ಆದಾಯ ತೆರಿಗೆ ವಿವರಗಳನ್ನು ಸಲ್ಲಿಸುವ 'ಐಟಿ- ರಿಟರ್ನ್ಸ್' ಪ್ರಕ್ರಿಯೆಗೆ ಡೆಡ್ ಲೈನ್ ನೀಡಲಾಗಿದ್ದು ಆಗಸ್ಟ್ 31ರ ತನಕ ಅವಕಾಶವಿದೆ. 2009-10 ರಿಂದ 2014-15ರ ಅವಧಿಯಲ್ಲಿ ಬಾಕಿ ಉಳಿಸಿಕೊಂಡಿರುವ 'ಐಟಿ- ರಿಟರ್ನ್ಸ್' ನ್ನು ಆಗಸ್ಟ್ 31, 2016ರೊಳಗೆ ಸಲ್ಲಿಕೆ ಮಾಡಬೇಕಾಗುತ್ತದೆ.
ಆಧಾರ್ ಕಾರ್ಡ್ ಲಿಂಕ್, ಬ್ಯಾಂಕ್ ಖಾತೆ ಬಳಸಿಕೊಂಡು ಅಂತರ್ಜಾಲದ ಮುಖಾಂತರ ರಿಟರ್ನ್ಸ್ ಸಲ್ಲಿಕೆ ಮಾಡಬೇಕು. ಒಂದು ವೇಳೆ ಸಲ್ಲಿಕೆ ಮಾಡಲಾಗಿದ್ದು ಕೆಲ ಕಾರಣದಿಂದ ದೃಢೀಕರಣವಾಗಿರದಿದ್ದರೆ ಮತ್ತೊಮ್ಮೆ ದಾಖಲು ಮಾಡಬೇಕು.[ಬಿಬಿಎಂಪಿ ಆಸ್ತಿ ತೆರಿಗೆ ಸಲ್ಲಿಕೆ ಪ್ರಕ್ರಿಯೆ ಹೇಗೆ?]

ಬ್ಯಾಂಕ್ ಖಾತೆ ವಿವರಗಳ ಪೈಕಿ ಐಎಫ್ ಎಸ್ ಕೋಡ್, ಅಕೌಂಟ್ ನಂಬರ್ (ಕರೆಂಟ್ ಅಥವಾ ಉಳಿತಾಯ ಖಾತೆ) ನೀಡಿದರೆ ಸಾಕು. ನಿಮ್ಮ ಅಕೌಂಟ್ ನಲ್ಲಿ ಎಷ್ಟು ಬ್ಯಾಲೆನ್ಸ್ ಇದೆ ಎಂಬುದನ್ನು ಹೇಳಿಕೊಳ್ಳಬೇಕಾಗಿಲ್ಲ. ಸಂಬಳದಾರರು, ಬಿಸಿನೆಸ್ ಹಾಗೂ ವೃತ್ತಿಪರ ಆದಾಯ ಇಲ್ಲದ ವ್ಯಕ್ತಿಗಳು ಐಟಿಆರ್ 1 ಅಥವಾ ಐಟಿಆರ್ 2 ಬಳಸಿಕೊಂಡು ಪ್ರತಿ ವರ್ಷ ಜು.31 ರೊಳಗೆ ಆದಾಯ ತೆರಿಗೆ ಪಾವತಿ ಸಲ್ಲಿಕೆ ಮಾಡಬೇಕಾದದ್ದು ನಿಯಮ.
ಈ ಬಗ್ಗೆ ಆದೇಶ ನೀಡಿರುವ ಕೇಂದ್ರ ತೆರಿಗೆ ಮಂಡಳಿ (ಸಿಬಿಡಿಟಿ) ಅಂಚೆ ಮೂಲಕವೂ ಸಲ್ಲಿಕೆ ಮಾಡಬಹುದಾಗಿದ್ದು ನಿಗದಿತ ದಿನಾಂಕದೊಳಗೆ ಕಚೇರಿಯ ಕೈ ಸೇರಬೇಕು ಎಂದು ತಿಳಿಸಿದೆ.[ಆನ್ ಲೈನ್ ಮೂಲಕ ಆಧಾರ್ ಕಾರ್ಡ್ ಡೌನ್ ಲೋಡ್ ಹೇಗೆ?]
ಇದು ತೆರಿಗೆ ಪಾವತಿದಾರರಿಗೆ ಕೊನೆ ಅವಕಾಶವಾಗಿದೆ. ಬಾಕಿ ಉಳಿಸಿಕೊಂಡಿರುವ ರಿಟರ್ನ್ಸ್ ಸಲ್ಲಿಕೆ ಮಾಡಲೇಬೇಕು. ಸೆಕ್ಷನ್ 139ರ ಅನ್ವಯ ಸಲ್ಲಿಕೆ ಪ್ರಕ್ರಿಯೆಯನ್ನು ನಡೆಸಬಹುದು. ಅಲ್ಲದೇ ಸಲ್ಲಿಕೆ ಮಾಡಿದವರು ಮರುಪಾವತಿಯನ್ನು ಪಡೆದುಕೊಂಡು ಕಾಪಾಡಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications