
ಜೂ.30,2012ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಸುಮಾರು 651 ಕೋಟಿ ರು ನಷ್ಟ ಅನುಭವಿಸಿರುವ ಕಿಂಗ್ ಫಿಷರ್ ಷೇರುಗಳು ಸೋಮವಾರ ನೆಲಕಚ್ಚಲಿದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು.
ಆದರೆ, ಛಲದಂಕಮಲ್ಲ ಮಲ್ಯರ ಕುದುರೆ ಷೇರುಪೇಟೆಯಲ್ಲಿ ಭರ್ಜರಿಯಾಗಿ ಗಗನದೆತ್ತರಕ್ಕೆ ಓಡುತ್ತಿದೆ. ಕಳೆದ ವರ್ಷದ ತ್ರೈಮಾಸಿಕದಲ್ಲಿ 251 ಕೋಟಿ ರು ನಷ್ಟ ಅನುಭವಿಸಿದ್ದ ಪ್ರತಿಷ್ಠಿತ ಏರ್ ಲೈನ್ಸ್ ಸಂಸ್ಥೆ ಈ ವರ್ಷ ಅದೇ ಅವಧಿಯಲ್ಲಿ 651 ಕೋಟಿ ರು ನಷ್ಟ ಅನುಭವಿಸಿರುವುದು ಮಲ್ಯರಿಗೆ ನುಂಗಲಾರದ ತುತ್ತಾಗಿದೆ.
ಜೊತೆಗೆ ಏರ್ ಲೈನ್ಸ್ ಉದ್ಯೋಗಿಗಳಿಗೆ ಸಂಬಳ, 30 -40 ವಿಮಾನ ಹಾರಾಟ ರದ್ದು ಪ್ರತಿ ವಾರದ ಸಮಸ್ಯೆಯಾಗಿದೆ. ಇದೆಲ್ಲದರ ನಡುವೆ ಷೇರುಗಳ ಏರಿಕೆ ಹೂಡಿಕೆದಾರರಿಗೆ ಆಶಾಕಿರಣವಾಗಿ ಮಾರ್ಪಟ್ಟಿದೆ.
ಬಿಎಸ್ ಇನಲ್ಲಿ ಸೋಮವಾರ(ಆ.13) ಬೆಳಗ್ಗೆ ಕಿಂಗ್ ಫಿಷರ್ ಷೇರುಗಳು ಶೇ 18 ರಷ್ಟು ಏರಿಕೆ ಕಂಡಿದ್ದರೆ, ಯುಬಿ ಸಮೂಹದ ಷೇರುಗಳು ಶೇ 8 ರಷ್ಟು ಏರಿಕೆ ಕಂಡಿದೆ.
ಹೊಸ ಬಂಡವಾಳ ಹೂಡಿಕೆ, ಸಾಲ ತೀರಿಸುವ ಭರವಸೆ ಮೂಡಿರುವುದು ಷೇರುಗಳ ಪ್ರಗತಿ ಕಾರಣ ಇರಬಹುದು ಎಂದು ಊಹಿಸಲಾಗಿದೆ. ಕಿಂಗ್ ಫಿಷರ್ ಏರ್ ಲೈನ್ಸ್ ನಂತರ ಯುನೈಟೆಡ್ ಸ್ಪಿರಿಟ್ಸ್ ಸಾಲಬಾಧೆ ತೀರಿಸಿಕೊಳ್ಳಲು ಇಂಡಿಯನ್ ಪ್ರಿಮಿಯರ್ ಲೀಗ್ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಾರಾಟ ಮಾಡಲು ವಿಜಯ್ ಮಲ್ಯ ಮುಂದಾಗಿದ್ದರು.
ವೈಟ್ ಅಂಡ್ ಮ್ಯಾಕೆ ಬ್ರಾಂಡ್ ಖರೀದಿಸಿದ ಮೇಲೆ ಯುನೈಟೆಡ್ ಸ್ಪಿರಿಟ್ಸ್ ಜಾಗತಿಕವಾಗಿ ಉನ್ನತ ಸ್ಥಾನಕ್ಕೇರಿತ್ತು. ಆದರೆ, ಸುಮಾರು 7,000 ಕೋಟಿ ರು ಸಾಲ ಉಳಿಸಿಕೊಂಡಿರುವ ಯುನೈಟೆಡ್ ಸ್ಪಿರಿಟ್ಸ್ ಗೆ ರಿಲೀಫ್ ನೀಡಲು ಆಸ್ತಿ ಮಾರಾಟ, ಷೇರು ಮಾರಾಟಕ್ಕೆ ಕಿಂಗ್ ಮಲ್ಯ ಮುಂದಾಗಿದ್ದಾರೆ ಎನ್ನಲಾಗಿತ್ತು.
ಯುನೈಟೆಡ್ ಬ್ರೂವರೀಸ್ ನ ಸಾಲ ತೀರಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ 1,500 ಕೋಟಿ ರು ನಿಂದ 2,000 ಕೋಟಿ ಮೊತ್ತ ಷೇರುಗಳನ್ನು ಮಾರಾಟ ಮಾಡುವ ಸಾಧ್ಯತೆ ಹೆಚ್ಚಿತ್ತು. ಆರ್ಥಿಕ ಸಂಕಷ್ಟದಿಂದ ಹೊರ ಬರಲು ನಿರ್ವಹಣಾ ವೆಚ್ಚವನ್ನು ಕಳೆದ ವರ್ಷದ ವೆಚ್ಚ 429 ಕೋಟಿ ರು ನಿಂದ 204 ಕೋಟಿ ರು ಗೆ ತಗ್ಗಿಸಲಾಗಿದೆ. ಹೆಚ್ಚಿನ ವಿವರಣೆಗೆ goodreturns.in ನೋಡುತ್ತಿರಿ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications