ವ್ಯವಹಾರದಲ್ಲಿ ಪಾರದರ್ಶಕತೆ ತರುವ ಮತ್ತು ಅನಗತ್ಯ ವಿಳಂಬ ನೀತಿಯನ್ನು ತಡೆಯುವ ಉದ್ದೇಶದಿಂದ ಎಲ್ಲ ಪಿಂಚಣಿ ಸಂಬಂಧಿತ ಪ್ರಕರಣಗಳನ್ನು ಕಡ್ಡಾಯವಾಗಿ ಆನ್ಲೈನ್ ವ್ಯವಸ್ಥೆಯೊಳಗೆ ತರುವಂತೆ ಸರ್ಕಾರ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದೆ.
ವ್ಯವಹಾರದಲ್ಲಿ ಪಾರದರ್ಶಕತೆ ತರುವ ಮತ್ತು ಅನಗತ್ಯ ವಿಳಂಬ ನೀತಿಯನ್ನು ತಡೆಯುವ ಉದ್ದೇಶದಿಂದ ಎಲ್ಲ ಪಿಂಚಣಿ ಸಂಬಂಧಿತ ಪ್ರಕರಣಗಳನ್ನು ಕಡ್ಡಾಯವಾಗಿ ಆನ್ಲೈನ್ ವ್ಯವಸ್ಥೆಯೊಳಗೆ ತರುವಂತೆ ಕೇಂದ್ರ ಸರ್ಕಾರ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದೆ.
ಕೇಂದ್ರದ ಈ ಕ್ರಮದಿಂದ ನಿವೃತ್ತಿ ನಂತರ ಸೂಕ್ತ ಸಮಯಕ್ಕೆ ಪಿಂಚಣಿ ಅನುದಾನ ಪ್ರಯೋಜನಗಳು ಸಿಗಲಿದೆ.
ವ್ಯವಹಾರಗಳಲ್ಲಿ ಕಟ್ಟುನಿಟ್ಟಿನ ಪಾರದರ್ಶಕತೆ, ವಿಳಂಬ ನೀತಿ, ಭ್ರಷ್ಟಾಚಾರ ತಡೆಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳ ಅನುಷ್ಟಾನಕ್ಕೆ ಮುಂದಾಗುತ್ತಿದೆ.
ಕೇಂದ್ರ ಸರ್ಕಾರ ಸೂಚನೆ
ನೌಕರರ ಪಿಂಚಣಿ ಸಂಬಂಧಿತ ಎಲ್ಲ ವಿವರಗಳನ್ನೂ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಬೇಕು ಎಂದು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಪಿಂಚಣಿ ಸಚಿವಾಲಯ ಹಾಗೂ ಕೇಂದ್ರ ಸರ್ಕಾರದ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಗೆ ಸೂಚಿಸಿದೆ.
ಪಿಂಚಣಿ ಸಚಿವಾಲಯ ಅಸಮಾಧಾನ
ಕಟ್ಟುನಿಟ್ಟಿನ ಮಾರ್ಗಸೂಚಿ ಮತ್ತು ನಿರ್ದೇಶನಗಳಿದ್ದರೂ ಹೆಚ್ಚು ಸಂಖ್ಯೆಯ ಕಾರ್ಮಿಕರಿಗೆ ನಿವೃತ್ತಿ ಪ್ರಯೋಜನಗಳು ಮತ್ತು ಪಿಂಚಣಿ (ಪಿಪಿಒ) ಸೂಕ್ತ ಸಮಯಕ್ಕೆ ದೊರಕುತ್ತಿಲ್ಲ ಎಂದು ಪಿಂಚಣಿ ಸಚಿವಾಲಯ ಅಸಮಾಧಾನ ವ್ಯಕ್ತಪಡಿಸಿದೆ.
ಭವಿಷ್ಯ ಆನ್ಲೈನ್
ಕಾರ್ಮಿಕರಿಗೆ ಪಿಂಚಣಿ ಪ್ರಯೋಜನಗಳನ್ನು ಒದಗಿಸುವ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಭವಿಷ್ಯ ಎಂಬ ಆನ್ಲೈನ್ ಕಾರ್ಯನಿರತವಾಗಿದೆ. ಈ ಅಂತರ್ಜಾಲ ಮೂಲಕ ಅಧಿಕಾರಿಗಳು ಹಾಗೂ ನಿವೃತ್ತ ನೌಕರರು ವಿವರಗಳನ್ನು ಪರಿಶೀಲನೆ ಮಾಡಬಹುದು.
ಜನವರಿ 1ರಿಂದ ದಾಖಲಿಕರಣ
ಪಿಂಚಣಿ ಯೋಜನೆಗಳ ಪ್ರಕ್ರಿಯೆಗಳನ್ನು ‘ಭವಿಷ್ಯ' ಅಂತರ್ಜಾಲ ಮೂಲಕ ನಡೆಸುವುದನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ. ನಿವೃತ್ತಿ ಆಗಲಿರುವ ನೌಕರರಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನೂ ಜನವರಿ 1ರಿಂದ ಭವಿಷ್ಯ ದಲ್ಲಿ ದಾಖಲಿಸಿಬೇಕು. ಇದರ ಮೂಲಕ ಪಿಂಚಣಿ ಪ್ರಕರಣದಲ್ಲಿ ವಿಳಂಬವಾಗಬಾರದು ಎಂದು ತಿಳಿಸಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ



Click it and Unblock the Notifications