ಅರುಣ್ ಜೇಟ್ಲಿ ಮಂಡಿಸಿರುವ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಕೃಷಿ, ಆರೋಗ್ಯ ಮತ್ತು ಶಿಕ್ಷಣ ವಲಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ.
ಅರುಣ್ ಜೇಟ್ಲಿ ಮಂಡಿಸಿರುವ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಕೃಷಿ, ಆರೋಗ್ಯ ಮತ್ತು ಶಿಕ್ಷಣ ವಲಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ.
ಈಗಾಗಲೇ ಆರೋಗ್ಯ ಸುಧಾರಣೆಗಾಗಿ ಅನೇಕ ವಿಮಾ ಯೋಜನೆಗಳನ್ನು ಮೋದಿ ಸರ್ಕಾರ ಘೋಷಿಸಿದ್ದು, ನಿನ್ನೆಯ ಬಜೆಟ್ ನಲ್ಲಿ ಇನ್ನೂ ವೇಗೋತ್ಕರ್ಷ ಸಿಕ್ಕಿದೆ. ರೈತರನ್ನು ಸೆಳೆಯಲು ಕೃಷಿ ವಲಯಕ್ಕೆ ಹೆಚ್ಚು ಉತ್ತೇಜನ ನೀಡಲು ಪ್ರಯತ್ನಿಸಿದೆ.
ಕೃಷಿ ವಲಯ
- ಸಾವಯವ ಕೃಷಿಗೆ ಹೆಚ್ಚು ಉತ್ತೇಜನ ನೀಡಲಾಗಿದ್ದು, ಕೃಷಿ ಉಗ್ರಾಣ ಸಂಗ್ರಹ ಸಾಮರ್ಥ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.
- ಕೃಷಿ ಮಾರುಕಟ್ಟೆಗಳ ಅಭಿವೃದ್ಧಿಗಾಗಿ ಸರ್ಕಾರ ರೂ. 2,000 ಕೋಟಿ ಮೊತ್ತದಲ್ಲಿ ‘ಕೃಷಿ ಮಾರುಕಟ್ಟೆ ನಿಧಿ' ನಿಗದಿ
- ಬಿದಿರು ಕೃಷಿಗಾಗಿ ರೂ.1,290 ಮೊತ್ತದ ನಿಧಿ ಮೀಸಲು
- ರೈತರ ಸಾಲಗಳಿಗಾಗಿ 11 ಲಕ್ಷ ಕೋಟಿ ಅನುದಾನ, ಬೆಳೆಯನ್ನು ನೇರವಾಗಿ ಮಾರಾಟ ಮಾಡಲು ಅವಕಾಶ.
- ಕೃಷಿ ಉತ್ಪನ್ನ ಕಂಪೆನಿಗಳಿಗೆ ಶೇ. 100ರ ತೆರಿಗೆ ವಿನಾಯಿತಿ
- ‘ಆಪರೇಷನ್ ಗ್ರೀನ್' ಯೋಜನೆಗೆ ರೂ. 500 ಕೋಟಿ ಅನುದಾನ
- 2022ರ ವೇಳೆಗೆ ಕೃಷಿಕ ವರ್ಗದ ಆದಾಯ ದುಪ್ಪಟ್ಟುಗೊಳಿಸಲು ಯೋಜನೆ ಕೇಂದ್ರ ಬಜೆಟ್ 2018: ಯಾವುದು ದುಬಾರಿ, ಯಾವುದು ಅಗ್ಗ? ಇಲ್ಲಿದೆ ಸಂಪೂರ್ಣ ಮಾಹಿತಿ..
ಆರೋಗ್ಯ ವಲಯ
- ರಾಷ್ಟ್ರೀಯ ಆರೋಗ್ಯ ಯೋಜನೆ ಮೂಲಕ ಉತ್ತಮ ಆರೋಗ್ಯ ಸೌಲಭ್ಯಕ್ಕಾಗಿ ರಾಷ್ಟ್ರೀಯ ಸ್ವಾಥ್ಯ ವಿಮಾ ಯೋಜನೆಗೆ 30 ಸಾವಿರ ಕೋಟಿ ಅನುದಾನ
- ಆರೋಗ್ಯ ಕ್ಷೇಮ ಕೇಂದ್ರಗಳಿಗಾಗಿ ರೂ. 1200 ಕೋಟಿ ಅನುದಾನ ಬಿಡುಗಡೆ. ಅತಿಹೆಚ್ಚು ಮೊತ್ತದ ಆರೋಗ್ಯ ವಿಮೆ ಸೌಲಭ್ಯವನ್ನು 50 ಲಕ್ಷ ಜನರಿಗೆ ಈ ಯೋಜನೆಯಡಿ ನೀಡಲಾಗುವುದು.
- ವೈದ್ಯಕೀಯ ವೆಚ್ಚದ ತೆರಿಗೆ ವಿನಾಯಿತಿ ರೂ. 40,000ಕ್ಕೆ ಹೆಚ್ಚಳ ಮಾಡಲಾಗಿದೆ.
- ಪ್ರತಿ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಆರೋಗ್ಯ ವಿಮೆ ಒದಗಿಸಲಾಗುವುದು. ಈ ಯೋಜನೆ 10 ಕೋಟಿ ಕುಟುಂಬಗಳಿಗೆ ಸಿಗಲಿದೆ.
- ರೂ. 600 ಕೋಟಿ ಅನುದಾನದಡಿಯಲ್ಲಿ ಕ್ಷಯ ರೋಗಿಗಳಿಗಾಗಿ ‘ಆಯುಷ್ಮಾನ್ ಭಾರತ್' ಯೋಜನೆ ಪ್ರಾರಂಭ
- ಸ್ವಚ್ಛ ಭಾರತ ಯೋಜನೆಯಡಿಯಲ್ಲಿ ಇಲ್ಲಿಯವರೆಗೆ 6 ಕೋಟಿ ಶೌಚಾಲಯಗಳ ನಿರ್ಮಾಣ
- ಸ್ವಚ್ಛ ಭಾರತ ಯೋಜನೆಯಡಿಯಲ್ಲಿ 2 ಕೋಟಿ ಶೌಚಾಲಯಗಳ ನಿರ್ಮಾಣದ ಗುರಿ ಇದೆ.
- 24 ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಸ್ಥಾಪನೆ ಕೇಂದ್ರ ಬಜೆಟ್ 2018: ಅರುಣ್ ಜೇಟ್ಲಿ ಮಂಡಿಸಿರುವ ಪ್ರಮುಖ ಜನಪ್ರಿಯ ಯೋಜನೆಗಳ ವಿವರ..
ಶೈಕ್ಷಣಿಕ ವಲಯ
- ಬುಡಕಟ್ಟು, ವನವಾಸಿ ವಿದ್ಯಾರ್ಥಿಗಳ ಶಿಕ್ಷಣ ಪ್ರೋತ್ಸಾಹಕ್ಕೆ ನವೋದಯ ಮಾದರಿಯಲ್ಲಿ ಏಕಲವ್ಯ ವಸತಿ ನಿಲಯ ಸ್ಥಾಪನೆ
- ಗುಣಮಟ್ಟದ ಶಿಕ್ಷಣಕ್ಕಾಗಿ ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲ್ ಸೌಲಭ್ಯಕ್ಕೆ ಆದ್ಯತೆ
- ಗ್ರಾಮೀಣ ಪ್ರದೇಶದಲ್ಲಿ ಬ್ಯ್ಲಾಕ್ ಬೋರ್ಡ್ ಬದಲು ಡಿಜಿಟಲ್ ಬೋರ್ಡ್ ಸೌಲಭ್ಯ
- ಚೆನ್ನೈ ಐಐಟಿಯಲ್ಲಿ 5G ಅಧ್ಯಯನ ಕೇಂದ್ರ ಸ್ಥಾಪನೆ ಮಾಡಲಾಗುವುದು
- ವಡೋದರಾದಲ್ಲಿ ರೈಲ್ವೆ ವಿಶ್ವವಿದ್ಯಾಲಯ ನಿರ್ಮಾಣ ಸಾಧ್ಯತೆ
ಕೇಂದ್ರ ಬಜೆಟ್ 2018 ಹೆಚ್ಚಿನ ಮಾಹಿತಿ
ಬಜೆಟ್ ಸಂಬಂಧಿತ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications