ಕೊರೊನಾ ಹಿನ್ನೆಲೆ ಆರ್ಬಿಐ ಘೋಷಿಸಿದ್ದ ಇಎಂಐ ಮುಂದೂಡಿಕೆಯ ಅವಕಾಶವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ಬ್ಯಾಂಕಿನ ಸಾಲಗಾರರಲ್ಲಿ 20 ಪರ್ಸೆಂಟ್ರಷ್ಟು ಮಂದಿ ಆರಿಸಿಕೊಂಡಿದ್ದಾರೆ ಎಂದು ಎಸ್ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಹೇಳಿದ್ದಾರೆ.
"ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವಿಷಯದಲ್ಲಿ, (ನಿಷೇಧವನ್ನು ಆರಿಸಿಕೊಂಡ ಸಾಲಗಾರರ ಪರ್ಸೆಂಟ್) ಬಹಳ ಕಡಿಮೆ, 20 ಪರ್ಸೆಂಟ್ರಷ್ಟಿದೆ" ಎಂದು ಕುಮಾರ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸುದ್ದಿಗಾರರಿಗೆ ತಿಳಿಸಿದರು.

"ಅವರಲ್ಲಿ ಅನೇಕರು ತಮ್ಮ ಸಾಲಗಳನ್ನು ಪೂರೈಸಬಹುದಿತ್ತು ಆದರೆ ಕಾರ್ಯತಂತ್ರದ ವಿಷಯವಾಗಿ ಅವರು ತಮ್ಮ ಹಣವನ್ನು ಉಳಿಸಿಕೊಳ್ಳಲು ಬಯಸುತ್ತಾರೆ ಮತ್ತು ನಿಷೇಧವನ್ನು ಆರಿಸಿಕೊಂಡಿದ್ದಾರೆ" ಎಂದು ಅವರು ಹೇಳಿದರು. ಜೊತೆಗೆ ಯಾವುದೇ ಹಣಕಾಸಿನ ಸವಾಲನ್ನು ಎದುರಿಸದಿದ್ದರೆ ಸಾಲಗಾರರಿಗೆ ಸಾಲ ಪಾವತಿಸುವಂತೆ ಕುಮಾರ್ ಸಲಹೆ ನೀಡಿದರು.
ಆರ್ಬಿಐ ಇಂದು(ಶುಕ್ರವಾರ) ವಿವಿಧ ಅವಧಿಯ ಸಾಲಗಳ ಮೇಲಿನ ಇಎಂಐ ಪಾವತಿಯಿಂದ ಮತ್ತೆ ಮೂರು ತಿಂಗಳ ಅವಧಿಗೆ ವಿನಾಯಿತಿ ಘೋಷಣೆ ಮಾಡಿತು. ಕೊರೊನಾದ ಕಾರಣಕ್ಕೆ ದೇಶದಾದ್ಯಂತ ಲಾಕ್ ಡೌನ್ ಹಿನ್ನೆಲೆಯಲ್ಲಿ ಈ ಹಿಂದೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇಎಂಐ ಪಾವತಿಗೆ ಮೂರು ತಿಂಗಳ ವಿನಾಯಿತಿ ಘೋಷಣೆ ಮಾಡಿತ್ತು. ಅದನ್ನೇ ಮುಂದುವರಿಸಿ ಜೂನ್ 1ರಿಂದ ಆಗಸ್ಟ್ 31ನೇ ತಾರೀಕಿನ ತನಕ ಮತ್ತೆ ಇಎಂಐ ಪಾವತಿಗೆ ವಿನಾಯಿತಿ ನೀಡಲಾಗಿದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!



Click it and Unblock the Notifications