ಮುಂಬೈ, ಜ.22: ಸನ್ ಟಿವಿ ಸಮೂಹಕ್ಕೆ ಲಾಭ ತಂದುಕೊಟ್ಟ ಡೀಲ್ ಗೆ ಸಂಬಂಧಿಸಿದಂತೆ ಮಾರನ್ ಅವರ ಆಪ್ತ ಬಳಗದ ಪೈಕಿ ಇಬ್ಬರನ್ನು ಸಿಬಿಐ ವಿಚಾರಣೆಗೆ ಒಳಪಡಿಸುವ ಸುದ್ದಿ ಷೇರುಪೇಟೆಯಲ್ಲೂ ಸಂಚಲನ ಮೂಡಿಸಿದೆ. ಗುರುವಾರ ಬಹುತೇಕ ಸನ್ ನೆಟ್ವರ್ಕ್ ಷೇರುಗಳು ಅಧೋಮುಖ ಮಾಡಿಕೊಂಡಿತ್ತು.
ದಯಾನಿಧಿ ಮಾರನ್ ಅವರ ಮಾಜಿ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಗೌತಮನ್ ಹಾಗೂ ಸನ್ ಟಿವಿಯ ಮುಖ್ಯ ತಾಂತ್ರಿಕ ಅಧಿಕಾರಿ ಎಸ್ ಕಮ್ಮಂ ಮತ್ತು ಸನ್ ಟಿವಿ ಚಾನೆಲ್ ಎಲೆಕ್ಟ್ರಿಷಿಯನ್ ಕೆಎಸ್ ರವಿ ಅವರು ವಿಚಾರಣೆ ಭೀತಿ ಎದುರಿಸುತ್ತಿದ್ದಾರೆ. ಅಕ್ರಮವಾಗಿ ಟೆಲಿಫೋನ್ ವಿನಿಮಯ ಕೇಂದ್ರ ಸ್ಥಾಪನೆ, ದುರ್ಬಳಕೆ ಆರೋಪ ಇವರ ಮೇಲಿದೆ. [ದಯಾನಿಧಿ ಮಾರನ್ ಪರಮಾಪ್ತರಿಗೆ ಸಿಬಿಐ ಹೊಡೆತ]
ಗುರುವಾರ ಸೆನ್ಸೆಕ್ಸ್ 29,000 ಅಂಶಗಳಷ್ಟು ಮೇಲೇರಿದ್ದರೆ, ಬಿಎಸ್ ಇನಲ್ಲಿ ಸನ್ ಟಿವಿ ನೆಟ್ವರ್ಕ್ ಷೇರುಗಳು ಶೇ 9.54ರಷ್ಟು ಕಳೆದುಕೊಂಡು 372.70 ರು ಗೆ ಕುಸಿದಿತ್ತು. ಎನ್ಎಸ್ ಇನಲ್ಲೂ ಶೇ 9.89ರಷ್ಟು ಇಳಿಮುಖ ಕಂಡು 371.55 ರುಗೆ ಕುಸಿಯಿತು.
ದಿನದ ಅಂತ್ಯಕ್ಕೆ ಸನ್ ಟಿವಿ ಸ್ವಲ್ಪ ಚೇತರಿಕೆ ಕಂಡುಕೊಂಡರೂ ಬಿಎಸ್ ಇನಲ್ಲಿ ಶೇ 4.84ರಷ್ಟು ಕುಸಿತ ಕಂಡು 392.10 ರು ಹಾಗೂ ಎನ್ ಎಸ್ ಇನಲ್ಲಿ ಶೇ 5.06ರಷ್ಟು ಇಳಿಮುಖವಾಗಿ 391.50 ರುಗೆ ಕುಸಿದಿದೆ.
ಚೆನ್ನೈನ ತಮ್ಮ ನಿವಾಸಕ್ಕೆ ಅಕ್ರಮವಾಗಿ 300 ದೂರವಾಣಿ ಸಂಪರ್ಕ ಪಡೆದು ನಂತರ ಸೋದರ ಕಲಾನಿಧಿ ಮಾರನ್ ಒಡೆತನದ ಸನ್ ನೆಟ್ವರ್ಕ್ ಕಚೇರಿಗೆ ನೀಡಲಾಗಿತ್ತು ಎಂಬ ಆರೋಪ ಮಾರನ್ ಸೋದರರು ಹೊತ್ತಿದ್ದರು. ಇದರ ಜೊತೆಗೆ ಏರ್ ಸೆಲ್ ಹಾಗೂ ಮಾಕ್ಸಿಸ್ ಒಪ್ಪಂದ, 2ಜಿ ಹಗರಣ, ಟೆಲಿಕಾಂ ನಿಯಮ ಉಲ್ಲಂಘನೆ ಮುಂತಾದ ಆರೋಪಗಳು ಮಾರನ್ ವಿರುದ್ಧ ಕೇಳಿ ಬಂದಿದೆ. (ಗುಡ್ ರಿಟರ್ನ್ಸ್.ಇನ್)
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications

