
ಬೆಂಗಳೂರು, ಸೆ.25: ವಿಜಯ್ ಮಲ್ಯ ಒಡೆತನದ ಯುನೈಟೆಡ್ ಸ್ಪಿರಿಟ್ಸ್ ಹಾಗೂ ಯುನೈಟೆಡ್ ಬ್ರೂವರೀಸ್ ಷೇರುಗಳು ಕಳೆದ ಎರಡು ದಿನಗಳಿಂದ ಏರಿಕೆ ಕಾಣುತ್ತಲೇ ಇದೆ. ಯುನೈಟೆಡ್ ಸ್ಪಿರೀಟ್ಸ್ ಹಾಗೂ ಡಿಯಾಜಿಯೋ ಸಂಸ್ಥೆ ನಡುವೆ ಷೇರು ಮಾರಾಟ ಒಪ್ಪಂದ ಏರ್ಪಟ್ಟ ಸುದ್ದಿ ಹಬ್ಬುತ್ತಿದ್ದಂತೆ ಷೇರುಗಳು ಪ್ರಗತಿ ಕಂಡಿದೆ. ಮಂಗಳವಾರ ಯುಬಿ ಸಮೂಹದ ಷೇರುಗಳು ಒಟ್ಟಾರೆ ಶೇ 3 ರಷ್ಟು ಏರಿಕೆ ಕಂಡಿದೆ.
ಬಿಎಸ್ ಇನಲ್ಲಿ ಮಂಗಳವಾರ ಮಧ್ಯಾಹ್ನ 1.15ರ ಸುಮಾರಿಗೆ ಯುನೈಟೆಡ್ ಸ್ಪಿರೀಟ್ಸ್ ಲಿಮಿಟೆಡ್ ಷೇರುಗಳು 1093.30 ರುನಂತೆ ಶೇ 3.73 ರಷ್ಟು ಏರಿಕೆ ಕಂಡಿದೆ. ದಿನದ ಆರಂಭದಲ್ಲಿ 1064 ರು ನಷ್ಟಿದ್ದ ಬೆಲೆ ಈಗ ತನ್ನ ಏರಿಕೆಯನ್ನು ಮುಂದುವರೆಸಿದೆ. ಎನ್ ಎಸ್ ಇನಲ್ಲಿ ಇದೇ ವೇಳೆ ಯುನೈಟೆಡ್ ಸ್ಪಿರೀಟ್ಸ್ ಲಿಮಿಟೆಡ್ ಷೇರುಗಳು 1093.65 ರುನಂತೆ ಶೇ 3.23 ರಷ್ಟು ಏರಿಕೆ ಕಂಡಿದೆ.
ಯುನೈಟೆಡ್ ಬ್ರೂವರೀಸ್ ಷೇರುಗಳು ಬಿಎಸ್ ಇನಲ್ಲಿ ಮಂಗಳವಾರ ಮಧ್ಯಾಹ್ನ 1.15ರ ಸುಮಾರಿಗೆ 665.00 ರು ನಂತೆ ಶೇ 0.51ರಷ್ಟು ಏರಿಕೆ ಕಂಡಿದೆ. ಎನ್ ಎಸ್ ಇನಲ್ಲಿ ಇದೇ ಮೊದಲ ಬಾರಿಗೆ 664.85 ರು ನಂತೆ ಶೇ 0.11 ರಷ್ಟು ಇಳಿಕೆ ಕಂಡಿದೆ.
ಈ ನಡುವೆ ಯುನೈಟೆಡ್ ಸ್ಪಿರೀಟ್ಸ್ ಲಿಮಿಟೆಡ್ ಸಂಸ್ಥೆಯನ್ನು ಡಿಯೋಜಿಯೊ ಪಿಎಲ್ ಸಿ ಕಂಪನಿ ಖರೀದಿಸುವ ಬಗ್ಗೆ ಮಾತುಕತೆ ನಡೆದಿರುವುದನ್ನು ಯುಬಿ ಸಮೂಹದ ವಕ್ತಾರರು ಸ್ಪಷ್ಟಪಡಿಸಿದ್ದಾರೆ.
ಯುನೈಟೆಡ್ ಸ್ಪಿರೀಟ್ಸ್ ನ ಶೇ 27 ರಷ್ಟು ಷೇರುಗಳನ್ನು ಡಿಯಾಜಿಯೋ ಸಂಸ್ಥೆ ಸುಮಾರು 3,000 ಕೋಟಿ ರು ನೀಡಿ ಖರೀದಿಸುವ ಬಗ್ಗೆ ಸುದ್ದಿ ಹಬ್ಬಿತ್ತು. ಆದರೆ, ಯುನೈಟೆಡ್ ಸ್ಪಿರೀಟ್ಸ್ ವಕ್ತಾರರು ಈ ಸುದ್ದಿಯನ್ನು ಅಲ್ಲಗೆಳೆದಿದ್ದರು.
ಬದಲಾದ ಯುಬಿ ಹಣೆಬರಹ:ಸುಮಾರು 6 ಕಂಪನಿಗಳ ಸಮೂಹ ಹೊಂದಿರುವ ಯುನೈಟೆಡ್ ಬ್ರಿವೆರೆಸ್(UB)ಸಂಸ್ಥೆಯ ಒಟ್ಟಾರೆ ಮಾರುಕಟ್ಟೆ ಮೌಲ್ಯ 22,850 ಕೋಟಿ ರೂ ತೂಗುತ್ತದೆ. 2010-11ರಲ್ಲಿ 1,027 ಕೋಟಿ ರೂ ನಷ್ಟ ಅನುಭವಿಸಿದ್ದ ಕಿಂಗ್ ಫಿಷರ್ ಒಟ್ಟಾರೆ 7,057.08 ಕೋಟಿ ಸಾಲ ತಲೆ ಮೇಲೆ ಹೊತ್ತುಕೊಂಡಿದೆ.
21,800 ಕೋಟಿ ರೂ ಸಮೂಹದ ಒಡೆಯನಾದ ಮಲ್ಯ ಅವರು ಯುಬಿ ಸಮೂಹದ ಷೇರು ಮಾರಿ ಕಿಂಗ್ ಫಿಷರ್ ಹಾರಾಟ ಸುಗಮಗೊಳಿಸುವ ಸುದ್ದಿಯೂ ಚಾಲ್ತಿಯಲ್ಲಿತ್ತು. ಇದರ ಜೊತೆಗೆ ಐಪಿಎಲ್ ನ ರಾಯಲ್ ಚಾಲೆಂಜರ್ಸ್ ತಂಡವನ್ನು ಮಾರಾಟ ಮಾಡಿ ಯುನೈಟೆಡ್ ಸ್ಪಿರೀಟ್ಸ್ ಗೆ ಜೀವ ತುಂಬುತ್ತಾರೆ ಎನ್ನಲಾಗಿತ್ತು.
ಸುಮಾರು 7,000 ಕೋಟಿ ರು ಸಾಲ ಉಳಿಸಿಕೊಂಡಿರುವ ಯುನೈಟೆಡ್ ಸ್ಪಿರಿಟ್ಸ್ ಗೆ ರಿಲೀಫ್ ನೀಡಲು ಆಸ್ತಿ ಮಾರಾಟ, ಷೇರು ಮಾರಾಟಕ್ಕೆ ಕಿಂಗ್ ಮಲ್ಯ ಮುಂದಾಗಿದ್ದಾರೆ.
ಯುನೈಟೆಡ್ ಬ್ರೂವರೀಸ್ ನ ಸಾಲ ತೀರಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ 1,500 ಕೋಟಿ ರು ನಿಂದ 2,000 ಕೋಟಿ ಮೊತ್ತ ಷೇರುಗಳನ್ನು ಮಾರಾಟ ಮಾಡುವ ಸಾಧ್ಯತೆ ಹೆಚ್ಚಿತ್ತು. ಅದರೆ, ಈಗ ಯುಬಿ ಸಮೂಹ ಷೇರುಗಳನ್ನು ಕೊಳ್ಳಲು ಡಿಯಾಜಿಯೋ ಕಂಪನಿ ಮುಂದಾಗಿರುವುದು ಎಲ್ಲಾ ಸಮಸ್ಯೆಗೂ ಪರಿಹಾರ ಸಿಕ್ಕಿದ್ದಂತಾಗಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications