ನವದೆಹಲಿ, ಮಾರ್ಚ್ 29: ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ 1,823 ಕೋಟಿ ರೂಪಾಯಿಯ ನೋಟಿಸ್ ಜಾರಿಯಾಗಿದೆ. ತೆರಿಗೆ ನೋಟಿಸ್ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.
ಹೊಸ ನೋಟಿಸ್ 2017-18 ರಿಂದ 2020-21 ರವರೆಗಿನ ವರ್ಷಗಳಿಗೆ ದಂಡ ಮತ್ತು ಬಡ್ಡಿಯನ್ನು ಒಳಗೊಂಡಿರುತ್ತದೆ. ಆದಾಯ ತೆರಿಗೆ ಅಧಿಕಾರಿಗಳು 200 ಕೋಟಿ ರೂಪಾಯಿ ದಂಡವನ್ನು ವಿಧಿಸಿ ಮತ್ತು ಅದರ ಹಣವನ್ನು ಸ್ಥಗಿತಗೊಳಿಸಿದ ನಂತರ ಕಾಂಗ್ರೆಸ್ ಈಗ ಹಣದ ಕೊರತೆಯನ್ನು ಎದುರಿಸುತ್ತಿದೆ. ಪ್ರಕರಣದಲ್ಲಿ ಪಕ್ಷವು ಹೈಕೋರ್ಟ್ನಿಂದ ಯಾವುದೇ ಪರಿಹಾರವನ್ನು ಪಡೆದಿಲ್ಲ ಮತ್ತು ಸುಪ್ರೀಂ ಕೋರ್ಟ್ಗೆ ದಾವೆ ಹೂಡುವ ಸಾಧ್ಯತೆಯಿದೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ತನ್ನ ವಿರುದ್ಧ ಬಳಸುತ್ತಿದೆ. ಮುಂದಿನ ತಿಂಗಳು ಅಂದರೆ ಏಪ್ರಿಲ್ 19 ರಿಂದ ಪ್ರಾರಂಭವಾಗುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಆರ್ಥಿಕವಾಗಿ ತನ್ನ ಕತ್ತು ಹಿಸುಕುತ್ತಿದೆ ಎಂದು ಪಕ್ಷ ಆರೋಪಿಸಿದೆ. ನಮ್ಮನ್ನು ಆರ್ಥಿಕವಾಗಿ ದುರ್ಬಲಗೊಳಿಸಲು ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ಗಳನ್ನು ಕಳುಹಿಸಲಾಗುತ್ತಿದೆ. ಇದು ತೆರಿಗೆ ಭಯೋತ್ಪಾದನೆ ಮತ್ತು ಇದನ್ನು ಕಾಂಗ್ರೆಸ್ ಮೇಲೆ ದಾಳಿ ಮಾಡಲು ಬಳಸಲಾಗುತ್ತಿದೆ, ಇದು ನಿಲ್ಲಬೇಕು ಎಂದು ಕಾಂಗ್ರೆಸ್ನ ಜೈರಾಮ್ ರಮೇಶ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಐಟಿ ಇಲಾಖೆಯು ಕಾಂಗ್ರೆಸ್ ಪಕ್ಷದ ತೆರಿಗೆ ರಿಟರ್ನ್ಸ್ನಲ್ಲಿ ದೋಷ ಕಂಡು ಬಂದದ್ದರಿಂದ 200 ಕೋಟಿ ರೂಪಾಯಿಗೆ ಫೆಬ್ರವರಿಯಲ್ಲಿ ಬೇಡಿಕೆ ಇಟ್ಟಿತ್ತು. ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಪಕ್ಷಕ್ಕೆ ಬಾಕಿ ಪಾವತಿಸಲು ಮತ್ತು ಅವರ ಖಾತೆಗಳನ್ನು ಸ್ಥಗಿತಗೊಳಿಸುವಂತೆ ಸೂಚಿತ್ತು.
ಆದಾಯ ತೆರಿಗೆ ಇಲಾಖೆಯಿಂದ ಲೋಕಸಭೆ ಚುನಾವಣೆಗೆ ಮುನ್ನ ಈ ಆದೇಶ ಬಂದಿರುವುದರಿಂದ ಐಟಿಎಟಿ ತನ್ನ ಹಣವನ್ನು ಸ್ಥಗಿತಗೊಳಿಸಿದ ಆದೇಶವು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ಹೇಳಿದೆ. ದೆಹಲಿ ಹೈಕೋರ್ಟ್ ನಾಲ್ಕು ವರ್ಷಗಳ ಅವಧಿಗೆ ಕಾಂಗ್ರೆಸ್ ವಿರುದ್ಧ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಾರಂಭಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳನ್ನು ಗುರುವಾರ ತಿರಸ್ಕರಿಸಿದೆ.
ರಾಜಕೀಯ ಪಕ್ಷಗಳಿಗೆ ಧನಸಹಾಯವು ವಿಶೇಷವಾಗಿ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ಗಳನ್ನು ರದ್ದುಗೊಳಿಸಿದ ನಂತರ ಈ ಚುನಾವಣೆಯಲ್ಲಿ ಪ್ರಮುಖ ವಿಷಯವಾಗಿದೆ. ಇದು ವ್ಯಕ್ತಿಗಳು ಅಥವಾ ಕಂಪೆನಿಗಳಿಗೆ ರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆಗಳನ್ನು ನೀಡಲು ಅವಕಾಶ ನೀಡುತ್ತದೆ. ಇದು ನಾಗರಿಕರ ಮಾಹಿತಿಯ ಹಕ್ಕನ್ನು ಉಲ್ಲಂಘಿಸಿದೆ. ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ತೀರ್ಪನ್ನು ಸ್ವಾಗತಿಸಿದವು. ಸುಪ್ರೀಂ ಕೋರ್ಟ್ ಬಿಜೆಪಿಗೆ ಹೆಚ್ಚು ಲಾಭದಾಯಕವಾಗಿದ್ದ ಯೋಜನೆಯನ್ನು ರದ್ದುಗೊಳಿಸಿತು.


Click it and Unblock the Notifications