ಶಿಕ್ಷಕರಿಗೆ ಸಿಹಿಸುದ್ದಿ ನೀಡಿರುವ ಕೇಂದ್ರ ಸರ್ಕಾರ ದೀಪಾವಳಿಗೆ ಬಂಪರ್ ಕೊಡುಗೆ ಘೋಷಿಸಿದೆ! ಕೇಂದ್ರ ಸಚಿವ ಸಂಪುಟ ಪ್ರಾಧ್ಯಾಪಕರ ವೇತನ ಪರಿಷ್ಕರಣೆಗೆ ಅನುಮೋದನೆ ನೀಡುವ ನೀಡುವ ಮೂಲಕ ದೀಪಾವಳಿಗೆ ಕೊಡುಗೆ ನೀಡಿದೆ.
ಶಿಕ್ಷಕರಿಗೆ ಸಿಹಿಸುದ್ದಿ ನೀಡಿರುವ ಕೇಂದ್ರ ಸರ್ಕಾರ ದೀಪಾವಳಿಗೆ ಬಂಪರ್ ಕೊಡುಗೆ ಘೋಷಿಸಿದೆ!
7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಸಚಿವ ಸಂಪುಟ ಪ್ರಾಧ್ಯಾಪಕರ ವೇತನ ಪರಿಷ್ಕರಣೆಗೆ ಅನುಮೋದನೆ ನೀಡುವ ನೀಡುವ ಮೂಲಕ ದೀಪಾವಳಿಗೆ ಕೊಡುಗೆ ನೀಡಿದೆ.
ಯಾರ ವೇತನ ಹೆಚ್ಚಾಗಲಿದೆ?
ಕೇಂದ್ರೀಯ ಮತ್ತು ರಾಜ್ಯಗಳಲ್ಲಿನ ವಿಶ್ವವಿದ್ಯಾಲಯಗಳು, ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಭಾರತೀಯ ತಂತ್ರಜ್ಞಾನ ಸಂಸ್ಥೆಗಳ ಪ್ರಾಧ್ಯಾಪಕರಿಗೆ ಹೊಸ ವೇತನ ಹೆಚ್ಚಾಗಲಿದೆ.
7.58 ಲಕ್ಷ ಪ್ರಾಧ್ಯಾಪಕರಿಗೆ ಬಂಪರ್
ಉನ್ನತ ಶಿಕ್ಷಣ ಸಂಸ್ಥೆಗಳ ಪ್ರಾಧ್ಯಾಪಕರು ಮತ್ತು ಅವರಿಗೆ ಸರಿಸಮಾನ ಹುದ್ದೆಯಲ್ಲಿರುವ ಸಿಬ್ಬಂದಿಗಳ ವೇತನವನ್ನು 7ನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಹೆಚ್ಚಿಸಲಾಗಿದೆ. 7ನೇ ವೇತನ ಆಯೋಗದ ಹೊಸ ವೇತನದಿಂದ 7.58 ಲಕ್ಷ ಪ್ರಾಧ್ಯಾಪಕರಿಗೆ ಪ್ರಯೋಜನ ಸಿಗಲಿದೆ. ಹೊಸ ವೇತನ ಜನವರಿ 1, 2016ರಿಂದ ಪೂರ್ವಾನ್ವಯವಾಗುವಂತೆ ಜಾರಿಯಾಗಲಿದೆ.
ಇವರಿಗೆ ಹೊಸ ವೇತನದ ಲಾಭ
ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದಿಂದ ಅನುದಾನ ಪಡೆಯುವ 106 ವಿಶ್ವವಿದ್ಯಾಲಯಗಳು, ಕಾಲೇಜುಗಳು, ರಾಜ್ಯ ಸರ್ಕಾರಗಳಿಂದ ಅನುದಾನ ಪಡೆಯುವ 329 ವಿಶ್ವವಿದ್ಯಾಲಯಗಳು ಹಾಗೂ 12,912 ಸರ್ಕಾರಿ ಮತ್ತು ಖಾಸಗಿ ಅನುದಾನಿತ ಕಾಲೇಜುಗಳ ಪ್ರಾಧ್ಯಾಪಕರು ಹೊಸ ವೇತನ ಪಡೆಯಲಿದ್ದಾರೆ. ಮತ್ತು ಅವರ ಸರಿಸಮಾನ ಹುದ್ದೆಯಲ್ಲಿರುವ ಸಿಬ್ಬಂದಿ ಹೊಸ ವೇತನದ ಲಾಭ ಸಿಗಲಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಹೊಸ ವೇತನದ ಹೆಚ್ಚಳ ಪ್ರಮಾಣ
ಹೊಸದಾಗಿ ನೇಮಕವಾದ ಸಹಾಯಕ ಪ್ರಾಧ್ಯಾಪಕರ ವೇತನ ಪ್ರತಿ ತಿಂಗಳು ರೂ.47ಸಾವಿರದಿಂದ 57ಸಾವಿರಕ್ಕೆ ಹೆಚ್ಚಳವಾಗಲಿದೆ. ಸಹಾಯಕ ಪ್ರಾಧ್ಯಾಪಕರ (ಗ್ರೇಡ್-2) ವೇತನ ಪ್ರತಿ ತಿಂಗಳು ರೂ. 56ಸಾವಿರದಿಂದ 68ಸಾವಿರಕ್ಕೆ ಮತ್ತು ಸಹಾಯಕ ಪ್ರಾಧ್ಯಾಪಕ (ಗ್ರೇಡ್-3) ವೇತನ ಪ್ರತಿ ತಿಂಗಳು ರೂ. 65ಸಾವಿರದಿಂದ 80ಸಾವಿರಕ್ಕೆ ಹೆಚ್ಚಳವಾಗಲಿದೆ. ಸಹ ಪ್ರಾಧ್ಯಾಪಕರ ವೇತನ ಪ್ರತಿ ತಿಂಗಳು ರೂ. 1.07ಲಕ್ಷದಿಂದ 1.31 ಲಕ್ಷ, ಪ್ರಾಧ್ಯಾಪಕರ ವೇತನ ರೂ. 1.16ರಿಂದ 1.44ಲಕ್ಷಕ್ಕೆ ಹೆಚ್ಚಳ ಆಗಲಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications