
ತೈಲ ರಫ್ತುದಾರರು ಅಮೆರಿಕದ ಕರೆನ್ಸಿ ಬೇಡಿಕೆ ಇಟ್ಟಿರುವ ಹಿನ್ನೆಲೆಯಲ್ಲಿ ವಿಶ್ವ ಮಾರುಕಟ್ಟೆಯಲ್ಲಿ ಯುರೋ ಮತ್ತು ಇತರ ಕರೆನ್ಸಿಗಳ ಮುಂದೆ ಡಾಲರ್ ತನ್ನ ಮೌಲ್ಯವನ್ನು ಹೆಚ್ಚಳ ಕಂಡಿದೆ.
ಷೇರು ಮಾರುಕಟ್ಟೆಯಲ್ಲಿನ ಕುಸಿತ ಕೂಡ ರೂಪಾಯಿ ಮೌಲ್ಯದ ಮೇಲೆ ಭಾರಿ ಹೊಡೆತ ಕೊಟ್ಟಿದೆ. ಗುರುವಾರದ ಅಂತ್ಯಕ್ಕೆ ರೂಪಾಯಿ ಮೌಲ್ಯ 56.03ಕ್ಕೆ ಕುಸಿದಿತ್ತು.
ಶುಕ್ರವಾರ ಆರಂಭದಲ್ಲಿ ರೂಪಾಯಿ ಮೌಲ್ಯ 56.80 ರೂ. ಇತ್ತು. ಆದರೆ ಸ್ವಲ್ಪ ಚೇತರಿಕೆ ಕಂಡು 56.76 ಆಗಿತ್ತು. ಆದರೆ ಇದರ ಬಳಿಕ ಎಲ್ಲಾ ದಾಖಲೆಗಳನ್ನು ಹಿಂದಿಕ್ಕಿ 57.06 ಕ್ಕೆ ಕುಸಿತವಾಗಿದೆ(ಸಮಯ 11.50 IST).
ರುಪಾಯಿಗೆ ಮೌಲ್ಯಕ್ಕೆ ಸ್ಥಿರತೆ ತರಲು ಆರ್ ಬಿಐ ಈಗ ಡಾಲರ್ ಮಾರಾಟಕ್ಕೆ ಇಳಿಯುವುದೊಂದೆ ಮಾರ್ಗ ಉಳಿದಿದೆ. ಮಾರುಕಟ್ಟೆಯಲ್ಲಿನ ಏರುಪೇರುಗಳನ್ನು ಸರಿಪಡಿಸುವಲ್ಲಿ ನಿರತರಾಗಿರುವ ಆರ್ ಬಿಐ, ರುಪಾಯಿ ಕುಸಿತದ ಬಗ್ಗೆ ಇನ್ನೂ ಕ್ರಮ ಕೈಗೊಂಡಿಲ್ಲ.
ವರ್ಷದ ಆರಂಭದಲ್ಲಿ ಇದ್ದ ವಿದೇಶಿ ಬಂಡವಾಳ ಹರಿವು ಕೂಡಾ ಈಗ ಬಹುತೇಕ ನಿಂತಿದೆ. ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ವಿದೇಶಿ ನಿಧಿ ವಾಪಸ್ ಆಗಿದ್ದೇ ಹೆಚ್ಚಾಗಿತ್ತು. ಹೀಗಾಗಿ ರುಪಾಯಿ ಮೌಲ್ಯ ಇನ್ನಷ್ಟು ಕುಸಿತ ಕಾಣುವ ಸಾಧ್ಯತೆಯಿದೆ.
ಇಂಧನ ಬೆಲೆ ವ್ಯತ್ಯಯ? : ಕಳೆದ ತಿಂಗಳು ರುಪಾಯಿ ಮೌಲ್ಯ ಕುಸಿತವಾದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಖರೀದಿ ವೆಚ್ಚ ದುಬಾರಿಯಾಗಿತ್ತು. ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳು ಶೇ 11 ರಷ್ಟು ಪೆಟ್ರೋಲ್ ಬೆಲೆಯನ್ನು ಏರಿಕೆ ಮಾಡಿದ್ದವು.
ಇದರಿಂದ ಜನ ಸಾಮಾನ್ಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ವಿಪಕ್ಷಗಳು ಶುಕ್ರವಾರ(ಜೂ.22)ದಂದು ಜೈಲು ಭರೋ ನಡೆಸಿದ್ದರು. ಈಗ ಮತ್ತೊಮ್ಮೆ ಡಾಲರ್ ಬೆಲೆ ಏರಿಕೆಯಾಗಿರುವುದರಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.ಆರ್ಥಿಕ ಮೂಲಗಳು ಇನ್ನಷ್ಟು ಕುಸಿತ ಕಂಡು ಪರಿಸ್ಥಿತಿ ಬಿಗಡಾಯಿಸುವ ಲಕ್ಷಣಗಳು ತೋರಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications