ಮುಂಬೈ, ಅ. 13 : ರಿಯಲ್ ಎಸ್ಟೇಟ್ ಉದ್ಯಮ ಸಂಸ್ಥೆ ಡಿಎಲ್ ಎಫ್ ಮತ್ತು ಸಂಸ್ಥೆಯ ಆಡಳಿತ ಮಂಡಳಿಗೆ ಕಂಟಕ ಎದುರಾಗಿದೆ. ಡಿಎಲ್ ಎಫ್ ಅಧ್ಯಕ್ಷ ಕೆಪಿ ಸಿಂಗ್ ಸೇರಿದಂತೆ ಸಂಸ್ಥೆಯ ಪ್ರಮುಖ ಹುದ್ದೆಯಲ್ಲಿರುವ ಆರು ಅಧಿಕಾರಿಗಳಿಗೆ ಭಾರತದ ಸೆಕ್ಯೂರೀಟೀಸ್ ಮತ್ತು ಎಕ್ಸ್ಚೆಂಜ್ ಬೋರ್ಡ್[ಸೆಬಿ] ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಮೂರು ವರ್ಷಗಳ ಕಾಲ ಮಾರುಕಟ್ಟೆ ಕಡೆ ತಲೆ ಹಾಕದಂತೆ ಸೂಚಿಸಿದೆ.
ನೀವು ಕೆಲ ಕಾನೂನಾತ್ಮಕ ಸಂಗತಿಗಳನ್ನು ಜನರಿಂದ, ಸರ್ಕಾರದಿಂದ ಮುಚ್ಚಿಟ್ಟಿದ್ದೀರಿ, ಇದರಲ್ಲಿ ನಿಮಗೆ ಯಾವ ದೋಷ ಕಾಣಿಸಿಲ್ಲವೇ? ಅಪರಾಧ ಪ್ರಕರಣ ದಾಖಲಾಗಿದ್ದನ್ನು ಯಾಕೆ ಗಮನಕ್ಕೆ ತಂದಿಲ್ಲ ಎಂದು ಪ್ರಶ್ನಿಸಿರುವ ಸೆಬಿ ಡಿಎಲ್ ಎಫ್ ಸಂಸ್ಥೆಯ ಉಪಾಧ್ಯಕ್ಷ ಕೆಪಿ ಸಿಂಗ್ ಪುತ್ರ ರಾಜೀವ್ ಸಿಂಗ್ ಮತ್ತು ಪುತ್ರಿ ಪಿಯಾ ಸಿಂಗ್ ಅವರಿಗೂ ನಿಷೇಧ ಹೇರಿದೆ.[ಬಂಗಾರದ ಬೆಲೆ ಇಳಿಯಲು ಕಾರಣಗಳು]

ಸಂಸ್ಥೆಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವಂತಿಲ್ಲ. ಕಂಪನಿಯ ಷೇರು, ಸಾರ್ವಜನಿಕರಿಗೆ ಭಾಗವಹಿಸಲು ಆಹ್ವಾನ ನೀಡುವುದು(ಐಪಿಒ) ಎಲ್ಲಕ್ಕೂ ನಿರ್ಬಂಧ ಹೇರಲಾಗಿದೆ ಎಂದು ಸೆಬಿಯ ಸದಸ್ಯ ರಾಜೀವ್ ಅಗರ್ ವಾಲ್ ತಮ್ಮ 43 ಪುಟಗಳ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.
ಹೀಗೆ ಮುಂದುವರಿದರೆ ಡಿಎಲ್ ಎಫ್ ಮಾರುಕಟ್ಟೆಯ ಹಾದಿ ತಪ್ಪಿಸಬಹುದು. ಸುರಕ್ಷೆ ಮತ್ತು ಭದ್ರತೆ ದೃಷ್ಟಿಯಿಂದ ಈ ಕ್ರಮ ಅನಿವಾರ್ಯವಾಗಿತ್ತು ಎಂದು ಅಗರ್ ವಾಲ್ ತಿಳಿಸಿದ್ದಾರೆ.
ಸೆಬಿಯ ಹಲವಾರು ನಿಯಮಗಳನ್ನು ಡಿಎಲ್ ಎಫ್ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ವ್ಯಾಪಾರ ಮತ್ತು ಹೂಡಿಕೆಗೆ ಸಂಬಂಧಿಸಿದ ನಿಯಮಗಳನ್ನು ಗಾಳಿಗೆ ತೂರಿರುವ ಡಿಎಲ್ ಎಫ್ ಗೆ ನಿರ್ಬಂಧ ಹೇರದೆ ಬೇರೆ ದಾರಿ ಇಲ್ಲ ಎಂದು ಹೇಳಿದ್ದಾರೆ.[ಪಟ್ಟಿಯಲ್ಲಿ ಐವರು ಭಾರತೀಯ ಸಂಜಾತರು]
ಕೆಪಿ ಸಿಂಗ್ ಕುಟುಂಬ ಸೇರಿದಂತೆ ಡಿಎಲ್ ಎಫ್ ಮ್ಯಾನೆಜಿಂಗ್ ಡೈರೆಕ್ಟರ್ ಟಿಸಿ ಘೋಯಲ್, ಕಾಮೇಶ್ವರ ಸ್ವರೂಪ್ ಮತ್ತು ರಮೇಶ್ ಸಾಕಾ ನಿರ್ಬಂಧಕ್ಕೆ ಒಳಗಾಗಿದ್ದಾರೆ. ಡಿಎಲ್ ಎಫ್ 2007ರಲ್ಲಿ ಐಪಿಒ ಮೂಲಕ ತನ್ನ ಬಂಡವಾಳವನ್ನು 9,187 ಕೋಟಿ ರೂ.ಗೆ ಹೆಚ್ಚಿಸಿಕೊಂಡಿತ್ತು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications