
ಜೂನ್ 2012ರ ಎಣಿಕೆಗೆ ಕರ್ನಾಟಕ ಬ್ಯಾಂಕ್ ಟರ್ನ್ ಓವರ್ 55,000 ಕೋಟಿ ಇದ್ದು ಮಾರ್ಚ್ 2015ರ ವೇಳೆಗೆ 1 ಲಕ್ಷ ಕೋಟಿ ರುಗೆ ಏರಿಕೆ ಮಾಡುವ ಗುರಿ ಹೊಂದಿದೆ. ಬ್ಯಾಂಕ್ ಅಧುನೀಕರಣ, ನವೀಕರಣ ಮುಂತಾದ ಕಾರ್ಯಗಳಿಗೆ ಸುಮಾರು 30 ಲಕ್ಷ ಹೂಡಿಕೆ ಮಾಡಲಾಗಿದೆ. ಇದರ ಅಂಗವಾಗಿ ಗ್ರಾಹಕರಿಗೆ ಅನೇಕ ಸೌಲಭ್ಯಗಳು ಸಿಗಲಿದೆ.
ಪ್ರಸಕ್ತ ಆರ್ಥಿಕ ವರ್ಷದಲ್ಲಿ 65,000 ಕೋಟಿ ರು ಟರ್ನ್ ಓವರ್ ಗಳಿಕೆ ಗುರಿಯಿದೆ. 2011-12ಕ್ಕೆ ಹೋಲಿಸಿದರೆ ಶೇ 25 ರಷ್ಟು ಪ್ರಗತಿ ಸಾಧಿಸುವ ಗುರಿ ಇದೆ ಎಂದು ಭಟ್ ಹೇಳಿದರು.
ಮೊಬೈಲ್ ಬ್ಯಾಂಕಿಂಗ್ : ಹೆಚ್ಚೆಚ್ಚು ಗ್ರಾಹಕರನ್ನು ಸೆಳೆಯಲು ತಂತ್ರಜ್ಞಾನಕ್ಕೆ ಮೊರೆ ಹೋಗುತ್ತಿರುವ ಬ್ಯಾಂಕುಗಳ ಸಾಲಿಗೆ ಕರ್ನಾಟಕ ಬ್ಯಾಂಕ್ ಕೂಡಾ ಸೇರ್ಪಡೆಗೊಂಡಿದೆ. ಕರ್ನಾಟಕ ಬ್ಯಾಂಕ್ ಕೆಬಿಎಲ್ ಮೊಬೈಲ್ ಬ್ಯಾಂಕಿಂಗ್ ಸೇವೆಯನ್ನು ಆರಂಭಿಸಿದೆ.
ಈ ಸೇವೆಯ ಮೂಲಕ ಗ್ರಾಹಕರು ದಿನಕ್ಕೆ ರೂ. 50,000ದ ವರೆಗಿನ ಹಣಕಾಸು ವ್ಯವಹಾರಗಳನ್ನು ನಡೆಸಬಹುದಾಗಿದೆ. ಈ ಸೇವೆ ಸುರಕ್ಷಿತ ಹಾಗೂ ಅನುಕೂಲಕರ. ಜಿಪಿಆರ್ಎಸ್ ಹಾಗೂ ಸಿಡಿಎಂಎ ತಂತ್ರಜ್ಞಾನ ಆಧಾರಿತ ಮೊಬೈಲ್ ಗಳಲ್ಲಿ ಈ ಸೇವೆ ಒದಗಿಸಲಾಗುತ್ತದೆ. ಮೊಬೈಲ್ ರಿಚಾರ್ಜ್, ರೈಲ್ವೆ, ಬಸ್, ಸಿನೆಮಾ ಟಿಕೆಟ್ ಬುಕಿಂಗ್, ಹಣ ವರ್ಗಾವಣೆ, ಆನ್ ಲೈನ್ ರಿಟೇಲ್ ಶಾಪಿಂಗ್ ಮತ್ತಿತರ ವ್ಯವಹಾರಗಳನ್ನು ಈ ಮೂಲಕ ಪಡೆಯಬಹುದಾಗಿದೆ
ಮುಂದಿನ ಆರು ತಿಂಗಳಲ್ಲಿ ಸುಮಾರು ಒಂದು ಲಕ್ಷ ಗ್ರಾಹರು ಮೊಬೈಲ್ ಬ್ಯಾಂಕಿಂಗ್ ಸೇವೆಯ ಅನುಕೂಲ ಪಡೆಯಲಿದ್ದಾರೆ ಎಂಬ ನಿರೀಕ್ಷೆಯಿದೆ ಎಂದು ಜಯರಾಂ ಭಟ್ ತಿಳಿಸಿದರು.
ಎಟಿಎಂ ಕಾರ್ಡ್ ಮಿತಿ ಏರಿಕೆ: ಬ್ಯಾಂಕ್ ನ ಎಟಿಎಂ ಡೆಬಿಟ್ ಕಾರ್ಡ್ ವ್ಯವಾಹಾರವನ್ನು ರೂ. 15 ಸಾವಿರದಿಂದ ರೂ. 25 ಸಾವಿರಕ್ಕೆ ಏರಿಸಲಾಗಿದೆ. ಗೋಲ್ಡ್ ಎಟಿಎಂ ಕಾರ್ಡ್ ಗಳಲ್ಲಿ ರೂ. 40 ಸಾವಿರ ವರೆಗೆ ನಗದು ಡ್ರಾ ಮಾಡಬಹುದಾಗಿದೆ.
ಜೀರೋ ಬ್ಯಾಲೆನ್ಸ್ ಖಾತೆ: ಗ್ರಾಹಕರು ಜೀರೊ ಬ್ಯಾಲೆನ್ಸ್ ಖಾತೆಗಳನ್ನು ತೆರೆಯಲು ಅವಕಾಶ ಮಾಡಲಾಗಿದೆ. ಪ್ರತಿಯೊಬ್ಬರೂ ಬ್ಯಾಂಕ್ ಖಾತೆ ಹೊಂದಬೇಕೆಂಬ ನಿಲುವಿಗೆ ಬ್ಯಾಂಕ್ ಬದ್ಧವಾಗಿದೆ ಎಂದು ಬ್ಯಾಂಕ್ ನ ಪ್ರಧಾನ ವ್ಯವಸ್ಥಾಪಕ ಎಂ.ಎಸ್. ಮಹಬಲೇಶ್ವರ ಭಟ್ ಹೇಳಿದ್ದಾರೆ.
ಪ್ರಸಕ್ತ ವರ್ಷ ಸುಮಾರು 40 ಶಾಖೆಗಳನ್ನು ಆರಂಭಿಸಲಾಗುತ್ತದೆ. ಸದ್ಯಕ್ಕೆ ಬ್ಯಾಂಕ್ 509 ಶಾಖೆಗಳು ಹಾಗೂ 400 ಎಟಿಎಂ ಜೊತೆಗೆ 60 ಲಕ್ಷ ಗ್ರಾಹಕರ ಜಾಲವನ್ನು ಹೊಂದಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications