ಹೊಸ ವರ್ಷದ ಆರಂಭ ಕಾಲ ಹತ್ತಿರ ಬರುತ್ತಿದೆ. ಆದರೆ ಷೇರು ಮಾರುಕಟ್ಟೆಯಲ್ಲಿ ಇಳಿಕೆಯ ಪರ್ವ ಮುಂದುವರಿದೇ ಇದೆ. ಬಿಹಾರ ಚುನಾವಣೆ ಫಲಿತಾಂಶ ಸಹ ಮಾರುಕಟ್ಟೆಗೆ ಸರಿಯಾದ ಹೊಡೆತವನ್ನೇ ನೀಡಿದೆ.
ಈ ಸಮಯದಲ್ಲಿ ಷೇರು ಮಾರುಕಟ್ಟೆಯಿಂದ ದೂರ ನಿಲ್ಲುವುದೇ ಒಳ್ಳೆಯದು. ಆಗುತ್ತಿರುವ ಬದಲಾವಣೆಗಳನ್ನು ಮಾತ್ರ ಸೂಕ್ಷ್ಮವಾಗಿ ಗಮನಿಸುತ್ತಿರಬೇಕು. ಯಾಕೆ ಮಾರುಕಟ್ಟೆಯಿಂದ ದೂರ ಸರಿಯುವುದು ಒಳ್ಳೆಯದು ಎಂಬುದಕ್ಕೆ ಇಲ್ಲಿ 5 ಅಂಶಗಳ ಉತ್ತರ ನೀಡಲಾಗಿದೆ.[ಪ್ರಥಮ ಗುಟುಕಲ್ಲೇ 'ಕಹಿ'ಯಾದ 'ಕಾಫಿ' ಡೇ ಷೇರುಗಳು]

1. ಯುಎಸ್ ಫೆಡರಲ್ ಬ್ಯಾಂಕ್ ಬಡ್ಡಿ ದರ ಪರಿಷ್ಕರಣೆ
9 ವರ್ಷಗಳ ಸುದೀರ್ಘ ಅವಧಿಯ ನಂತರ ಯುಎಸ್ ಫೆಡರಲ್ ಬ್ಯಾಂಕ್ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ನಿಚ್ಚಳವಾಗಿದೆ. ಬಡ್ಡಿ ದರ ಏರಿಕೆಯಾದರೆ ಭಾರತದ ಮಾರುಕಟ್ಟೆಗೆ ವರವಾಗಿ ಪರಿಣಮಿಸಬಹುದು. ಡಿಸೆಂಬರ್ ತಿಂಗಳ ಮಧ್ಯಭಾಗದಲ್ಲಿ ಫೆಡರಲ್ ಬ್ಯಾಂಕ್ ತನ್ನ ತೀರ್ಮಾನ ಹೇಳಲಿದ್ದು ಅಲ್ಲಿಯವರೆಗೆ ಸುಮ್ಮನಿರುವುದೇ ಒಳಿತು.
2. ಬಿಹಾರದಲ್ಲಿ ಎನ್ ಡಿಎಗೆ ಸೋಲು
ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಒಕ್ಕೂಟ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ಯೋಜನೆಗಳು ಜನರನ್ನು ತಲುಪಿತ್ತಿಲ್ಲವೇ? ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ. ಮುಂದಿನ ಕೆಲ ತಿಂಗಳು ಕಾಲ ಸರ್ಕಾರ ಹೊಸ ಯೋಜನೆಗಳನ್ನು ಜಾರಿ ಮಾಡಲು ಹಿಂದೇಟು ಹಾಕಬಹುದು. [ಟೆಕ್ನಿಕಲ್ ಮತ್ತು ಫಂಡಮೆಂಟಲ್ ಅನಾಲಿಸಿಸ್ ನಡುವಿನ ವ್ಯತ್ಯಾಸವೇನು?]
3. ಅತಂತ್ರ ಸ್ಥಿತಿಯಲ್ಲಿ ತೆರಿಗೆ ಶಾಸನ
ಗುಡ್ಸ್ ಮತ್ತು ಸರ್ವೀಸ್ ಟ್ಯಾಕ್ಸ್ ಗೆ ಸಂಬಂಧಿಸಿದ ಶಾಸನ ಇನ್ನು ಅತಂತ್ರ ಸ್ಥಿತಿಯಲ್ಲೇ ಇದೆ. ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಮತ್ತೆ ಸರ್ಕಾರದ ವಿರುದ್ಧ ಚಾಟಿ ಬೀಸಲು ಸಿದ್ಧತೆ ಮಾಡಿಕೊಂಡಿವೆ. ಈ ಎಲ್ಲ ಸಂಗತಿಗಳು ವಿದೇಶಿ ಹೂಡಿಕೆ ಮೇಲೆ ನೇರ ಪರಿಣಾಮ ಉಂಟುಮಾಡಬಲ್ಲದು.
4. ಕಾರ್ಪೋರೇಟ್ ಕಂಪನಿಗಳ ಕೆಟ್ಟ ಫಲಿತಾಂಶ
ಕಾರ್ಪೋರೇಟ್ ಕಂಪನಿಗಳ ತ್ರೈಮಾಸಿಕ ಫಲಿತಾಂಶಗಳು ನಿರೀಕ್ಷಿತ ಪ್ರಮಾಣದಲ್ಲಿ ಬಂದಿಲ್ಲ. ಎಲ್ ಎಂಡ್ ಟಿ ಅಂಥ ಕಂಪನಿಯೇ ಇದೆಲ್ಲ ಸರಿ ಹೋಗಲು ಇನ್ನು ಕೆಲ ತಿಂಗಳು ಕಾಲ ಬೇಕಾಗುವುದು ಎಂದು ಹೇಳಿದೆ. ಕಾರ್ಪೋರೇಟ್ ಸೆಕ್ಟರ್ ಅಭಿವೃದ್ದಿಗೆ ಕೇಂದ್ರ ಸರ್ಕಾರ ತೆಗೆದುಕೊಂಡ ಕ್ರಮದ ಹೊರತಾಗಿಯೂ ಕಳಪೆ ಸಾಧನೆ ಕಂಅಡುಬಂದಿದೆ.
5. ಬಡ್ಡಿ ದರ ಕಡಿತ ಇಲ್ಲ
ಈಗಾಗಲೇ ರಿಸರ್ವ್ ಬ್ಯಾಂಕ್ ಒಂದೇ ವರ್ಷದಲ್ಲಿ ನಾಲ್ಕು ಸಾರಿ ಮೂಲಾಂಶ ಕಡಿತ ಮಾಡಿದೆ. ಇನ್ನು ಮತ್ತೆ ನಿರೀಕ್ಷೆ ಇಟ್ಟುಕೊಳ್ಳುವಂತಿಲ್ಲ.
ಕೊನೆ ಮಾತು:
ಮಾರುಕಟ್ಟೆಗೆ ಸಂಬಂಧಿಸಿ ತ್ವರಿತ ಅಥವಾ ಯೋಚನೆಯಿಲ್ಲದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಇನ್ನು ಎರಡು ಅಥವಾ ಮೂರು ತಿಂಗಳು ಸುಮ್ಮನೆ ಕಾಯುವುದೇ ಉತ್ತಮ. ಮಾರಾಟ ಮತ್ತು ಖರೀದಿಗೆ ಇದು ಸಕಾಲ ಅಲ್ಲ ಎಂದೇ ವಿಶ್ಲೇಷಣೆ ಮಾಡಲಾಗಿದೆ.(ಗುಡ್ ರಿಟರ್ನ್ಸ್.ಇನ್)
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications