ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ನೀತಿ ನಿಯಮಗಳ ಬದಲಾವಣೆ, ದೇಶದ ಆರ್ಥಿಕ ವ್ಯವಸ್ಥೆ ಕುರಿತು ಮಂಗಳವಾರ ಸಭೆ ನಡೆಸಿತು. ಸಭೆಯಲ್ಲಿ ಅನೇಕ ಸಂಗತಿಗಳು ಚರ್ಚೆಗೆ ಒಳಪಟ್ಟವು. ಆರ್ ಬಿಐ ಸಭೆಯ ಮುಖ್ಯ ಅಂಶಗಳು ಇಲ್ಲಿವೆ.
* ಶೇ. 7.25 ಕ್ಕೆ ಸ್ಥಿರವಾದ ರೆಪೊ ದರ
ರೆಪೋ ದರದಲ್ಲಿ ಇದ್ದ ಸ್ಥಿತಿಯನ್ನೇ ಕಾಪಾಡಿಕೊಳ್ಳಲು ಆರ್ ಬಿಐ ಮುಂದಾಗಿದೆ. ಹಣದುಬ್ಬರದ ಏರಿಳಿತವೂ ಇದರ ಆರ್ಥಿಕ ವ್ಯವಸ್ಥೆ ಮೇಲೆ ಪರಿಣಾಮ ಬೀರಬಹುದು ಎಂಬ ಅಂಶದ ಹಿನ್ನೆಲೆಯನ್ನು ಇಟ್ಟುಕೊಂಡು ರೆಪೋ ದರ ಕಾಪಾಡಿಕೊಳ್ಳಲಾಗಿದೆ. ತಜ್ಞರು ಹೇಳುವಂತೆ ರೆಪೋ ದರ ಬದಲಾವಣೆ ಮಾಡದೇ ಇರುವುದರಲ್ಲಿ ಯಾವ ಆಶ್ಚರ್ಯವೂ ಇಲ್ಲ.[ಹಣ ಬಾರದಿದ್ದರೆ, ಕಾರ್ಡ್ ಸಿಕ್ಕಿಕೊಂಡರೆ ಯಾರು ಹೊಣೆ?]

* ಶೇ. 4 ಕ್ಕೆ ಸ್ಥಿರವಾದ ಸಿಆರ್ ಆರ್
ಬ್ಯಾಂಕ್ ಗಳ ಕ್ಯಾಶ್ ರಿಸರ್ವ್ ರೆಶಿಯೋ (ಸಿಆರ್ ಆರ್ ) ದಲ್ಲಿ ಯಾವ ಬದಲಾವಣೆಯನ್ನು ಮಾಡಲಾಗಿಲ್ಲ. ಮಾರುಕಟ್ಟೆಯಲ್ಲಿ ಲಕ್ವಿಡಿಟಿ ಬದಲಾವಣೆಗಳು ಉತ್ತಮವಾಗಿರುವುದೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಆರ್ ಬಿಐ ನಿರ್ದೇಶನದಂತೆ ಬ್ಯಾಂಕ್ ಗಳು ನಿರ್ದಿಷ್ಟ ಮೊತ್ತದ ಹಣವನ್ನು ಹೆಚ್ಚುವರಿಯಾಗಿ ಇಟ್ಟುಕೊಂಡಿರಬೇಕು ಇದನ್ನು ಸಿ ಆರ್ ಆರ್ ಎಂದು ಕರೆಯಲಾಗುತ್ತದೆ. ಇಲ್ಲಿ ಮಾಡುವ ಏರಿಕೆ ಇಳಿಕೆ ಎಲ್ಲ ವ್ಯವಹಾರಗಳ ಮೇಲೂ ಪರಿಣಾಮ ಬೀರುತ್ತದೆ.
* ಪ್ರಮುಖ ಬ್ಯಾಂಕ್ ಗಳ ಮೇಲೆ ಅಸಮಾಧಾನ
ಆರ್ ಬಿಐ ಹಿಂದಿನ ಬಾರಿ ತಾನು ಮಾಡಿದ್ದ ಬಡ್ಡಿ ಕಡಿತವನ್ನು ಎಲ್ಲ ಬ್ಯಾಂಕ್ ಗಳು ಸರಿಯಾಗಿ ಅನುಷ್ಠಾನ ಮಾಡಿಲ್ಲ ಅಥವಾ ಎಲ್ಲ ಗ್ರಾಹಕರಿಗೆ ತಲುಪಿಸುವುದರಲ್ಲಿ ಎಡವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಜನವರಿಯಿಂದ ಇಲ್ಲಿಯವರೆಗೆ ಆರ್ ಬಿಐ ಶೇ. 0.75 ಪ್ರಮಾಣದ ಬಡ್ಡಿ ದರ ಕಡಿತ ಮಾಡಿದೆ , ಆದರೆ ಇದರಿಂದ ನಿರೀಕ್ಷಿತ ಪ್ರಮಾಣದ ಪ್ರತಿಕ್ರಿಯೆ ಸಿಕ್ಕಿಲ್ಲ.[ಭಾರತದಲ್ಲಿ ಇ-ಇನ್ಶೂರೆನ್ಸ್ ಖಾತೆ ತೆರೆಯುವುದು ಹೇಗೆ?]
* ಹಣದುಬ್ಬರದ ಭಯ ಹಾಗೇ ಇದೆ
ಆಹಾರ ಮತ್ತು ಇಂಧನದ ದರದಲ್ಲಿ ಆಗುತ್ತಿರುವ ದಿಢೀರ್ ಬದಲಾವಣೆ, ಸೇವಾ ಶುಲ್ಕ ಹೆಚ್ಚಳ, ಪ್ರೋಟಿನ್ ಯುಕ್ತ ಆಹಾರ ಪದಾರ್ಥಗಳು, ಎಣ್ಣೆ ಕಾಳುಗಳ ಬೆಲೆ ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿರುವುದು ಹಣದುಬ್ಬರ ಬದಲಾವಣೆ ಭಯವನ್ನು ಹಾಗೇ ಇರಿಸಿದೆ.
* ಸುಧಾರಣೆ ಕಾಲ
ಎಲ್ಲ ಅಂಶಗಳನ್ನು ತಾಳೆಹಾಕಿದರೆ ಇದು ಸುಧಾರಣೆ ಸಮಯ ಎಂದೇ ವಿಶ್ಲೇಷಣೆ ಮಾಡಲಾಗಿದೆ. ಮಾನ್ಸೂನ್ ಮಾರುತಗಳು ಸರಿಯಾಗಿ ಮಳೆ ಸುರಿಸದರೆ 2015ರ ಅಂತ್ಯಕ್ಕೆ ದೇಶದ ಆರ್ಥಿಕ ವ್ಯವಸ್ಥೆ ಮತ್ತಷ್ಟು ಭದ್ರವಾಗಲಿದೆ.[ಆಧಾರ್ ಕಾರ್ಡ್ ಮಾಡಿಸುವುದು ಹೇಗೆ?]
ಕೊನೆ ಮಾತು
ಕೇವಲ ಒಂದೆರಡು ಮಾನದಂಡದಿಂದ ದೇಶದ ಒಟ್ಟು ಆರ್ಥಿಕ ಸ್ಥಿತಿ ಲೆಕ್ಕ ಹಾಕಲು ಸಾಧ್ಯವಿಲ್ಲ. ಆದರೆ ಜಾಗತಿಕ ಬದಲಾವಣೆಗೆ ಹೋಲಿಸಿಕೊಂಡು ದೇಶದ ಮೇಲೆ ಅವು ಯಾವ ಪರಿಣಾಮ ಉಂಟುಮಾಡುತ್ತಿವೆ ಎಂದು ವಿಶ್ಲೇಷಿಸಿದರೆ ಪರಿಹಾರ ಮಾರ್ಗಗಳನ್ನು ಹುಡುಕಲು ಸಾಧ್ಯ. (ಗುಡ್ ರಿಟರ್ನ್ಸ್.ಇನ್)
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?



Click it and Unblock the Notifications