
ಬಿಎಸ್ ಇಯಲ್ಲಿ ಸೋಮವಾರ (ಅ.1)ರಂದು ಮಧ್ಯಾಹ್ನ 12.05ರ ಸುಮಾರಿಗೆ 15.35 ರು ನಂತೆ ಶೇ-4.78 ಕುಸಿದಿದೆ. ಎನ್ ಎಸ್ ಇನಲ್ಲಿ 15.35 ರು ನಂತೆ ಶೇ-4.95 ರಷ್ಟು ಕುಸಿತ ಕಂಡಿದೆ.
ವಿಜಯ್ ಮಲ್ಯ ಒಡೆತನದ ಕಿಂಗ್ ಫಿಷರ್ ಏರ್ ಲೈನ್ಸ್ ಸಂಸ್ಥೆ ಯ ಮುಂಬೈ, ದೆಹಲಿ ಹಾಗೂ ಚೆನ್ನೈ ವಿಮಾನ ನಿಲ್ದಾಣದಲ್ಲಿ ಇಂಜಿನಿಯರ್ ಗಳನ್ನು ಏರ್ ಲೈನ್ ವ್ಯವಸ್ಥಾಪಕರು ಕೆಟ್ಟದಾಗಿ ನೋಡಿಕೊಂಡರು ಎನ್ನಲಾಗಿದೆ. ಅಲ್ಲದೆ ಕಳೆದ ಮಾರ್ಚ್ ತಿಂಗಳಿನಿಂದ ಪೈಲಟ್ ಗಳಿಗೆ ಸಂಬಳ ಸಂದಾಯವಾಗಿಲ್ಲ.
ಸುಮಾರು 7000 ಕೋಟಿ ಸಾಲ ಹೊತ್ತುಕೊಂಡಿರುವ ಕಿಂಗ್ ಫಿಷರ್ ಸಂಸ್ಥೆ ವಿಮಾನಯಾನ ಅ.1 ರಿಂದ ಕೆಲವೆಡೆ ಸ್ಥಗಿತಗೊಂಡಿದ್ದರೆ, ಹಲವೆಡೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ನಮ್ಮ ಸಂಸ್ಥೆಯ ಕೆಲ ಉದ್ಯೋಗಿಗಳ ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆ ಉಂಟಾಗಿರುವುದಕ್ಕೆ ಕ್ಷಮೆ ಯಾಚಿಸುತ್ತೇವೆ. ಶೀಘ್ರದಲ್ಲೇ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಕಿಂಗ್ ಫಿಷರ್ ಸಂಸ್ಥೆ ವಕ್ತಾರರು ಹೇಳಿದ್ದಾರೆ.
ಮುಷ್ಕರ ಮುಂದುವರೆದಂತೆ ಷೇರುಪೇಟೆಯಲ್ಲಿ ಕಿಂಗ್ ಫಿಷರ್ ಷೇರು ಮತ್ತೆ ಏರಿಳಿತ ಕಾಣುವ ಲಕ್ಷಣಗಳಿದೆ.
ವಿಮಾನಯಾನ ಕ್ಷೇತ್ರದಲ್ಲಿ ಶೇ 49ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಕೇಂದ್ರ ಸರ್ಕಾರ ಅಸ್ತು ಎಂದ ಮೇಲೆ ಇದೇ ಮೊದಲ ಬಾರಿಗೆ ವಿಜಯ್ ಮಲ್ಯ ಒಡೆತನದ ಕಂಪನಿಗಳ ವಾರ್ಷಿಕ ಸಭೆ ಕಳೆದ ವಾರ ನಡೆದಿದ್ದು ಮಹತ್ವದ ಬೆಳವಣಿಗೆಯಾಗಿತ್ತು.
ಡಿಯಾಜಿಯೋ ಸಂಸ್ಥೆ ಯುನೈಟೆಡ್ ಸ್ಪಿರೀಟ್ಸ್ ಹಾಗೂ ಯುಬಿ ಸಮೂಹದ ಷೇರುಗಳಲ್ಲಿ ಪಾಲು ಹೊಂದುವ ಮೂಲಕ ಕಿಂಗ್ ಫಿಷರ್ ಸಾಲದ ಭಾರ ಇಳಿಸುವ ಪ್ರಕ್ರಿಯೆ ಬಗ್ಗೆ ಇನ್ನೂ ಸ್ಪಷ್ಟಣೆ. ಸಾಲ ಕೊಟ್ಟಿರುವ 17ಕ್ಕೂ ಅಧಿಕ ಬ್ಯಾಂಕುಗಳ ಜೊತೆ ಅಕ್ಟೋಬರ್ ಕೊನೆವಾರದಲ್ಲಿ ಮಾತುಕತೆ ನಡೆಸಿ ಎಲ್ಲಾ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದು ಸಂಸ್ಥೆಯ ಷೇರುದಾರರಿಗೆ ವಿಜಯ್ ಮಲ್ಯ ಭರವಸೆ ನೀಡಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications