

| 91.957 | ![]() | United States Dollar |
ಡಾಲರ್ ಬೇಡಿಕೆ ಹೆಚ್ಚಾಗಿದ್ದು, ಸಾಗರೋತ್ತರ ಕರೆನ್ಸಿ ಎದುರು ಡಾಲರ್ ಮೌಲ್ಯ ಚೇತರಿಕೆ ಕಂಡಿದ್ದು ರುಪಾಯಿ ಕುಸಿತಕ್ಕೆ ಕಾರಣವಾಯಿತು. ಯುರೋ ಎದುರು ಡಾಲರ್ ಸ್ಥಿರವಾಗಿದ್ದೆ ತಡ ಆಮದುದಾರರು ಡಾಲರ್ ಬೇಡಿಕೆ ಮುಗಿಬಿದ್ದರು ಅಲ್ಲಿಗೆ ರುಪಾಯಿ ಸ್ಥಿತಿ ಅಧೋಗತಿಗೆ ಇಳಿಯಿತು.
ಯುಎಸ್ ರಿಸರ್ವ್ ಚೇರ್ಮನ್ ಬೆರ್ನಾಂಕೆ ಪ್ರಕಾರ ಭಾರತದಲ್ಲಿನ ಈಕ್ವಿಟಿ ಹಾಗೂ ವಿದೇಶಿ ಬಾಂಡ್ ಮಾರಾಟ ಅಧಿಕವಾಗಲಿದೆ. ಡಾಲರ್ ಬೇಡಿಕೆ ಹೀಗೆ ಮುಂದುವರೆಯುವುದರಿಂದ ರುಪಾಯಿ ಮೌಲ್ಯ ಇನ್ನಷ್ಟು ಕುಸಿಯುವ ಸಾಧ್ಯತೆಯಿದೆ. ಬುಧವಾರ ದಿನದ ಅಂತ್ಯಕ್ಕೆ ರುಪಾಯಿ ಮೌಲ್ಯ 58.71 ಕ್ಕೆ ಕುಸಿದಿತ್ತು. 60 ರ ಗಡಿ ದಾಟುವ ಎಲ್ಲಾ ಲಕ್ಷಣಗಳು ಕಂಡು ಬಂದಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಕಳೆದ ಅಕ್ಟೋಬರ್ -ಡಿಸೆಂಬರ್ 2012-13 ಅವಧಿಯಲ್ಲಿ ಭಾರತದ ಆರ್ಥಿಕ ಪ್ರಗತಿ ದರ ಅಥವಾ ಜಿಡಿಪಿಯ ಚಾಲ್ತಿ ಖಾತೆ ಕೊರತೆ ಶೇ 6.7 ರಷ್ಟು ಕುಸಿದಿತ್ತು. ವಿತ್ತೀಯ ಕೊರತೆ ಮತ್ತು ಚಾಲ್ತಿ ಖಾತೆ ಕೊರತೆ ತಗ್ಗಿಸುವ ಪ್ರಯತ್ನಗಳೂ ನಿರೀಕ್ಷಿತ ಫಲ ನೀಡಿಲ್ಲ.
ವಿತ್ತೀಯಕೊರತೆ ನೀಗಿಸಲು ಚಿನ್ನದ ಆಮದು ಮೇಲೆ ನಿಯಂತ್ರಣ ಸಾಧಿಸಲೇ ಬೇಕಾಗಿದೆ. ವಿತ್ತೀಯ ಕೊರತೆ ಹೆಚ್ಚಿದ್ದಂತೆ ದೇಶದ ವಿದೇಶಿ ವಿನಿಯಮಕ್ಕೆ ಹೊಡೆತ ಬೀಳುತ್ತದೆ. ರುಪಾಯಿ ಮೌಲ್ಯ ವ್ಯತ್ಯಯವಾಗಲಿದೆ ಎಂದು ಚಿದಂಬರಂ ಹೇಳಿದ್ದರು.
ಆದರೆ, ನಂತರ ರುಪಾಯಿ ಮೌಲ್ಯ ಕುಸಿತ, ವಿತ್ತೀಯ ಕೊರತೆ ನೀಗಿಸಲು ಕೆಲವು ಕ್ರಮಗಳನ್ನು ಈಗಾಗಲೆ ತೆಗೆದುಕೊಳ್ಳಲಾಗಿದೆ. ಚಂದ್ರಶೇಖರ್ ಸಮಿತಿ ವರದಿ ಆಧಾರದ ಮೇಲೆ ಸೆಬಿ ನೀಡಿರುವ ಅಗತ್ಯ ಕ್ರಮಗಳನ್ನು ಪಾಲಿಸಲು ಮಾರ್ಗ ಸೂಚಿ ಸಿದ್ದವಾಗಿದೆ. ಅನಿಲ ದರ, ಎಫ್ ಡಿಐ ಮಿತಿ, ಕಲ್ಲಿದಲು ಗೊಂದಲ ಜೂನ್ ಅಂತ್ಯಕ್ಕೆ ಕೊನೆಗೊಳ್ಳಲಿದೆ ಎಂದು ವಿತ್ತ ಸಚಿವ ಚಿದಂಬರಂ ಭರವಸೆ ನೀಡಿದ್ದರು.
ಯುಪಿಎ ಸರ್ಕಾರ ಬೆಲೆ ಏರಿಕೆ ಬಾಂಬ್ ಮತ್ತೆ ಯಾವಾಗ ಸ್ಫೋಟಗೊಳ್ಳುತ್ತದೆ ಎಂಬುದು ಜನ ಸಾಮಾನ್ಯರನ್ನು ಕಾಡುತ್ತಿದೆ. ಪೆಟ್ರೋಲ್, ಡೀಸೆಲ್, ಆಹಾರ, ಚಿನ್ನ, ಕೊನೆಗೆ ಬ್ಯಾಂಕ್ ಸಾಲದ ಮೇಲೆ ರುಪಾಯಿ ಮೌಲ್ಯ ಕುಸಿತ ನೇರ ಪರಿಣಾಮ ಬೀರಲಿದೆ.
ಯುಎಸ್ ಡಾಲರ್ ಎದುರು ರುಪಾಯಿ ಮೌಲ್ಯ 58.96 ಸರ್ವಕಾಲಿಕ ಕುಸಿತ ಕಂಡಿರುವುದರಿಂದ ಮುಂದಿನ ದಿನಗಳಲ್ಲಿ ಎದುರಿಸಬಹುದಾದ ತೊಂದರೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ಓದಿ
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications
