ಕೇಂದ್ರ ಸರ್ಕಾರ 7ನೇ ವೇತನ ಆಯೋಗದ ಶಿಫಾರಸಿನ ಪ್ರಕಾರ ಅಗಸ್ಟ್-ಸೆಷ್ಟಂಬರ್ ತಿಂಗಳಿನಲ್ಲಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ 45 ಸಾವಿರ ಕೋಟಿ ವೇತನ ಬಾಕಿ ಪಾವತಿಸಲು ನಿರ್ಧರಿಸಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ಭಾರಿ ಪ್ರಮಾಣದಲ್ಲಿ ಹಣ ನೌಕರರ ಮತ್ತು ಪಿಂಚಣಿದಾರರ ಕೈಸೇರಲಿದೆ.
45 ಸಾವಿರ ಕೋಟಿ ಹಣ ಬಾಕಿ ಪಾವತಿ ಮಾಡುವುದರಿಂದ ಹೆಚ್ಚು ಕಡಿಮೆ 30 ಲಕ್ಷ ಕುಟುಂಬಗಳು ಇದರ ಲಾಭ ಪಡೆಯಲಿದ್ದಾರೆ. ಇದರಿಂದಾಗಿ ಬೇರೆ ಬೇರೆ ವಸ್ತುಗಳ ಖರೀದಿ, ವಿದೇಶಿ ಪ್ರವಾಸ ಹೀಗೆ ಅನೇಕ ಚಟುವಟಿಕೆಗಳಲ್ಲಿ ಕೇಂದ್ರ ಸರ್ಕಾರದ ನೌಕರರು ತೊಡಗಿಸಿಕೊಳ್ಳಲ್ಲಿದ್ದಾರೆ ಎಂದು ಅಂದಾಜಿಸಲಾಗಿದೆ. ಅದರ ಸಂಕ್ಷಿಪ್ತ ಚಿತ್ರಣ ಇಲ್ಲಿದೆ.
ವಾಹನ ಖರೀದಿ
ಬಾಕಿ ಪಾವತಿ ಹಿನ್ನೆಲೆಯಲ್ಲಿ ವಾಹನ ಖರೀದಿ, ಗೃಹೋಪಯೋಗಿ ವಸ್ತುಗಳ ಖರೀದಿ, ಸ್ಮಾರ್ಟ್ ಫೋನ್, ಬಟ್ಟೆ ಮತ್ತು ಅಲಂಕಾರಿಕ ವಸ್ತುಗಳ ಖರೀದಿ ಭರಾಟೆ ಕೂಡ ಹೆಚ್ಚಲಿದೆ.
ವಿದೇಶಿ ಪ್ರವಾಸ
ಅದೇ ರೀತಿ 8.5 ಲಕ್ಷ ನೌಕರರು ವಿದೇಶಿ ಪ್ರವಾಸ ಹೊರಡುವ ಯೋಜನೆ ಹಾಕಿಕೊಂಡಿದ್ದು, 4.5 ಲಕ್ಷ ಜನರು ವಾಹನ ಖರೀದಿ ಸಿದ್ದತೆಯಲ್ಲಿ ತೊಡಗಿದ್ದಾರೆಂದು ವರದಿ ಅಂದಾಜಿಸಿದೆ
ಹೆಚ್ಚಿನ ಪಾಲು ಯಾರಿಗೆ?
ಮೊದಲ ಕಂತಿನ 45 ಸಾವಿರ ಕೋಟಿಗಳ ಪೈಕಿ ಶೇ. 40ರಷ್ಟು ಹಣ ದೆಹಲಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಆಂದ್ರಪ್ರದೇಶದ ಪಾಲಾಗಲಿದೆ. ಬೆಂಗಳೂರು, ಪುಣೆ, ಅಹಮ್ಮದಾಬಾದ್ ನಂತಹ ದೊಡ್ಡ ನಗರಗಳಿಗೆ ಹಾಗೂ ಲಖನೌ, ಅಲಹಾಬಾದ್, ನಾಗಪುರ, ಡೆಹರಾಡೂನ್ ನಂತಹ ನಗರಗಳಿಗೆ ಕಡಿಮೆ ಪಾಲು ಸಿಗಲಿದೆ.
ಪಿಂಚಣಿ ಹೆಚ್ಚಳ
ಕೇಂದ್ರ ಸರ್ಕಾರದ ನಿವೃತ್ತ ನೌಕರರಿಗೆ ಇಲ್ಲೊಂದು ಸಿಹಿ ಸುದ್ದಿ ಇದೆ. 2016ಕ್ಕಿಂತ ಮೊದಲು ನಿವೃತ್ತರಾದ ನೌಕರರಿಗೆ ಏಳನೇ ವೇತನ ಆಯೋಗದ ಪಿಂಚಣಿ ಪ್ರಯೋಜನ ಸಿಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications