ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಜುಲೈ 1ರಿಂದ ಜಾರಿಯಾಗುತ್ತಿರುವ ಪರಿಣಾಮ ರೈಲು ಪ್ರಯಾಣಿಕರು ಎಸಿ ಮತ್ತು ಪ್ರಥಮ ದರ್ಜೆ ಪ್ರಯಾಣಗಳ ಮೇಲೆ ಸಲ್ಪ ಹೆಚ್ಚು ಮೊತ್ತ ಪಾವತಿಸಬೇಕಾಗುತ್ತದೆ.
ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಜುಲೈ 1ರಿಂದ ಜಾರಿಯಾಗುತ್ತಿರುವ ಪರಿಣಾಮ ರೈಲು ಪ್ರಯಾಣಿಕರು ಎಸಿ ಮತ್ತು ಪ್ರಥಮ ದರ್ಜೆ ಪ್ರಯಾಣಗಳ ಮೇಲೆ ಸಲ್ಪ ಹೆಚ್ಚು ಮೊತ್ತ ಪಾವತಿಸಬೇಕಾಗುತ್ತದೆ.
ಜಿಎಸ್ಟಿ ಅನುಷ್ಠಾನದ ನಂತರ ಟಿಕೆಟ್ ಶುಲ್ಕದ ಮೇಲಿನ ಸೇವಾ ತೆರಿಗೆ ಶೇ. 4.5 ರಿಂದ ಶೇ. 5ಕ್ಕೆ ಏರಿಕೆಯಾಗಲಿದೆ.
ಎಷ್ಟು ಪಾವತಿಸಬೇಕು?
ಎಸಿ ಮತ್ತು ಪ್ರಥಮ ದರ್ಜೆಯ ಪ್ರಯಾಣ ದರಗಳಲ್ಲಿ ಮಾತ್ರ ಸೇವಾ ತೆರಿಗೆಯನ್ನು ವಿಧಿಸಲಾಗುತ್ತದೆ. ಹಾಗಾಗಿ ಟಿಕೆಟ್ ದರ ರೂ. 2,000 ಆಗಿದ್ದರೆ, ಮುಂದಿನ ತಿಂಗಳಲ್ಲಿ ಪ್ರಯಾಣಿಕರು ರೂ. 2,010ರಷ್ಟು ಪಾವತಿಸಬೇಕಾಗುತ್ತದೆ ಎಂದು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಸಲಹೆಗಾರರ ನೇಮಕ
ಜುಲೈ 1 ರಿಂದ ಜಿಎಸ್ಟಿ(GOODS AND SERVICES TAX) ಅನುಷ್ಠಾನವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಏಕ ತೆರಿಗೆ ಪದ್ದತಿಯ ಸುಗಮ ಆಡಳಿತ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಹಾಗೂ ನಿರ್ವಹಿಸಲು ರೈಲ್ವೆ ಇಲಾಖೆ ಪ್ರತಿ ರಾಜ್ಯದಲ್ಲಿ ನೋಡಾಲ್ ಅಧಿಕಾರಿಯನ್ನು ನೇಮಿಸಿದೆ. ಜತೆಗೆ ಭಾರತೀಯ ರೈಲ್ವೆಯಲ್ಲಿ ಜಿಎಸ್ಟಿ ಪ್ರಭಾವವನ್ನು ಪರಿಶೀಲಿಸಲು ಸಲಹೆಗಾರರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಜಿಎಸ್ಟಿ ದೂರು ಪರಿಶೀಲನೆ
ಜಿಎಸ್ಟಿ ನೋಂದಣಿ ಪಾನ್ ವಿವರಗಳನ್ನು ಆಧರಿಸಿರುವುದರಿಂದ, ಪ್ರಕ್ರಿಯೆ ಚಾಲ್ತಿಯಲ್ಲಿದೆ. ಜಿಎಸ್ಟಿ ಸಂಬಂಧಿತ ದೂರುಗಳನ್ನು ತೆಗೆದು ಪರಿಶೀಲಿಸಲು ರೈಲ್ವೆಯ ಪ್ರತಿ ವಲಯಗಳಲ್ಲಿ ಪ್ರಧಾನ ಅಧಿಕಾರಿಗಳನ್ನು ನಾಮಕರಣ ಮಾಡಲಾಗಿದೆ. ರೈಲ್ವೆಯ ಪ್ರಮುಖ ವಹಿವಾಟುಗಳನ್ನು ಗಣಕೀಕೃತಗೊಳಿಸಿದ್ದರೂ, ಕೆಲವು ಇನ್ನೂ ಆಫ್-ಲೈನ್ ಆಗಿವೆ. ಅವುಗಳ ಡಿಜಿಟಲೀಕರಣಕ್ಕಾಗಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಜಿಎಸ್ಟಿ(GST) ರೇಟ್ ಫಿಕ್ಸ್: 13 ಪ್ರಯೋಜನ ತಪ್ಪದೆ ಪಡೆಯಿರಿ
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications