆಟ್ ಅನ್ನು ಘೋಷಿಸಲಿದ್ದಾರೆ. 2022 ರ ಬಜೆಟ್ ಹಲವಾರು ನಿರೀಕ್ಷೆಗಳನ್ನು ಹೊಂದಿದೆ. ಕೃಷಿ, ಆರೋಗ್ಯ ಮತ್ತು ರಿಯಲ್ ಎಸ್ಟೇಟ್ ಅಲ್ಲದೆ ಪ್ರವಾಸೋದ್ಯಮ, ಸಾರಿಗೆ ಸಂಪರ್ಕ ಕ್ಷೇತ್ರ ಹೆಚ್ಚಿನ ಅನುದಾನದ ನಿರೀಕ್ಷೆಯಲ್ಲಿದೆ.
ಜಿಎಸ್ಟಿ ಕಡಿತವಾಗುವ ನಿರೀಕ್ಷೆ
ದೇಶದಾದ್ಯಂತ ಆಟೋಮೊಬೈಲ್ ಡೀಲರ್ಗಳು ಮತ್ತು ಚಿಲ್ಲರೆ ವ್ಯಾಪಾರಿಗಳನ್ನು ಪ್ರತಿನಿಧಿಸುವ ಉನ್ನತ ಸಂಸ್ಥೆಯಾದ ಫೆಡರೇಶನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ (ಎಫ್ಎಡಿಎ) ಮುಂಬರುವ ಕೇಂದ್ರ ಬಜೆಟ್ನಲ್ಲಿ ಆಟೋಮೋಟಿವ್ ಉದ್ಯಮಕ್ಕೆ ಸಹಾಯ ಮಾಡಲು ತನ್ನ ಶಿಫಾರಸುಗಳನ್ನು ಸರ್ಕಾರಕ್ಕೆ ನೀಡಿದೆ. ಸರ್ಕಾರ ಈ ಪ್ರಸ್ತಾಪವನ್ನು ಪರಿಗಣಿಸಿದರೆ ದ್ವಿಚಕ್ರ ವಾಹನ, ಸೆಕೆಂಡ್ಹ್ಯಾಂಡ್ ಕಾರುಗಳ ಮೇಲಿನ ಜಿಎಸ್ಟಿ ಕಡಿತವಾಗುವ ನಿರೀಕ್ಷೆ ಇದೆ.
ಬಳಸಿದ ಕಾರುಗಳ ಮೇಲಿನ ಜಿಎಸ್ಟಿ ದರವನ್ನು ಕಾರಿನ ಗಾತ್ರಕ್ಕೆ ಅನುಗುಣವಾಗಿ 12 ಮತ್ತು 18 ಪ್ರತಿಶತದಿಂದ 5 ಪ್ರತಿಶತಕ್ಕೆ ಇಳಿಕೆ ಮಾಡಲು ಫೆಡರೇಶನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ (ಎಫ್ಎಡಿಎ) ಶಿಫಾರಸು ಮಾಡಿದ್ದು, ಇದರಿಂದಾಗಿ ಆಟೋಮೋಟಿವ್ ಉದ್ಯಮಕ್ಕೆ ಸಹಾಯವಾಗಲಿದೆ ಎಂಬ ನಿರೀಕ್ಷೆಯಿದೆ.
ಸಚಿವರ ಭರವಸೆ
ಮತ್ತೆ ಪ್ರವಾಸೋದ್ಯಮ ಯಥಾಸ್ಥಿತಿಗೆ ಬರಬೇಕು. ಆ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದೇವೆ. ಕೊರೊನಾ ಲಸಿಕೆ ಪೂರ್ಣ ಪ್ರಮಾಣದಲ್ಲಿ ಆಗಬೇಕು. ಹಾಗಾಗಿ ಈಗ ಒಂದೊಂದೇ ಭಾಗದಲ್ಲಿ ಪ್ರವಾಸೋದ್ಯಮ ಆರಂಭಿಸುತ್ತಿದ್ದೇವೆ. ಈಶಾನ್ಯ ರಾಜ್ಯಗಳ ಜೊತೆ ಮೀಟಿಂಗ್ ಮಾಡಿದ್ದೆವು. ಈಗ ದಕ್ಷಿಣ ಭಾರತ ರಾಜ್ಯಗಳ ಮೀಟಿಂಗ್ ಮಾಡಿದ್ದೇವೆ. ಎಂಟು ರಾಜ್ಯದ ಸಚಿವರು ಅಧಿಕಾರಿಗಳು ಭಾಗವಹಿಸಿದ್ದಾರೆ. ಪ್ರವಾಸೋದ್ಯಮದಲ್ಲಿ ಆರೋಗ್ಯಕರ ಪೈಪೋಟಿ ಇರಬೇಕು. ಈ ಹಿನ್ನೆಲೆಯಲ್ಲಿ ಕುಂದು ಕೊರತೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ.
ಬೆಲೆ ಏರಿಕೆಗೂ ಪ್ರವಾಸೋದ್ಯಮಕ್ಕೂ ಸಂಬಂಧ ಇಲ್ಲ ಎಂದು ಕಿಶನ್ ರೆಡ್ಡಿ ಹೇಳಿದ್ದಾರೆ. ಬೆಲೆಯೇರಿಕೆ ಪ್ರವಾಸೋದ್ಯಮದ ಮೇಲೆ ಪರಿಣಾಮ ಬೀರಲ್ಲ. ಜನ ಪ್ರವಾಸ ಮಾಡಬೇಕು ಅಂತ ನಿರ್ಧರಿಸಿದರೆ ಎಷ್ಟೇ ಕಷ್ಟ ಇದ್ರೂ ಪ್ರವಾಸ ಮಾಡ್ತಾರೆ. ಬೆಲೆಯೇರಿಕೆ ಅಂತ ಜನ ಪ್ರವಾಸ ಮಾಡದೇ ಇರಲ್ಲ ಎಂದರು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications