ನವದೆಹಲಿ, ಜುಲೈ 7: ಭಾರತದಲ್ಲಿನ ಸುಮಾರು 1.5 ಲಕ್ಷ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್ಎಂಇ) ನೆರವಿನ ದೃಷ್ಠಿಯಿಂದ 5700 ಕೋಟಿ ರುಪಾಯಿ ಸಾಲ ಒದಗಿಸಲು ವಿಶ್ವ ಬ್ಯಾಂಕ್ ಮುಂದಾಗಿದೆ.
ಕೊರೊನಾ ಲಾಕ್ಡೌನ್ ಬಿಕ್ಕಟ್ಟಿನಿಂದ ತೀವ್ರವಾಗಿ ಪರಿಣಾಮ ಬೀರುವ ಎಂಎಸ್ಎಂಇಗಳ ಕೈಗೆ ಹೆಚ್ಚಿನ ಹಣಕಾಸಿನ ಹರಿವನ್ನು ಬೆಂಬಲಿಸುವ ಉದ್ದೇಶದಿಂದ ವಿಶ್ವ ಬ್ಯಾಂಕ್ ಮತ್ತು ಭಾರತ ಸರ್ಕಾರ ಸೋಮವಾರ ಎಂಎಸ್ಎಂಇ ತುರ್ತು ಪ್ರತಿಕ್ರಿಯೆ ಕಾರ್ಯಕ್ರಮ ಒಪ್ಪಂದಕ್ಕೆ ಸಹಿ ಹಾಕಿವೆ.
ಪ್ರಸ್ತುತ ಲಾಕ್ಡೌನ್ ಪರಿಣಾಮವನ್ನು ತಡೆದುಕೊಳ್ಳಲು ಮತ್ತು ಲಕ್ಷಾಂತರ ಉದ್ಯೋಗಗಳನ್ನು ರಕ್ಷಿಸಲು, ಎಂಎಸ್ಎಂಇಗಳಿಗೆ ಸಹಾಯ ಮಾಡಲು ವಿಶ್ವ ಬ್ಯಾಂಕಿನ ಪರಿಹಾರ ಅಗತ್ಯವನ್ನು ಪರಿಹರಿಸುತ್ತದೆ ಎಂದು ಹಣಕಾಸು ಸಚಿವಾಲಯದ ಹೇಳಿಕೆ ತಿಳಿಸಿದೆ.

ಕಾರ್ಯಸಾಧ್ಯವಾದ ಎಂಎಸ್ಎಂಇಗಳಿಗೆ ಸಾಲವನ್ನು ಮುಂದುವರಿಸಲು ಹಣಕಾಸು ಸಂಸ್ಥೆಗಳಿಗೆ ಈ ಕ್ರಮವು ಸಹಾಯ ಮಾಡುತ್ತದೆ ಮತ್ತು ಬಿಕ್ಕಟ್ಟಿನ ಸಂದರ್ಭದಲ್ಲಿ ಅದನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಲಾಕ್ಡೌನ್ ಎಂಎಸ್ಎಂಇ ವಲಯದ ಮೇಲೆ ತೀವ್ರ ಪರಿಣಾಮ ಬೀರಿದೆ, ಇದು ಜೀವನೋಪಾಯ ಮತ್ತು ಉದ್ಯೋಗಗಳ ನಷ್ಟಕ್ಕೆ ಕಾರಣವಾಗಿದೆ ಎಂದು ಹಣಕಾಸು ಇಲಾಖೆ ಹೇಳಿದೆ. ಈಗಾಗಲೇ ಕೇಂದ್ರ ಸರ್ಕಾರ ಆತ್ಮ ನಿರ್ಭರ ಪ್ಯಾಕೇಜ್ ಅಡಿ ಮೂರು ಲಕ್ಷ ಕೋಟಿ ರುಪಾಯಿ ಗಳನ್ನು ಎಂಎಸ್ಎಂಇ ಗಳ ವಲಯಕ್ಕೆ ನೀಡಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications