ಏಪ್ರಿಲ್ 1 ರಿಂದ ಬಿಎಸ್ 3 ವಾಹನಗಳ ನೋಂದಣಿ ಮತ್ತು ಮಾರಾಟವನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಏಪ್ರಿಲ್ 1 ರಿಂದ ಬಿಎಸ್ 3 ವಾಹನಗಳ ನೋಂದಣಿ ಮತ್ತು ಮಾರಾಟವನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಮೋಟಾರು ವಾಹನಗಳ ವಾಯುಮಾಲಿನ್ಯ ಪರಿಮಿತಿ ಮಾನದಂಡ ಬಿಎಸ್ 4 ಜಾರಿಗೆ ಬರುವ ಹಿನ್ನೆಲೆಯಲ್ಲಿ ಬಿಎಸ್ 3 ವಾಹನಗಳನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದ್ದು, ವಾಹನ ತಯಾರಿಕಾ ಸಂಸ್ಥೆಗಳು ಬಿಎಸ್ 4 ಮಾದರಿ ವಾಹನಗಳನ್ನು ತಯಾರಿಸಿ ಮಾರುಕಟ್ಟೆಗೆ ಬಿಡಬೇಕಾಗಿದೆ.
ರಿಯಾಯಿತಿ ಪ್ರಕಟಿಸಿದ ಕಂಪನಿಗಳು
ಸುಪ್ರೀಕೋರ್ಟ್ ಬಿಎಸ್ 3 ವಾಹನಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಸಂಸ್ಥೆಗಳಾದ ಹೀರೋ, ಹೆಚ್ಎಂಎಸ್ಐ, ಬಜಾಜ್ ಆಟೋ ಸುಜುಕಿ, ಹೋಂಡಾ ಮೋಟಾರ್ ಸೈಕಲ್ಸ್ ಮತ್ತು ಸ್ಕೂಟರ್ 22,000ವರೆಗೆ ರಿಯಾಯಿತಿ ಪ್ರಕಟಿಸಿದೆ.
ಏಪ್ರಿಲ್ 1ರ ಒಳಗಾಗಿ ಡೀಲ್
ಈಗಾಗಲೇ ಮಾರುಕಟ್ಟೆಯಲ್ಲಿ ಸುಮಾರು 8 ಲಕ್ಷ ಬಿಎಸ್ 3 ವಾಹನಗಳು ಮಾರಾಟಕ್ಕೆ ರೆಡಿಯಾಗಿವೆ. ಇದರಲ್ಲಿ 6.71 ಲಕ್ಷ ದ್ವಿಚಕ್ರ ವಾಹನಗಳಾಗಿದ್ದು, ಏಪ್ರಿಲ್ 1ರೊಳಗೆ ಆದಷ್ಟು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲು ಡೀಲರ್ ಗಳು ಮುಂದಾಗಿದ್ದಾರೆ. ಹೀರೋ ಮತ್ತು ಹೋಂಡಾ ಸಂಸ್ಥೆಗಳು 12,500 ವರೆಗೆ ರಿಯಾಯಿತಿ ನೀಡಿದ್ದು, ಅದು 22 ಸಾವಿರದವರೆಗೆ ಹೆಚ್ಚಿಸಿದೆ.
ನೇರ ರಿಯಾಯಿತಿ
ಹೀರೋ ಸ್ಕೂಟರ್ ಗಳ ಮೇಲೆ 12,500 ಹಾಗೂ ಪ್ರೀಮಿಯಮ್ ಬೈಕ್ ಗಳ ಮೇಲೆ 7,500 ಮತ್ತು ಹೋಂಡಾ ಮೋಟಾರ್ ಸೈಕಲ್ ಮತ್ತು ಸ್ಕೂಟರ್ ಇಂಡಿಯಾ 10 ಸಾವಿರ ನೇರ ರಿಯಾಯಿತಿ ನೀಡಲಾಗುತ್ತಿದೆ ಎಂದು ಡೀಲರ್ ಗಳು ತಿಳಿಸಿದ್ದಾರೆ.
ಕೊನೆ ದಿನಾಂಕ ಮುಂದೂಡಿಕೆಗೆ ಒತ್ತಾಯ
ಕೋರ್ಟ್ ಆದೇಶ ಬಂದ ನಂತರ ಕೊನೆ ದಿನಾಂಕವನ್ನು ಮುಂದೂಡುವಂತೆ ಬೈಕ್ ಕಂಪನಿಗಳು ಕೋರ್ಟ್ ಗೆ ಅರ್ಜಿ ಸಲ್ಲಿಸಿವೆ. ಷೋ ರೂಂಗಳಲ್ಲಿ ಬೈಕ್ ಗಳು ಸಾಲುಗಟ್ಟಿ ನಿಂತಿದ್ದು, ಒಂದು ದಿನದಲ್ಲಿ ಮಾರಾಟ ಮಾಡುವುದಾಗಲಿ ಅಥವಾ ಖರೀದಿದಾರರೂ ನೋಂದಣಿ ಮಾಡಿಸುವುದಾಗಲಿ ಕಷ್ಟ. ಹೀಗಾಗಿ ದಿನಾಂಕ ಮುಂದೂಡುವಂತೆ ಕಂಪನಿಗಳು ಒತ್ತಾಯಿಸಿವೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications