ಓರ್ವ ವ್ಯಕ್ತಿಯು ಎಷ್ಟು ಮೊತ್ತವನ್ನು ತಮ್ಮ ಮನೆಯಲ್ಲಿ ಇಟ್ಟುಕೊಳ್ಳಬಹುದು, ಆದಾಯ ತೆರಿಗೆ ಇಲಾಖೆಯು ಈ ಬಗ್ಗೆ ಯಾವ ನಿಯಮವನ್ನು ಹೊಂದಿದೆ, ನಿಮ್ಮಲ್ಲಿ ಅಗತ್ಯಕ್ಕಿಂತ ಅಧಿಕ ಹಣವಿದ್ದಾಗ ಆದಾಯ ತೆರಿಗೆ ಇಲಾಖೆಗೆ ತಿಳಿದರೆ ಏನಾಗುತ್ತದೆ, ಎಂಬ ಬಗ್ಗೆ ನಿಮಗೆ ತಿಳಿದಿರಬಹುದು. ಆದರೆ ನೀವು 2 ಲಕ್ಷ ರೂಪಾಯಿಗಿಂತ ಹೆಚ್ಚಿನ ಮೌಲ್ಯದ ವಸ್ತು ಖರೀದಿಸುವಾಗ ಕೆಲವು ದಾಖಲೆಗಳನ್ನು ಸಲ್ಲಿಸಬೇಕು ಎಂಬುವುದು ನಿಮಗೆ ತಿಳಿದಿದೆಯೇ?
ನಿಮ್ಮಲ್ಲಿ ಅಷ್ಟು ಪ್ರಮಾಣದಲ್ಲಿ ಹಣವಿದ್ದಾಗ ನಿಮಗೆ ಅಷ್ಟು ಹಣ ಎಲ್ಲಿಂದ ಲಭ್ಯವಾಗಿದೆ ಎಂದು ನೀವು ತಿಳಿಸಬೇಕಾಗುತ್ತದೆ. ಅದಕ್ಕಾಗಿ ದಾಖಲೆಯನ್ನು ಕೂಡಾ ಸಲ್ಲಿಸಬೇಕಾಗುತ್ತದೆ. ಹಾಗೆಯೇ ನೀವು ಸರಿಯಾದ ರೀತಿಯಲ್ಲಿ ಆದಾಯ ತೆರಿಗೆ ರಿಟರ್ನ್ ಫೈಲ್ ಮಾಡಿದ್ದೀರಾ ಎಂದು ಕೂಡಾ ಖಚಿತಪಡಿಸಿಕೊಳ್ಳಬೇಕಾಗುತ್ತದೆ.
ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟಾಕ್ಸಸ್ ಪ್ರಕಾರ, ನಿಮ್ಮಲ್ಲಿ ಅಷ್ಟು ಪ್ರಮಾಣದಲ್ಲಿ ಹಣ ಎಲ್ಲಿಂದ ಬಂದಿದೆ ಎಂದು ಸರಿಯಾದ ದಾಖಲೆಯನ್ನು ನೀವು ಸಲ್ಲಿಸಲು ಸಾಧ್ಯವಾಗದಿದ್ದರೆ, ಆದಾಯ ತೆರಿಗೆ ಇಲಾಖೆಯು ನಿಮಗೆ ದಂಡವನ್ನು ವಿಧಿಸಬಹುದು. ನಿಮ್ಮಲ್ಲಿರುವ ಮೊತ್ತದ ಸುಮಾರು ಶೇಕಡ 137ರಷ್ಟು ದಂಡವನ್ನು ವಿಧಿಸಬಹುದು. ಹಣವನ್ನು ನೀವು ಹೊಂದಿರುವಾಗ ಕೆಲವೊಂದು ಅಂಶಗಳನ್ನು ತಿಳಿದಿರುವುದು ಮುಖ್ಯವಾಗುತ್ತದೆ.

ಎಷ್ಟು ಮೊತ್ತದ ವಹಿವಾಟಿಗೆ ದಾಖಲೆ ಸಲ್ಲಿಸಬೇಕಾಗುತ್ತದೆ?
ಒಂದು ಹಣಕಾಸು ವರ್ಷದಲ್ಲಿ ನೀವು 20 ಲಕ್ಷ ರೂಪಾಯಿಗಿಂತ ಅಧಿಕ ವಹಿವಾಟನ್ನು ಮಾಡಿದರೆ, ನಿಮಗೆ ದಂಡವನ್ನು ವಿಧಿಸಲಾಗುತ್ತದೆ. ನೀವು 50 ಸಾವಿರ ರೂಪಾಯಿಗಿಂತ ಅಧಿಕ ಮೊತ್ತವನ್ನು ವಿತ್ಡ್ರಾ ಅಥವಾ ಡೆಪಾಸಿಟ್ ಮಾಡಬೇಕಾದರೆ ಪ್ಯಾನ್ ಕಾರ್ಡ್ ಅನ್ನು ಬ್ಯಾಂಕ್ಗೆ ಸಲ್ಲಿಸುವುದು ಅತೀ ಮುಖ್ಯವಾಗಿದೆ.
ವ್ಯಕ್ತಿಯು 1,20,000 ರೂಪಾಯಿಗಿಂತ ಅಧಿಕ ಮೊತ್ತವನ್ನು ಡೆಪಾಸಿಟ್ ಮಾಡಿದರೆ ಪ್ಯಾನ್ ಮತ್ತು ಆಧಾರ್ ಕಾರ್ಡ್ ಅನ್ನು ಸಲ್ಲಿಸಬೇಕಾಗುತ್ತದೆ. ಹಾಗೆಯೇ ನೀವು 2 ಲಕ್ಷ ರೂಪಾಯಿಗಿಂತ ಅಧಿಕ ಮೊತ್ತದ ನಗದು ವಹಿವಾಟು ನಡೆಸಲು ಸಾಧ್ಯವಿಲ್ಲ. ಅದಕ್ಕಾಗಿ ನೀವು ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. 2 ಲಕ್ಷ ರೂಪಾಯಿಗಿಂತ ಅಧಿಕ ಮೊತ್ತವ ವಹಿವಾಟು ನಗದು ರೂಪದಲ್ಲಿ ನಡೆಸುವುದಾದರೆ ನೀವು ಪ್ಯಾನ್ ಅಥವಾ ಆಧಾರ್ ಕಾರ್ಡ್ ಅನ್ನು ಸಲ್ಲಿಸಬೇಕಾಗುತ್ತದೆ.
ಒಬ್ಬ ವ್ಯಕ್ತಿಯು ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಅನ್ನು ಬಳಸಿ ಒಂದು ಲಕ್ಷ ರೂಪಾಯಿಗಿಂತ ಅಧಿಕ ವಹಿವಾಟನ್ನು ನಡೆಸಿದರೆ, ಅದು ಆದಾಯ ತೆರಿಗೆ ಇಲಾಖೆಯ ಗಮನಕ್ಕೆ ಬರುತ್ತದೆ. ನಿಯಮದ ಪ್ರಕಾರ ನೀವು ನಿಮ್ಮ ಸ್ನೇಹಿತರು ಅಥವಾ ಸಂಬಂಧಿಗಳಿಂದ ಎರಡು ಲಕ್ಷ ರೂಪಾಯಿಗಿಂತ ಅಧಿಕ ಮೊತ್ತವನ್ನು ನಗದು ರೂಪದಲ್ಲಿ ಪಡೆಯುವಂತಿಲ್ಲ. ಹಾಗೆಯೇ ಬ್ಯಾಂಕ್ನಿಂದ ಎರಡು ಕೋಟಿ ರೂಪಾಯಿಗಿಂತ ಅಧಿಕ ಮೊತ್ತವನ್ನು ವಿತ್ಡ್ರಾ ಮಾಡಿದರೆ ಟಿಡಿಎಸ್ ಪಾವತಿಸಬೇಕಾಗುತ್ತದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!



Click it and Unblock the Notifications