ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳು ಜೂನ್ 1ನೇ ತಾರೀಕಿನಂದು ಒಂದೇ ದಿನದಲ್ಲಿ ಕಿರು, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ (MSME's) 3,200 ಕೋಟಿ ರುಪಾಯಿ ಸಾಲ ವಿತರಿಸಿವೆ. ಯಾವುದೇ ಶ್ಯೂರಿಟಿ ಇಲ್ಲದೆ ತುರ್ತು ಸಾಲ ಯೋಜನೆ ಅಡಿಯಲ್ಲಿ 3200 ಕೋಟಿ ರುಪಾಯಿ ವಿತರಿಸಲಾಗಿದೆ ಎಂದು ಸೋಮವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಯಿಂದ ಟ್ವೀಟ್ ಮಾಡಲಾಗಿದೆ.
ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ ಗೆ ಕಳೆದ ತಿಂಗಳು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ಕೊರೊನಾದಿಂದ ಸಂಕಷ್ಟದಿಂದ ನಲುಗಿರುವ ಎಂಎಸ್ ಎಂಇಗಳ ಹಣಕಾಸು ಅಗತ್ಯಗಳಿಗೆ, ಕಚ್ಚಾ ವಸ್ತುಗಳಿಗೆ ಮತ್ತು ವ್ಯಾಪಾರ ಆರಂಭಿಸಲು ಅನುಕೂಲ ಆಗಲಿ ಯೋಜನೆ ರೂಪಿಸಲಾಗಿದೆ ಎಂದು 20 ಲಕ್ಷ ಕೋಟಿ ರುಪಾಯಿ ಆರ್ಥಿಕ ಪ್ಯಾಕೇಜ್ ಘೋಷಿಸುವ ವೇಳೆ ನಿರ್ಮಲಾ ಸೀತಾರಾಮನ್ ಹೇಳಿದ್ದರು.
ಎಂಎಸ್ ಎಂಇಗಳು ಮೂರು ಸಾವಿರಕ್ಕೂ ಹೆಚ್ಚು ಟಯರ್ 2 ಪಟ್ಟಣಗಳಲ್ಲಿ ಇವೆ. ಈ ಸಾಲ ಯೋಜನೆ ಅಡಿಯಲ್ಲಿ ಒಂದೇ ದಿನದಲ್ಲಿ ಇವುಗಳನ್ನು ಕವರ್ ಮಾಡಲಾಗಿದೆ. ವೇತನ, ಬಾಡಿಗೆ ಮತ್ತು ಇತರ ಖರ್ಚುಗಳಿಗೆ ಈ ಹಣವನ್ನು ಅವರು ಬಳಸಿಕೊಳ್ಳಬಹುದು ಎಂದು ಟ್ವೀಟ್ ಮಾಡಲಾಗಿದೆ.

25 ಕೋಟಿ ರುಪಾಯಿ ತನಕ ಬಾಕಿ ಇರುವಂಥ ಎಂಎಸ್ ಎಂಇಗಳು, 100 ಕೋಟಿ ವಹಿವಾಟು ಇರುವಂಥವು ಬ್ಯಾಂಕ್ ಗಳು ಮತ್ತು ಎನ್ ಬಿಎಫ್ ಸಿಗಳಿಂದ ಫೆಬ್ರವರಿ 29, 2020ಕ್ಕೆ ಬಾಕಿ ಇರುವ ಒಟ್ಟು ಸಾಲದ 20 ಪರ್ಸೆಂಟ್ ಅನ್ನು ತುರ್ತು ಸಾಲ ಎಂದು ಪಡೆಯಬಹುದು.
ಎಂಎಸ್ ಎಂಇಗಳಿಗೆ ಯಾವುದೇ ಶ್ಯೂರಿಟಿ ಇಲ್ಲದೆ ಸಾಲ ನೀಡಲು 3 ಲಕ್ಷ ಕೋಟಿ ರುಪಾಯಿ ಗುರಿ ಹಾಕಿಕೊಳ್ಳಲಾಗಿದೆ. ಆದರೆ ಈಚೆಗೆ ಕೂಡ ಸಣ್ಣ ಮಟ್ಟದ ವ್ಯಾಪಾರ- ವ್ಯವಹಾರ ಮಾಡುವವರು ಬ್ಯಾಂಕ್ ಗಳ ವಿರುದ್ಧ ಆರೋಪ ಮಾಡಿದ್ದರು. ಈಗಲೂ ಬ್ಯಾಂಕ್ ಗಳಲ್ಲಿ ಸಾಲ ನೀಡುತ್ತಿಲ್ಲ ಎಂದು ದೂರಿದ್ದರು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications