ಕೇವಲ ಮೂರು ತಿಂಗಳಿನಲ್ಲಿ ಡೆಬಿಟ್ ಕಾರ್ಡ್ ವಹಿವಾಟು, ಇಂಟರ್ನೆಂಟ್ ಬ್ಯಾಂಕಿಂಗ್ನಲ್ಲಿ ನೂರಾರು ಕೋಟಿ ರುಪಾಯಿ ವಂಚನೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯದ ಸಚಿವ ಅನುರಾಗ್ ಠಾಕೂರ್ ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಲಿಖಿತ ರೂಪದಲ್ಲಿ ಉತ್ತರಿಸಿದ್ದಾರೆ.
ಡಿಸೆಂಬರ್ 2019ರವರೆಗೆ ಒಟ್ಟು ದಾಖಲಾದ ಪ್ರಕರಣಗಳು 21,041ರಷ್ಟಿದ್ದು, ಕೇವಲ ಮೂರು ತಿಂಗಳಿನಲ್ಲಿ 129 ಕೋಟಿ ರುಪಾಯಿ ನಷ್ಟವಾಗಿದೆ ಎಂದು ಪ್ರಶ್ನೆಗೆ ಉತ್ತರಿಸಲಾಗಿದೆ.
ಅಕ್ಟೋಬರ್ ತಿಂಗಳಿನಲ್ಲಿ ಅತಿ ಹೆಚ್ಚು ವಂಚನೆ
ಡೆಬಿಟ್ ಕಾರ್ಡ್ ವಹಿವಾಟು, ಕ್ರೆಡಿಟ್ ಕಾರ್ಡ್ , ಇಂಟರ್ನೆಟ್ ಬ್ಯಾಂಕಿಂಗ್ ನಲ್ಲಿ ಒಟ್ಟು ಆಗಿರುವ 129 ಕೋಟಿ ರುಪಾಯಿ ವಂಚನೆಯಲ್ಲಿ ಬಹುಪಾಲು ನಡೆದಿರುವುದು ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಎಂದು ದಾಖಲಾಗಿದೆ.
2019ರ ಅಕ್ಟೋಬರ್ನಲ್ಲಿ 85 ಕೋಟಿ ರುಪಾಯಿಗಳನ್ನು ವಂಚಕರು ದೋಚಿದ್ದಾರೆ. ಎಟಿಎಂ ಹಾಗೂ ಡೆಬಿಟ್ ಕಾರ್ಡ್ ವಹಿವಾಟಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಗರಿಷ್ಟ ಪ್ರಕರಣಗಳು ದಾಖಲಾಗಿವೆ. ಆದರೆ ಇದು ಮಾರುಕಟ್ಟೆಯಲ್ಲಿ ಲಭ್ಯವಿರುವ ಅತಿ ಸಾಮಾನ್ಯ ಮತ್ತು ಸುಲಭ ಮಾರ್ಗವಾಗಿದೆ.
2019-20ರ ಹಣಕಾಸು ವರ್ಷದಲ್ಲಿ 50,000 ಕೇಸ್
2019ರ ಹಣಕಾಸು ವರ್ಷದಲ್ಲಿ ದೇಶದಲ್ಲಿ ಕೇವಲ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ವಂಚನೆಗಳ ವಿಷಯದಲ್ಲಿ, ಸುಮಾರು 150 ಕೋಟಿ ರುಪಾಯಿ ವಂಚನೆಗಳಲ್ಲಿ 50,000 ಕೇಸ್ಗಳಿವೆ . ಡಿಜಿಟಲ್ ಪಾವತಿಯ ಪ್ರಮಾಣದಲ್ಲಿ ಏರಿಕೆಯೊಂದಿಗೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ಭಾವಿಸುವುದು ಸಾಮಾನ್ಯವಾಗಿಬಿಟ್ಟಿದೆ.
ಸೈಬರ್ ವಂಚನೆಗಳ ನಿಖರವಾದ ಡೇಟಾಬೇಸ್ ಇಲ್ಲ
‘ಸೈಬರ್ ವಂಚನೆಗಳು' ವಿಭಾಗದಲ್ಲಿ ವರದಿಯಾದ ವಂಚನೆಗಳ ಮಾಹಿತಿ ಲಭ್ಯವಿಲ್ಲ ಎಂದು ಆರ್ಬಿಐ ಮಾಹಿತಿ ನೀಡಿದೆ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ. ಇದಕ್ಕಾಗಿಯೇ ವಂಚನೆಗಳ ಡೇಟಾವನ್ನು ಕಾರ್ಡ್, ಇಂಟರ್ನೆಟ್ , ಎಟಿಎಂ / ಡೆಬಿಟ್ ವಿಭಾಗದಲ್ಲಿ ವರದಿ ಮಾಡಲಾಗಿದೆ
ಕಾರ್ಡ್ಗಳು, ಕ್ರೆಡಿಟ್ ಕಾರ್ಡ್ಗಳು ಮತ್ತು ಇಂಟರ್ನೆಟ್ ಬ್ಯಾಂಕಿಂಗ್ ಜೊತೆಗೆ ಡಿಜಿಟಲ್ ಪಾವತಿ ಹೆಚ್ಚುತ್ತಿರುವ ಆಯ್ಕೆಗಳೊಂದಿಗೆ, ಸೈಬರ್ ವಂಚನೆಗಳ ನಿಖರವಾದ ಡೇಟಾಬೇಸ್ ಇಲ್ಲದಿರುವುದು ಕಾರ್ಯ ಸುಗಮತೆಗೆ ಅಡ್ಡಿಯಾಗಿದೆ.
ಡಿಜಿಟಲ್ ವಹಿವಾಟು ನೂರಕ್ಕೆ ನೂರರಷ್ಟು ಸುರಕ್ಷಿತವಾಗಿಲ್ಲ?
ಡಿಜಿಟಲ್ ವಹಿವಾಟಿನಲ್ಲಿನ ವಂಚನೆಯನ್ನು ನಿಗ್ರಹಿಸಲು ಏಜೆನ್ಸಿಗಳು ಮತ್ತು ಸರ್ಕಾರವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ ಸಹ, ಫಲಿತಾಂಶಗಳು ಇನ್ನೂ ಸಂಪೂರ್ಣವಾಗಿಲ್ಲ. ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿಕೆ ಪ್ರಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳಿಂದ ಗ್ರಾಹಕರಿಗೆ ಹಣಕಾಸು ಸೇವೆಗಳ ವೆಚ್ಚವನ್ನು ಕಡಿಮೆ ಮಾಡುವುದರ ಮೂಲಕ ಮತ್ತು ಸೇವೆಗಳ ವ್ಯಾಪ್ತಿಯನ್ನು ಹೆಚ್ಚಿಸುವುದರ ಜೊತೆಗೆ , ಉತ್ಪನ್ನಗಳನ್ನು ಸುರಕ್ಷಿತ ರೀತಿಯಲ್ಲಿ ನೀಡುವ ಸೇವೆಯನ್ನು ನೀಡಬೇಕೆಂದು ಹೇಳಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications