2 ಸಾರ್ವಜನಿಕ ವಲಯದ ಬ್ಯಾಂಕುಗಳ ಖಾಸಗೀಕರಣದ ವಿರುದ್ಧ ಸುಮಾರು 10 ಲಕ್ಷ ಬ್ಯಾಂಕ್ ನೌಕರರು ಇಂದು ಮತ್ತು ನಾಳೆ (ಮಾರ್ಚ್ 15, 16)ರಂದು ಮುಷ್ಕರ ನಡೆಸುತ್ತಿವೆ. ಇದರಿಂದಾಗಿ ಬ್ಯಾಂಕ್ ಶಾಖೆಗಳಲ್ಲಿ ಠೇವಣಿ ಮತ್ತು ಹಣವನ್ನು ಹಿಂಪಡೆಯುವುದು ಸೇರಿದಂತೆ ಚೆಕ್ ಕ್ಲಿಯರಿಂಗ್ ಕೆಲಸದ ಮೇಲೆ ಪರಿಣಾಮ ಬೀರುತ್ತದೆ.
ಬ್ಯಾಂಕ್ಗಳ ಒಕ್ಕೂಟದ ಮುಷ್ಕರದಿಂದಾಗಿ ಈಗಾಗಲೇ ಹಣ ತುಂಬಿರುವ ಎಟಿಎಂಗಳು ಹಣ ಸಿಗಲಿದ್ದು, ಅವುಗಳು ಖಾಲಿಯಾದ ಬಳಿಕ ಭರ್ತಿಯಾಗುವ ಸಾಧ್ಯತೆ ಕಡಿಮೆಯಿದೆ. ಹೀಗಾಗಿ ಇಂತಹ ಸಂದರ್ಭದಲ್ಲಿ ಎಟಿಎಂ ಸೇವೆಯ ಮೇಲೂ ಪರಿಣಾಮ ಬೀರಬಹುದು.

ಬ್ಯಾಂಕುಗಳ ಈ ಮುಷ್ಕರವನ್ನು ಎಸ್ ಬಿ ಐ ನೇತೃತ್ವದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.
ಈಗಾಗಲೇ ಕಳೆದ ಶನಿವಾರ ಮತ್ತು ಭಾನುವಾರದ ಕಾರಣ ಬ್ಯಾಂಕುಗಳು ಈಗಾಗಲೇ ಮಾರ್ಚ್ 13 ಮತ್ತು ಮಾರ್ಚ್ 14 ರಂದು ಮುಚ್ಚಲ್ಪಟ್ಟಿವೆ. ಇದಲ್ಲದೆ, ಈಗ ಇನ್ನೂ ಎರಡು ದಿನ ಬ್ಯಾಂಕುಗಳು ಮುಚ್ಚಲ್ಪಟ್ಟಿವೆ. ಆದರೂ ಈ ಮುಷ್ಕರ ಸಂದರ್ಭದಲ್ಲಿ ದೇಶದ ಖಾಸಗಿ ಬ್ಯಾಂಕುಗಳು ಮುಕ್ತವಾಗಿರುವುದು ಸಮಾಧಾನಕರ ಸಂಗತಿಯಾಗಿದೆ. ಈ ಖಾಸಗಿ ಬ್ಯಾಂಕುಗಳಲ್ಲಿ ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಕೊಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಇಂಡಸ್ಇಂಡ್ ಬ್ಯಾಂಕ್, ಆಕ್ಸಿಸ್ ಬ್ಯಾಂಕ್ಗಳು ಸೇರಿವೆ.
ಕೇಂದ್ರ ಬಜೆಟ್ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎರಡು ಸಾರ್ವಜನಿಕ ವಲಯದ ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು. ಇದರ ಮೂಲಕ 1.75 ಲಕ್ಷ ಕೋಟಿ ರೂ.ಗಳನ್ನು ಸಂಗ್ರಹಿಸುವ ಯೋಜನೆಯಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ. ಇದನ್ನು ವಿರೋಧಿಸಿ ಬ್ಯಾಂಕ್ ನೌಕರರು 2 ದಿನಗಳ ಮುಷ್ಕರ ನಡೆಸುತ್ತಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications