ಹೊಸ ನಿಯಮದ ಪ್ರಕಾರ ಉದ್ಯೋಗಿಗಳು ಮನವಿ ಮಾಡಿದ 15 ದಿನಗಳಲ್ಲಿ ಫಂಡ್ ನೀಡಬೇಕು ಎಂದು ನಿರ್ಧರಿಸಲಾಗಿದೆ. ಈ ಹಿಂದೆ ಹಣ ನೀಡಲು ಯಾವುದೇ ಕಾಲ ಮಿತಿ ಇರಲಿಲ್ಲ.
ಐವತ್ತು ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ. ಜನರಲ್ ಪ್ರಾವಿಡಂಟ್ ಫಂಡ್ (ಜಿಪಿಎಫ್) ಪಡೆಯಲು ಇದ್ದ ನಿಯಮಗಳನ್ನು ಸಡಿಲಿಸಲಾಗಿದ್ದು, ನೌಕರರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಣಯ ಕೈಗೊಂಡಿದೆ.
ಹೊಸ ನಿಯಮದ ಪ್ರಕಾರ ಉದ್ಯೋಗಿಗಳು ಮನವಿ ಮಾಡಿದ 15 ದಿನಗಳಲ್ಲಿ ಫಂಡ್ ನೀಡಬೇಕು ಎಂದು ನಿರ್ಧರಿಸಲಾಗಿದೆ. ಈ ಹಿಂದೆ ಹಣ ನೀಡಲು ಯಾವುದೇ ಕಾಲ ಮಿತಿ ಇರಲಿಲ್ಲ. ಪಿಎಫ್ UAN ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲವೆ?
ಪಿಎಫ್ ಪಡೆಯಲು ಅರ್ಹರು?
ಇಲ್ಲಿಯವರೆಗೆ 15 ವರ್ಷ ಸೇವೆ ಸಲ್ಲಿಸಿದವರು ಮಾತ್ರ ಪಿಎಫ್ ಪಡೆಯಲು ಅರ್ಹರಾಗಿದ್ದರು. ಆದರೆ ಇದೀಗ 10 ವರ್ಷ ಸೇವೆ ಸಲ್ಲಿಸಿದವರು ಕೂಡಾ ಪಿಎಫ್ ಪಡೆಯಲು ಅರ್ಹರಾಗಿರುತ್ತಾರೆ.
ವಿದ್ಯಾಭ್ಯಾಸಕ್ಕಾಗಿ ಪಿಎಫ್ ಹಣ
ಇದಕ್ಕೂ ಮುನ್ನ ಹೈಸ್ಕೂಲ್ ದಾಟಿದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಪಿಎಫ್ ಹಣವನ್ನು ಪಡೆಯಬಹುದಾಗಿತ್ತು. ಇನ್ನು ಮುಂದೆ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣ ಕೊಡಿಸುವವರೆಗೆ ಪಿಎಫ್ ಹಣ ಡ್ರಾ ಮಾಡಬಹುದಾಗಿದೆ.
ಈ ಕಾರ್ಯಗಳಿಗೂ ಪಿಎಫ್ ಬಳಕೆ
ಉದ್ಯೋಗಿಗಳು ತಮಗೆ, ತಮ್ಮ ಕುಟುಂಬದ ಸದಸ್ಯರಿಗೆ, ತಮ್ಮನ್ನು ಅವಲಂಬಿಸಿದವರ ವಿವಾಹ, ನಿಶ್ಚಿತಾರ್ಥ ಇನ್ನಿತರ ಕುಟುಂಬದ ಕಾರ್ಯಕ್ರಮಗಳಿಗೆ ಪಿಎಫ್ ಹಣ ಡ್ರಾ ಮಾಡಬಹುದು. ಕುಟುಂಬದಲ್ಲಿ ಯಾರಾದರೂ ಸಾವನ್ನಪ್ಪಿದರೆ ಅವರ ಅಂತ್ಯಕ್ರಿಯೆಗೂ ಮೊತ್ತ ಬಿಡಿಸಬಹುದು.
ವೈದ್ಯಕೀಯ ಚಿಕಿತ್ಸೆಗೆ ಶೇ. 90
ತಮ್ಮ ಅಥವಾ ತಮ್ಮ ವೈದ್ಯಕೀಯ ಚಿಕಿತ್ಸೆಗೆ ಪಿಎಫ್ ಹಣ ಬಿಡಿಸುವುದಾದರೆ ಒಂದು ವಾರದಲ್ಲೇ ಶೇ. 90ರಷ್ಟು ಹಣ ಬಿಡುಗಡೆ ಮಾಡಬಹುದು.
ದಾಖಲೆ ಬೇಕಾಗಿಲ್ಲ
ಉದ್ಯೋಗಿಗಳ ಯಾವುದೇ ಅಗತ್ಯಗಳಿಗೆ ಹಣ ಬೇಕು ಎಂದಾಗ ದಾಖಲೆ ನೀಡಬೇಕಾಗಿಲ್ಲ. ಇಲ್ಲಿಯವರೆಗೆ ದಾಖಲೆ ನೀಡಬೇಕಾಗಿತ್ತು. ಅಲ್ಲದೆ ಗೃಹ ಸಾಲ ತೀರಿಸಲು ಪಿಎಫ್ ಹಣ ಪಡೆಯಬಹುದು.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications