
ನವದೆಹಲಿಯ Authority for Advance Rulings (AAR) ನೀಡಿರುವ ಮಾಹಿತಿ ಪ್ರಕಾರ ಭಾರತೀಯ ತೆರಿಗೆ ಕಾನೂನಿನ ಪ್ರಕಾರ ಅಮೆರಿಕದಲ್ಲಿರುವ ಸತ್ಯಂ ಹೂಡಿಕೆದಾರರು ಗಳಿಸಿರುವ ಮೊತ್ತದ ಪರಿಹಾರ ಮೇಲೆ ತೆರಿಗೆಯನ್ನು ಪಡೆಯಬೇಕಾಗುತ್ತದೆ ಎಂದು AAR ಹೇಳಿದೆ.
ಸತ್ಯಂ ರಾಜು ಫಲ: ಸುಮಾರು 14,000 ಕೋಟಿ ರು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ರಾಮಲಿಂಗ ರಾಜು ಜಾಮೀನು ಪಡೆದು ಆರಾಮವಾಗಿದ್ದಾರೆ. ಆದರೆ, ಸತ್ಯಂನಲ್ಲಿ ಹೂಡಿಕೆ ಮಾಡಿದ್ದವರು ಸಿಕ್ಕ ಪರಿಹಾರಕ್ಕೆ ತೆರಿಗೆ ಕಟ್ಟುವ ಭೀತಿ ಎದುರಿಸುತ್ತಿದ್ದಾರೆ.
ಸತ್ಯಂ ಕಂಪ್ಯೂಟರ್ಸ್ ಮಾಜಿ ಅಧ್ಯಕ್ಷ ರಾಮಲಿಂಗ ರಾಜು ದಿವಾಳಿಯಾಗಿದ್ದಾರೆಂದು ನ್ಯೂಯಾರ್ಕ್ ಕೋರ್ಟ್ 2010ರಲ್ಲಿ ಘೋಷಿಸಿತ್ತು. ತಾವೇ ಸ್ಥಾಪಿಸಿದ ಸಂಸ್ಥೆಯ ಲೆಕ್ಕಪತ್ರದಲ್ಲಿ 14ಸಾವಿರಕೋಟಿ ವಂಚನೆ ಎಸಗಿರುವುದಾಗಿ ರಾಜು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು.
ಭಾರತ ಮತ್ತು ಅಮೇರಿಕಾದಲ್ಲಿ ಅವರ ವಿರುದ್ದ ವಿಚಾರಣೆಗೆ ಆದೇಶಿಸಲಾಗಿತ್ತು. ರಾಜು ಜೊತೆ ಅವರ ಸೋದರ ಮಾವ ಮತ್ತು ಸಂಸ್ಥೆಯ ಮಾಜಿ ಹಣಕಾಸು ಮುಖ್ಯಸ್ಥ ಶ್ರೀನಿವಾಸ್ ವಿ ಅವರನ್ನು ಕೋರ್ಟ್ ದಿವಾಳಿಯೆಂದು ಘೋಷಿಸಿದೆ.
ಅಮೆರಿಕಾದಲ್ಲಿ ನಡೆಯುತ್ತಿರುವ ವಿಚಾರಣೆಗೆ ಸಂಬಂಧಿಸಿದಂತೆ ವಕೀಲರನ್ನು ನೇಮಿಸಿಕೊಳ್ಳಲು ಮತ್ತು ಕೋರ್ಟ್ ಶುಲ್ಕ ಪಾವತಿಸಲು ನಮ್ಮಿಂದ ಸಾಧ್ಯವಿಲ್ಲ ಎಂದು ಆರೋಪಿಗಳು ಕೋರ್ಟ್ ನಲ್ಲಿ ಮನವಿ ಮಾಡಿಕೊಂಡಿದ್ದರು.
ವಿಚಾರಣೆಯ ಶುಲ್ಕವನ್ನು ಭರಿಸಲು ತಮ್ಮಿಂದ ಸಾಧ್ಯವಿಲ್ಲ ಎಂದಿದ್ದರು. ಇದನ್ನು ಕೋರ್ಟ್ ಒಪ್ಪಿಕೊಂಡು ಅವರನ್ನು 'ನಿರ್ಗತಿಕರು' ಎಂದು ಕೋರ್ಟ್ ಆದೇಶಿಸಿತ್ತು.
ಹೀಗಾಗಿ ಅಮೆರಿಕದಲ್ಲಿನ ಹೂಡಿಕೆದಾರರು ಸತ್ಯಂ ಸಂಸ್ಥೆಯಿಂದ ಪರಿಹಾರ ರೂಪದಲ್ಲಿ ಮಾರ್ಚ್ 31,2011ಕ್ಕೆ ಅನುಗುಣವಾಗಿ 567 ಕೋಟಿ ಬಂಡವಾಳ ವಾಪಸ್ ಪಡೆದಿದ್ದರು.ಈಗ ಈ ಮೊತ್ತಕ್ಕೆ ತೆರಿಗೆ ಕಟ್ಟಿ ಎಂದು ಭಾರತ ಸರ್ಕಾರ ದುಂಬಾಲು ಬೀಳುವ ಸಾಧ್ಯತೆ ನಿಚ್ಚಳವಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications