ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಪ್ರಮುಖ ಆರೋಗ್ಯ ವಿಮಾ ಯೋಜನೆಯಾದ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯು 2018 ರಲ್ಲಿ ಪ್ರಾರಂಭವಾದ ಐದು ವರ್ಷಗಳಲ್ಲಿ ಕನಿಷ್ಠ 1 ಲಕ್ಷ ಕೋಟಿ ರೂಪಾಯಿ ಚಿಕಿತ್ಸಾ ವೆಚ್ಚವನ್ನು ಉಳಿಸಲು ಸಹಾಯ ಮಾಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿಅಂಶಗಳು ತೋರಿಸಿವೆ.
ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ 5.7 ಕೋಟಿ ರೂಪಾಯಿಗೂ ಹೆಚ್ಚು ನಗದು ರಹಿತ ಚಿಕಿತ್ಸೆಗಳನ್ನು ಒದಗಿಸಲಾಗಿದೆ. 25.4 ಕೋಟಿ ಫಲಾನುಭವಿಗಳ ಕಾರ್ಡ್ಗಳನ್ನು ಜನರೇಟ್ ಮಾಡಲಾಗಿದೆ," ಎಂದು ಆರೋಗ್ಯ ಸಚಿವಾಲಯದ ದಾಖಲೆಯು ಉಲ್ಲೇಖಿಸಿದೆ.

ವಿಶ್ವದ ಅತಿದೊಡ್ಡ ಸಾರ್ವಜನಿಕ ಆರೋಗ್ಯ ರಕ್ಷಣಾ ಯೋಜನೆಯಾದ ಎಬಿ- ಪಿಎಂಜೆಎವೈ ಅಡಿಯಲ್ಲಿ, ಆಯ್ದ ಅಭಾವ ಮತ್ತು ಔದ್ಯೋಗಿಕ ಮಾನದಂಡಗಳ ಆಧಾರದ ಮೇಲೆ ಗುರುತಿಸಲಾದ ಕನಿಷ್ಠ 600 ಮಿಲಿಯನ್ ಫಲಾನುಭವಿಗಳ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂಪಾಯಿ ಆರೋಗ್ಯ ರಕ್ಷಣೆಯನ್ನು ಒದಗಿಸಲಾಗುತ್ತದೆ.
ದುರಂತದ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕ ಅಪಾಯದ ರಕ್ಷಣೆಯನ್ನು ಒದಗಿಸಲು ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಈ ಯೋಜನೆಯಡಿಯಲ್ಲಿ 27,343 ಆಸ್ಪತ್ರೆಗಳನ್ನು ಸೇರ್ಪಡೆ ಮಾಡಲಾಗಿದೆ. ಇಷ್ಟು ಆಸ್ಪತ್ರೆಗಳು ನಗದು ರಹಿತ ಮತ್ತು ಪೋರ್ಟಬಲ್ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುತ್ತಿದೆ.
ಯೋಜನೆಯ ಐದು ವರ್ಷಗಳ ಯಶಸ್ವಿ ಸ್ಪರ್ಧೆಯ ಕುರಿತು, ಕೇಂದ್ರ ಆರೋಗ್ಯ ಕಾರ್ಯದರ್ಶಿ ಸುಧಾಂಶ್ ಪಂತ್ ಇತ್ತೀಚೆಗೆ ತಿಳಿಸಿದರು. "ಸುಮಾರು ಶೇಕಡ 60 ರಷ್ಟು ಮೊತ್ತವನ್ನು ತೃತೀಯ ಆರೈಕೆ ಆಸ್ಪತ್ರೆಗೆ ಬಳಸಲಾಗಿದೆ. ಎಬಿ- ಪಿಎಂಜೆಎವೈ ಯೋಜನೆ ಆರಂಭವಾದ ಗುರಿಗಳಲ್ಲಿ ಇದು ಒಂದಾಗಿದೆ," ಎಂದು ಹೇಳಿದರು.
"ಅಲ್ಲದೆ, ಪ್ರತಿ ನಿಮಿಷಕ್ಕೆ 177 ಆಯುಷ್ಮಾನ್ ಪಿಎಂಜೆಎವೈ ಕಾರ್ಡ್ಗಳನ್ನು ಮಾಡಲಾಗುತ್ತಿದ್ದು, ಪ್ರತಿ ನಿಮಿಷಕ್ಕೆ 30 ಜನರು ಆಸ್ಪತ್ರೆಗೆ ದಾಖಲಾಗುತ್ತಾರೆ. ಹೆಚ್ಚುವರಿಯಾಗಿ, ಆಸ್ಪತ್ರೆಗೆ ದಾಖಲಾಗುವವರಲ್ಲಿ ಶೇಕಡ 48 ರಷ್ಟು ಮಹಿಳಾ ಫಲಾನುಭವಿಗಳಾಗಿದ್ದರೆ, ದಿನಕ್ಕೆ ಸರಾಸರಿ 8 ಆಸ್ಪತ್ರೆಗಳನ್ನು ಎಂಪನೆಲ್ ಮಾಡಲಾಗುತ್ತಿದೆ," ಎಂದು ತಿಳಿಸಿದರು.
ಈ ಯೋಜನೆಯನ್ನು 33 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಗೆ ತರಲಾಗಿದ್ದರೂ, ಮೂರು ರಾಜ್ಯಗಳಾದ ಒಡಿಶಾ, ಪಶ್ಚಿಮ ಬಂಗಾಳ ಮತ್ತು ದೆಹಲಿಯಲ್ಲಿ ಇನ್ನೂ ಜಾರಿಗೆ ತರಲಾಗಿಲ್ಲ. ಪ್ರತ್ಯೇಕವಾಗಿ, ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಪ್ರಾರಂಭವಾದ ಎರಡು ವರ್ಷಗಳ ನಂತರ, ಕನಿಷ್ಠ 450 ಮಿಲಿಯನ್ ಆಯುಷ್ಮಾನ್ ಭಾರತ್ ಆರೋಗ್ಯ ಐಡಿಗಳನ್ನು ರಚಿಸಲಾಗಿದೆ.
"2.19 ಲಕ್ಷಕ್ಕೂ ಹೆಚ್ಚು ಆರೋಗ್ಯ ಸೌಲಭ್ಯಗಳನ್ನು ನೋಂದಾಯಿಸಲಾಗಿದೆ. 2.28 ಲಕ್ಷಕ್ಕೂ ಹೆಚ್ಚು ಆರೋಗ್ಯ ವೃತ್ತಿಪರರು ಈಗಾಗಲೇ ಡಿಜಿಟಲ್ ಮಿಷನ್ ಅಡಿಯಲ್ಲಿ ಮಂಡಳಿಯಲ್ಲಿದ್ದಾರೆ," ಎಂದು ಆರೋಗ್ಯ ಸಚಿವಾಲಯದ ಹೇಳಿಕೆ ತಿಳಿಸಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications