ಬಾಬಾ ರಾಮದೇವ್ ನೇತೃತ್ವದ ಪತಂಜಲಿ ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದು, ತನ್ನ ಉತ್ಪನ್ನಗಳನ್ನು ಆನ್ಲೈನ್ ಮೂಲಕ ಮಾರಾಟ ಮಾಡಲು ನಿಶ್ಚಯಿಸಿದೆ. ಪ್ರಸ್ತುತ ಆನ್ಲೈನ್ ಮಾರುಕಟ್ಟೆ ಎಲ್ಲರ ನೆಚ್ಚಿನ ತಾಣವಾಗಿ ಮಾರ್ಪಟ್ಟಿದೆ.
ಬಾಬಾ ರಾಮದೇವ್ ನೇತೃತ್ವದ ಪತಂಜಲಿ ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದು, ತನ್ನ ಉತ್ಪನ್ನಗಳನ್ನು ಆನ್ಲೈನ್ ಮೂಲಕ ಮಾರಾಟ ಮಾಡಲು ನಿಶ್ಚಯಿಸಿದೆ.
ಪ್ರಸ್ತುತ ಆನ್ಲೈನ್ ಮಾರುಕಟ್ಟೆ ಎಲ್ಲರ ನೆಚ್ಚಿನ ತಾಣವಾಗಿ ಮಾರ್ಪಟ್ಟಿದೆ. ಪತಂಜಲಿ ಸಂಸ್ಥೆ ಆನ್ಲೈನ್ ವೇದಿಕೆಯನ್ನು ಸಮರ್ಥವಾಗಿ ಬಳಸಲು ಮುಂದಾಗಿದೆ.
ಆನ್ಲೈನ್ ಕಂಪನಿಗಳೊಂದಿಗೆ ಒಪ್ಪಂದ
ಪತಂಜಲಿ ಕಂಪನಿ ಅಮೆಜಾನ್, ಫ್ಲಿಪ್ ಕಾರ್ಟ್, ಪೇಟಿಎಂ ಮಾಲ್, 1ಎಂಜಿ, ಬಿಗ್ ಬಾಸ್ಕೆಟ್, ಗ್ರೂಫರ್ಸ್, ಶಾಪ್ ಕ್ಲೂಸ್ ಮತ್ತು ಸ್ನಾಪ್ ಡೀಲ್ ನಂತಹ ದಿಗ್ಗಜ ಸಂಸ್ಥೆಗಳ ಮೂಲಕ ತನ್ನ ಉತ್ಪನ್ನಗಳನ್ನು ಆನ್ಲೈನ್ ಮೂಲಕ ಮಾರಾಟ ಮಾಡಲು ಒಪ್ಪಂದ ಮಾಡಿಕೊಂಡಿದೆ. ಭಾರತದ ಮಾರುಕಟ್ಟೆಯಲ್ಲಿ ಪತಂಜಲಿಯ ಯಶಸ್ಸಿನ ನಾಗಾಲೋಟಕ್ಕೆ ಕಾರಣಗಳೇನು ಗೊತ್ತೆ?
ಉತ್ಪನ್ನಗಳು ಎಲ್ಲರಿಗೂ ಸಿಗಲಿವೆ
ನಾವು ಈಗ ಬೃಹತ್ತಾದ ವೇದಿಕೆಯಲ್ಲಿ ಮುನ್ನಡೆಯುತ್ತಿದ್ದೇವೆ. ಈಗ, ನಮ್ಮ ಎಲ್ಲಾ ಉತ್ಪನ್ನಗಳನ್ನು ಆನ್ಲೈನ್ ಮೂಲಕ ಮಾರಾಟ ಮಾಡಲು ವ್ಯವಸ್ಥಿತವಾದ ಒಪ್ಪಂದವನ್ನು ಹೊಂದಿದ್ದೇವೆ. ಇದರಿಂದ ನಮ್ಮ ಉತ್ಪನ್ನಗಳು ಎಲ್ಲಾ ಗ್ರಾಹಕರನ್ನು ತಲುಪಲಿದೆ ಎಂದು ಸಂಸ್ಥೆ ಹೇಳಿದೆ.
patanjaliayurved.net
ಪತಂಜಲಿಯ ಸ್ವಂತ ವೆಬ್ ಪೋರ್ಟಲ್ patanjaliayurved.net ನಲ್ಲಿ ಕಂಪನಿಯು ತನ್ನ ಉತ್ಪನ್ನಗಳನ್ನು ಆನ್ಲೈನ್ ನಲ್ಲಿ ಮಾರಾಟ ಮಾಡುತ್ತದೆ. ಈ ವೇದಿಕೆಯನ್ನು ಚಿಲ್ಲರೆ ವ್ಯಾಪಾರಿಗಳು ಮತ್ತು ಸಮೂಹಕಾರರು ಹಂಚಿಕೊಳ್ಳಬಹುದು. ಅವರು ಬರುತ್ತಿದ್ದಾರೆ ಮತ್ತು ತಾವು ಬ್ರಾಂಡ್ ಪತಂಜಲಿಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪ್ರಕಟಣೆ ಮಾಡುತ್ತಾರೆ" ಎಂದು ಅವರು ಹೇಳಿದರು.
ಶಿಕ್ಷಣ ಮತ್ತು ಆರೋಗ್ಯ ಸೇವೆ
ಹರಿದ್ವಾರ ಮೂಲದ ಪತಂಜಲಿ ಮಕ್ಕಳ ಮತ್ತು ವಯಸ್ಕ ಡೈಪರ್ ಮತ್ತು ಕೈಗೆಟುಕುವ ನೈರ್ಮಲ್ಯ ಕರವಸ್ತ್ರದ (ನ್ಯಾಪ್ ಕಿನ್ಸ್) ವಿಭಾಗಗಳನ್ನು ಪ್ರವೇಶಿಸಿದೆ. ಕಂಪನಿಯು ಕಳೆದ ತಿಂಗಳು ಸೋಲಾರ್ ತಯಾರಿಕೆಯಲ್ಲಿ ತೊಡಗಲಿದೆ ಎಂದು ಘೋಷಿಸಿದೆ. ಎಫ್ಎಂಸಿಜಿ(ವೇಗವಾಗಿ ಚಲಿಸುತ್ತಿರುವ ಗ್ರಾಹಕರ ಸರಕುಗಳು)ವಿಭಾಗದ ಜೊತೆಗೆ, ಪತಂಜಲಿ ಶಿಕ್ಷಣ ಮತ್ತು ಆರೋಗ್ಯ ಸೇವೆಗಳಂತಹ ಇತರೆ ವಲಯಗಳಲ್ಲೂ ಸೇವೆಯಲ್ಲಿ ತೊಡಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications