ಬೆಂಗಳೂರು, ಜುಲೈ 5: 256 ಕೋಟಿ ವೆಚ್ಚದಲ್ಲಿ ಏಳು ಹೊಸ 100 ಹಾಸಿಗೆಗಳ ತಾಲೂಕು ಆಸ್ಪತ್ರೆಗಳನ್ನು ಸ್ಥಾಪಿಸುವ ಯೋಜನೆಗೆ ಗುರುವಾರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಆನೇಕಲ್, ಹೊಸಕೋಟೆ, ಖಾನಾಪುರ, ನೆಲಮಂಗಲ, ಶಿರಹಟ್ಟಿ, ಶೃಂಗೇರಿ ಮತ್ತು ಯಳಂದೂರಿನಲ್ಲಿ ಹೊಸ ತಾಲೂಕು ಆಸ್ಪತ್ರೆಗಳು ಬರಲಿವೆ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ನ ನೆರವಿನೊಂದಿಗೆ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.

ಮತ್ತೊಂದು ನಿರ್ಧಾರದಲ್ಲಿ, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ ಮೂಲಕ 563 ನಮ್ಮ ಕ್ಲಿಂಕ್ಗಳಲ್ಲಿ ಪ್ರಯೋಗಾಲಯಗಳನ್ನು ಬಲಪಡಿಸಲು ಔಷಧಿಗಳು, ಉಪಕರಣಗಳು ಮತ್ತು ಇತರ ಅಗತ್ಯತೆಗಳನ್ನು ಖರೀದಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಅಲ್ಲದೆ, 15 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಇತರ ನಿರ್ಧಾರಗಳು:
ಅಗ್ನಿ ಅವಘಡದಲ್ಲಿ ಮೃತಪಟ್ಟ ಬಿಬಿಎಂಪಿ ಮುಖ್ಯ ಎಂಜಿನಿಯರ್ ಸಿಎಂ ಶಿವಕುಮಾರ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಬಿಎಂಟಿಸಿಗೆ 840 ಹೊಸ ಬಿಎಸ್-6 ಬಸ್ಗಳು 363.82 ಕೋಟಿ ರೂ.
ಕೆಇಎ ಕಟ್ಟಡ ಮೇಲ್ದರ್ಜೆಗೇರಿಸಲು 30 ಕೋಟಿ ರೂ.
ಡಿಸಿಎಫ್ ಆಗಿ ಬಡ್ತಿ ಪಡೆಯಲು ಕನಿಷ್ಠ ಸೇವಾ ಅವಧಿಯನ್ನು 5 ವರ್ಷದಿಂದ ಮೂರು ವರ್ಷಕ್ಕೆ ಇಳಿಸಲು ಅನುಮೋದನೆ.
ಕರ್ನಾಟಕ ಭವನದಲ್ಲಿರುವ ಐಎಎಸ್ ಅಧಿಕಾರಿಗಳ ಸಂಖ್ಯೆಯನ್ನು ಐದರಿಂದ ಎರಡಕ್ಕೆ ಕಡಿತಗೊಳಿಸುವುದು.


Click it and Unblock the Notifications