ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡಲಿದ್ದಾರೆ. ಈ ಬಜೆಟ್ ಮೇಲೆ ಬೇರೆ ಬೇರೆ ವಲಯಗಳು ತಮ್ಮದೇ ಆದ ನಿರೀಕ್ಷೆಯನ್ನು ಹೊಂದಿದೆ. ಮೈಕ್ರೋ, ಸ್ಮಾಲ್, ಮೀಡಿಯಂ ಎಂಟರ್ಪ್ರೈಸಸ್ (MSME) ವಲಯವು ಕೂಡಾ ಹಲವಾರು ಬೇಡಿಕೆಗಳನ್ನು ಹೊಂದಿದೆ. ಪ್ರಸ್ತುತ ಸುಮಾರು 60 ಮಿಲಿಯನ್ ಸಂಸ್ಥೆಗಳು ಎಂಎಸ್ಎಂಇ ಅಡಿಯಲ್ಲಿ ಬರುತ್ತದೆ. ಹಾಗೆಯೇ ಭಾರತದ ಒಟ್ಟು ಉತ್ಪಾದನ ವಲಯಕ್ಕೆ ಶೇಕಡ 45ರಷ್ಟು ಕೊಡುಗೆಯನ್ನು ನೀಡುತ್ತಿದೆ.
ಈ ಹಿಂದಿನ ಬಜೆಟ್ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎಂಎಸ್ಎಂಇ ವಲಯದ ಅಭಿವೃದ್ಧಿಗಾಗಿ ಕೆಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಭಾರೀ ನಷ್ಟವನ್ನು ಹೊಂದಿದ್ದ ವಲಯಕ್ಕೆ ಸಹಾಯವನ್ನು ಮಾಡಿದ್ದರು. ದೇಶದ ಆರ್ಥಿಕ ಬೆಳವಣಿಗೆಗೆ ಪ್ರಮುಖ ಕೊಡುಗೆಯನ್ನು ಎಂಎಸ್ಎಂಇ ವಲಯವು ನೀಡುತ್ತಿದೆ ಎಂಬುವುದು ಗಮನಾರ್ಹ.
ಕಳೆದ ಕೆಲವು ವರ್ಷಗಳಿಂದ ಎಂಎಸ್ಎಂಇ ವಲಯಕ್ಕೆ ಮಾಡಲಾಗುತ್ತಿರುವ ಬಜೆಟ್ ಹಂಚಿಕೆಯು ಹೆಚ್ಚಳವಾಗುತ್ತಿದೆ. ಹಣಕಾಸು ವರ್ಷ 2020-21ರಲ್ಲಿ ಬಜೆಟ್ನಲ್ಲಿ ಎಂಎಸ್ಎಂಇಗೆ 7,572 ಕೋಟಿ ರೂಪಾಯಿ ಮೀಸಲಿಡಲಾಗಿತ್ತು. 2021-22 ಹಣಕಾಸು ವರ್ಷದಲ್ಲಿ ಈ ನಿಧಿಯನ್ನು 15,699.65 ಕೋಟಿ ರೂಪಾಯಿಗೆ ಏರಿಕೆ ಮಾಡಲಾಗಿತ್ತು. 2022-23 ಹಣಕಾಸು ವರ್ಷದಲ್ಲಿ ನಿಧಿ ಹಂಚಿಕೆ 21,422 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಬೇರೆ ವಲಯಗಳಂತೆ ಎಂಎಸ್ಎಂಇ ಕೂಡಾ ಬಜೆಟ್ನಿಂದ ತನ್ನದೇ ಆದ ನಿರೀಕ್ಷೆಯನ್ನು ಹೊಂದಿದೆ. ಈ ಬಗ್ಗೆ ಇಲ್ಲಿದೆ ಮಾಹಿತಿ ಮುಂದೆ ಓದಿ...
ಹಣಕಾಸು ಲಭ್ಯತೆ
ಅಗತ್ಯವಿದ್ದ ಸಂದರ್ಭದಲ್ಲಿ ನಿಧಿ ಲಭ್ಯವಾಗದೆ ಇರುವುದೇ ಎಂಎಸ್ಎಂಇ ವಲಯದ ಪ್ರಮುಖ ಸಮಸ್ಯೆಯಾಗಿದೆ. ಈ ವಲಯಕ್ಕೆ ಸಮಯಕ್ಕೆ ಸರಿಯಾಗಿ ಹಣಕಾಸು ಸಹಾಯ ಲಭ್ಯವಾಗುವ ಅವಶ್ಯಕತೆಯಿದೆ. ಇದಕ್ಕಾಗಿ ಸಿಜಿಟಿಎಂಎಸ್ಇ (Credit Guarantee fund Trust for Micro and Small Enterprises) ಬಡ್ಡಿದರವನ್ನು ಕಡಿತ ಮಾಡಬೇಕು ಎಂಬ ನಿರೀಕ್ಷೆಯನ್ನು ಹೊಂದಿದೆ. ಈ ವಲಯಕ್ಕೆ ಕಡಿಮೆ ಬಡ್ಡಿದರದಲ್ಲಿ ಸಾಲ ಲಭ್ಯವಾಗುವುದು ಮುಖ್ಯವಾಗಿದೆ ಎಂದು ಪಾರ್ಟ್ನರ್ ಡೆಲಾಯ್ಟ್ನ ಸಂಜಯ್ ಕುಮಾರ್ ಹೇಳಿದ್ದಾರೆ. ಪ್ರಸ್ತುತ ಕನಿಷ್ಠ ಬಡ್ಡಿದರ ಶೇಕಡ 18 ಆಗಿದೆ. ಇದು ದೊಡ್ಡ ಸಂಸ್ಥೆಗಳಿಗೆ ಸಮಸ್ಯೆಯಾಗಲ್ಲ, ಆದರೆ ಕೆಲವು ಸಣ್ಣ ಸಂಸ್ಥೆಗಳಿಗೆ ಸಮಸ್ಯೆಯಾಗುತ್ತದೆ ಎಂದು ತಿಳಿಸಿದ್ದಾರೆ.
ಪ್ರೊಡೆಕ್ಷನ್ ಲಿಂಕ್ಡ್ ಇನ್ಸೆಂಟೀವ್ಸ್ (ಪಿಎಲ್ಐ)
ಪಿಎಲ್ಐ ಯೋಜನೆಯು ಎಂಎಸ್ಎಂಇ ವಲಯದಲ್ಲಿ ಉತ್ಪಾದನೆ ಹಾಗೂ ರಫ್ತು ಸಾಮರ್ಥ್ಯವನ್ನು ಹೆಚ್ಚಳ ಮಾಡುತ್ತದೆ. ಸರ್ಕಾರವು ಎಂಎಸ್ಎಂಇಯನ್ನು ಸಾಂಪ್ರಾದಾಯಿಕಗೊಳಿಸಬೇಕು ಹಾಗೂ ದೊಡ್ಡ ಸಂಸ್ಥೆಗಳಿಗೆ ಲಭ್ಯವಾಗುವ ಪ್ರೋತ್ಸಾಹ ಧನ ಸಣ್ಣ ಸಂಸ್ಥೆಗಳಿಗೂ ಲಭ್ಯವಾಗಬೇಕು ಎಂಬುವುದು ಬೇಡಿಕೆಯಾಗಿದೆ. "ಕೆಲವು ಎಂಎಸ್ಎಂಇ ಸಂಸ್ಥೆಗಳು ಬರೀ ನಗದಿನ ಮೇಲೆ ನಿಂತಿದೆ. ಅದರಿಂದಾಗಿ ಬೇರೆ ಹಣಕಾಸು ಮೂಲವನ್ನು ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದಾಗಿ ಎಂಎಸ್ಎಂಇ ಸೆಕ್ಟರ್ ಅನ್ನು ಔಪಾಚಾರಿಕಗೊಳಿಸುವುದು ಅತೀ ಮುಖ್ಯವಾಗಿದೆ," ಎಂದು ಪಾರ್ಟ್ನರ್ ಡೆಲಾಯ್ಟ್ನ ಸಂಜಯ್ ಕುಮಾರ್ ಹೇಳಿದ್ದಾರೆ.
ಬಜೆಟ್: ರಫ್ತು
ಎಂಎಸ್ಎಂಇ ವಲಯವು ದೇಶದ ಒಟ್ಟು ರಫ್ತಿನಲ್ಲಿ ಶೇಕಡ 40ರಷ್ಟು ಪಾಲನ್ನು ಹೊಂದಿದೆ. ಈ ವಲಯದಲ್ಲಿ ರಫ್ತನ್ನು ಹೆಚ್ಚಳ ಮಾಡಬೇಕಾದರೆ, ಸಂಸ್ಥೆಯಲ್ಲಿ ಉತ್ಪಾದನೆ ಹೆಚ್ಚಳ ಮಾಡಬೇಕಾಗುತ್ತದೆ. ಅದಕ್ಕಾಗಿ ನಾವು ಸ್ಥಳೀಯ ಮೌಲ್ಯವನ್ನು ಮತ್ತು ಅಂತಾರಾಷ್ಟ್ರೀಯ ಮೌಲ್ಯವನ್ನು ಅರ್ಥ ಮಾಡಿಕೊಳ್ಳಬೇಕು. ಇವೆರಡು ಜೊತೆಯಾಗಿ ಕಾರ್ಯನಿರ್ವಹನೆ ಮಾಡಿದಾಗ ಎಂಎಸ್ಎಂಇ ವಲಯವು ಇನ್ನು ಹೆಚ್ಚು ಕಲಿಯಲು ಸಾಧ್ಯವಾಗುತ್ತದೆ," ಎಂದು ಸಂಜಯ್ ಕುಮಾರ್ ತಿಳಿಸಿದ್ದಾರೆ. ಸರ್ಕಾರವು ಪ್ರೋತ್ಸಾಹ ಧನವನ್ನು ನೀಡಬೇಕು ಇದರಿಂದಾಗಿ ಸಂಸ್ಥೆಯ ಅಭಿವೃದ್ಧಿಯಾಗುತ್ತದೆ. ಈ ಅಭಿವೃದ್ಧಿಯು ದೇಶದ ಅಭಿವೃದ್ಧಿಗೆ ಸಹಾಯಕವಾಗುತ್ತದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications