For Quick Alerts
For Daily Alerts
8165 ಕೋಟಿ ರೂಪಾಯಿ ರೈತರ ಸಾಲ ಮನ್ನಾ: ಸಿದ್ದರಾಮಯ್ಯ
ರಾಜ್ಯ ಸರ್ಕಾರ 22 ಸಾವಿರ ರೈತರ 8165 ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
|
ರಾಜ್ಯ ಸರ್ಕಾರ 22 ಸಾವಿರ ರೈತರ 8165 ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಸಾಲ ಮನ್ನಾ ಮಾಡುವುದರಿಂದ 22 ಸಾವಿರ ರೈತರಿಗೆ ಪ್ರಯೋಜನವಾಗಲಿದೆ. ಆದರೆ ರಾಜ್ಯದ ಬೊಕ್ಕಸಕ್ಕೆ ರೂ. 8165 ಕೋಟಿ ಹೊರೆ ಆಗಲಿದೆ. ರೈತರು ಪಡೆದ ಒಟ್ಟು ಸಾಲದಲ್ಲಿ ಗರಿಷ್ಠ ರೂ. 50 ಸಾವಿರವರೆಗೆ ಸಾಲ ಮನ್ನಾ ಆಗಲಿದೆ ಎಂದರು.
ಸಹಕಾರಿ ಬ್ಯಾಂಕುಗಳಲ್ಲಿ ಸಾಲ ಪಡೆದಿರುವ ರೈತರ ಸಾಲ ಮನ್ನಾವಾಗಲಿದೆ. ಅಲ್ಪಾವಧಿ ಅಥವಾ ಬೆಳೆ ಸಾಲವನ್ನು ಮಾತ್ರ ಮನ್ನಾ ಮಾಡಲಾಗಿದ್ದು, ಮಧ್ಯಮಾವಧಿ ಅಥವಾ ದೀರ್ಘಾವಧಿ ಸಾಲಕ್ಕೆ ಇದು ಅನ್ವಯಿಸುವುದಿಲ್ಲ ಎಂದಿದ್ದಾರೆ.
ಈಗಾಗಲೇ ಬಿಜೆಪಿ ಅಧಿಕಾರ ಹೊಂದಿರುವ ಮಹಾರಾಷ್ಟ್ರ ಮತ್ತು ಉತ್ತರಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು ರೈತರ ಸಾಲಮನ್ನಾ ಘೋಷಿಸಿವೆ.
English summary
Karnataka government Rs 8,167-crore loan waiver
Story first published: Wednesday, June 21, 2017, 15:04 [IST]