ಕೇಂದ್ರ ಬಜೆಟ್ ಮಂಡನೆ ಮುಂದೂಡಿಕೆ ಇಲ್ಲ

ಪಂಚರಾಜ್ಯಗಳಲ್ಲಿ ಚುನಾವಣೆ ಇರುವ ಹಿನ್ನೆಲೆಯಲ್ಲಿ ಫೆಬ್ರುವರಿ 1ರಂದು ನಿಗದಿಯಾಗಿರುವ ಕೇಂದ್ರ ಬಜೆಟ್ ಮಂಡನೆಯನ್ನು ಮುಂದೂಡುವಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಜಾ ಮಾಡಿ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ.

ಪಂಚರಾಜ್ಯಗಳಲ್ಲಿ ಚುನಾವಣೆ ಇರುವ ಹಿನ್ನೆಲೆಯಲ್ಲಿ ಫೆಬ್ರುವರಿ 1ರಂದು ನಿಗದಿಯಾಗಿರುವ ಕೇಂದ್ರ ಬಜೆಟ್ ಮಂಡನೆಯನ್ನು ಮುಂದೂಡುವಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಜಾ ಮಾಡಿ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ.

ಕೇಂದ್ರ ಬಜೆಟ್ ಮಂಡನೆ ಮುಂದೂಡಿಕೆ ಇಲ್ಲ

ಈಗಾಗಲೇ ಉತ್ತರಾಖಂಡ, ಪಂಜಾಬ್‌, ಮಣಿಪುರ, ಉತ್ತರ ಪ್ರದೇಶ ಹಾಗೂ ಗೋವಾ ರಾಜ್ಯಗಳಲ್ಲಿ ಫೆಬ್ರವರಿ 4 ರಿಂದ ಮಾರ್ಚ್‌ 8ರ ವರೆಗೆ ಚುನಾವಣೆ ನಿಗದಿಯಾಗಿದೆ. ಫೆಬ್ರುವರಿ 1ರಂದು ಮಂಡನೆಯಾಗುವ 2017ನೇ ಸಾಲಿನ ಕೇಂದ್ರ ಬಜೆಟ್‌ ಮತದಾರರ ಮೇಲೆ ಪರಿಣಾಮ ಬೀರಬಹುದು ಎಂಬ ಹಿನ್ನೆಲೆಯಲ್ಲಿ ಪಿಐಎಲ್(public interest litigation) ಸಲ್ಲಿಸಲಾಗಿತ್ತು.

ಬಜೆಟ್‌ ಮಂಡನೆ ಮತದಾರರ ಮೇಲೆ ಬೀರಬಹುದಾದ ಪರಿಣಾಮಗಳ ಬಗ್ಗೆ ಸೂಕ್ತ ವಿವರಣೆ ದೊರೆಯದ ಕಾರಣದಿಂದ ಎಂ.ಎಲ್‌.ಶರ್ಮಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಸುಪ್ರೀಂ ಕೋರ್ಟ್‌ ವಜಾ ಮಾಡಿದೆ.

ಚುನಾವಣೆ ಹಿನ್ನೆಲೆಯಲ್ಲಿ ಫೆಬ್ರವರಿ 1ರ ಬದಲು ಏಪ್ರಿಲ್‌ 1ರಂದು ಬಜೆಟ್‌ ಮಂಡಿಸಲು ಅರ್ಜಿಯಲ್ಲಿ ಕೋರಲಾಗಿತ್ತು. ಆದರೆ ಇದೀಗ ನಿಗದಿಯಂತೆ ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+