ಭಾರತವನ್ನು ಲೂಟಿ ಪರಾರಿಯಾಗುತ್ತಿರುವ ದೇಶದ್ರೋಹಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಮನಿ ಲಾಂಡರಿಂಗ್ ಪ್ರಕರಣಗಳು ಜೋರಾಗಿ ನಡೆಯುತ್ತಿವೆ.
ಭಾರತವನ್ನು ಲೂಟಿ ಪರಾರಿಯಾಗುತ್ತಿರುವ ದೇಶದ್ರೋಹಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಮನಿ ಲಾಂಡರಿಂಗ್ ಪ್ರಕರಣಗಳು ಜೋರಾಗಿ ನಡೆಯುತ್ತಿವೆ. ಕಪ್ಪು ಹಣದಿಂದ ತಪ್ಪಿಸಿಕೊಂಡು ಬ್ಯಾಂಕುಗಳ ಹಣವನ್ನು ದರೋಡೆ ಮಾಡಿ ನಂತರ ಅನೇಕ ಭಾರತೀಯ ಉದ್ಯಮಿಗಳು ಓಡಿ ಹೋಗಿದ್ದಾರೆ. ಮೊನ್ನೆಯವರೆಗೆ ವಿಜಯ್ ಮಲ್ಯ ಬಗ್ಗೆ ಮಾತನಾಡುತ್ತಿದ್ದವರು ಇದೀಗ ನಿರವ್ ಮೋದಿ ಬಗ್ಗೆ ಮಾತನಾಡುತ್ತಿದ್ದಾರೆ.
ಹಣಕಾಸಿನ ಭ್ರಷ್ಟಾಚಾರಗಳನ್ನು ಮಾಡಿ ಭಾರತದಿಂದ ಓಡಿಹೋದವರ ಪಟ್ಟಿಯನ್ನು ಇಲ್ಲಿ ನೀಡಲಾಗಿದ್ದು, ಇವರನ್ನು ಕಾನೂನಿನ ಮುಂದೆ ನಿಲ್ಲಿಸಲು ದೇಶಕ್ಕೆ ಇನ್ನೂ ಸಾಧ್ಯವಾಗಿಲ್ಲ ಎಂಬುದು ದುಖದ ಸಂಗತಿ..
ನಿರವ್ ಮೋದಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಆಗಿರುವ ರೂ. 11,300 ಕೋಟಿಗಳ ಹಗರಣ ದೇಶದೆಲ್ಲೆಡೆ ಬಹುವಾಗಿ ಚರ್ಚೆಯಾಗುತ್ತಿದ್ದು, ಇದು ಎಲ್ಲರಿಗೂ ತಿಳಿದಿರುವ ಸಂಗತಿಯೆ. ಮನಿ ಲಾಂಡರಿಂಗ್, ಹಣಕಾಸಿನ ಭೃಷ್ಟಾಚಾರದಲ್ಲಿ ಸಿಲುಕಿರುವ ನಿರವ್ ಮೋದಿ ಬಂಧನದಿಂದ ತಪ್ಪಿಸಿಕೊಳ್ಳಲು ದೇಶ ಬಿಟ್ಟು ಓಡಿ ಹೋಗಿದ್ದಾರೆ. ಆತ ಪ್ರಸ್ತುತ ಸ್ವಿಟ್ಜರ್ಲೆಂಡ್ ನಲ್ಲಿದ್ದಾರೆ ಎಂದು ನಂಬಲಾಗಿದೆ.
ವಿಜಯ್ ಮಲ್ಯ
ಕಿಂಗ್ಫಿಶರ್ ಏರ್ಲೈನ್ಸ್ ಮತ್ತು ಯುಬಿ ಗ್ರೂಪ್ ಮಾಲೀಕ ವಿಜಯ್ ಮಲ್ಯ ಭಾರತದ ತೊರೆದ ಇನ್ನೊಬ್ಬ ವ್ಯಕ್ತಿಯೆನಿಸಿದ್ದಾರೆ. ವಿಜಯ್ ಮಲ್ಯ ವಿರುದ್ಧ ರೂ. 900 ಕೋಟಿ ಭೃಷ್ಟಾಚಾರದ ಅರೋಪವಿದ್ದು, ಅನೇಕ ಬ್ಯಾಂಕುಗಳಿಂದ ತೆಗೆದುಕೊಂಡ ಸಾಲಗಳನ್ನು ಮಲ್ಯ ಪಾವತಿಸಿಲ್ಲ. ವಿಜಯ್ ಮಲ್ಯ ಇದೀಗ ಲಂಡನ್ ನಲ್ಲಿದ್ದಾರೆ ಹಾಯಾಗಿ ಇದ್ದಾರೆ.
ಲಲಿತ್ ಮೋದಿ
ಇಂಡಿಯನ್ ಪ್ರೀಮಿಯರ್ ಲೀಗ್ ಮಾಜಿ ಐಪಿಎಲ್ ನಿರ್ವಾಹಕ ಲಲಿತ್ ಮೋದಿ ಹೆಸರು ಕೂಡ ಈ ಪಟ್ಟಿಯಲ್ಲಿದೆ. ಮನಿ ಲಾಂಡರಿಂಗ್, ಬಿಸಿಸಿಐನಲ್ಲಿನ ಆರ್ಥಿಕ ನಿರ್ಬಂಧಗಳ ಕಾರಣದಿಂದ ನಿಷೇಧಿಸಿತು.
ಕ್ರಿಕೆಟ್ ಆಡಳಿತಾಧಿಕಾರಿಯಾಗಿ ಲಲಿತ್ ಮೋದಿ ಮನಿ ಲಾಂಡರಿಂಗ್ ಆರೋಪಿಯೆನಿಸಿದರು. ಪ್ರಸ್ತುತ ಯುಕೆಯಲ್ಲಿ ವಾಸವಾಗಿದ್ದಾರೆ.
ದೀಪಕ್ ತಲ್ವಾರ್
ಕಾರ್ಪೋರೇಟ್ ಲಾಬಿಸ್ಟ್ ದೀಪಕ್ ತಲವಾರ್ ಸುಮಾರು ರೂ. 1000 ಕೋಟಿ ಲಂಚದ ಆರೋಪದಲ್ಲಿ ಆದಾಯ ತೆರಿಗೆ ಇಲಾಖೆ ಐದು ಪ್ರಕರಣಗಳನ್ನು ದಾಖಲಿಸಿದೆ. ವಾಯುಯಾನ ಹಗರಣದಲ್ಲೂ ಕೂಡ ಇವರ ಹೆಸರು ಎಂದು ನಂಬಲಾಗಿದೆ. ಕಳೆದ ವರ್ಷ ಜೂನ್ ನಲ್ಲಿ ಐಟಿ ಅಧಿಕಾರಿಗಳು ಇವರ ಮನೆ ಮೇಲೆ ದಾಳಿ ನಡೆಸಿದ್ದರು.
ವಿಮಾನಯಾನ ವಲಯದಲ್ಲಿ ಸಕ್ರಿಯವಾಗಿರುವ ದೀಪಕ್ ತಲ್ವಾರ್ ಮತ್ತು ಟೆಲಿಕಾಂ ಮತ್ತು ವಾಯುಯಾನ ವ್ಯವಹಾರಗಳ ದಲ್ಲಾಳಿ. ಯುಪಿಎ ಆಡಳಿತದ ಅವಧಿಯಲ್ಲಿ ತನ್ನ ಗ್ರಾಹಕರ ಅನುಕೂಲಕ್ಕಾಗಿ ಅಧಿಕಾರಿಗಳಿಗೆ ಲಂಚ ನೀಡಿದ್ದರು ಎಂದು ತನಿಖೆಯು ತಿಳಿಸಿದೆ. ಪ್ರಸ್ತುತ ತಲ್ವಾರ್ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿದ್ದಾರೆ.
ಸಂಜಯ್ ಭಂಡಾರಿ
ಶಸ್ತ್ರಾಸ್ತ್ರ ವಿತರಕ ಆಗಿರುವ ಸಂಜಯ್ ಭಂಡಾರಿಯನ್ನು ತೆರಿಗೆ ವಂಚನೆ ಪ್ರಕರಣದ ಅಡಿ ಜಾರಿ ನಿರ್ದೇಶನಾಲಯವು ರೂ. 26 ಕೋಟಿ ಆರೋಪವಿದೆ. ಸಂಜಯ್ ಭಂಡಾರಿಯನ್ನು ದೆಹಲಿ ನ್ಯಾಯಾಲಯವು ಅಧಿಕೃತ ಸೆಕ್ಟ್ ಆಕ್ಟ್ ಅಡಿಯಲ್ಲಿ ದೋಷಾರೋಪಣೆ ಮಾಡಿದೆ. ಈ ಸಮಯದಲ್ಲಿ ದೇಶ ತೊರೆದಿದ್ದು, ನೇಪಾಳದಲ್ಲಿ ವಾಸ್ತವ್ಯ ಹೂಡಿದ್ದಾರೆ ಎನ್ನಲಾಗಿದೆ.
More From GoodReturns

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Vande Bharat: ಸುಂದರ ನೋಟ, ವೇಗದ ಸೇವೆ; ವಂದೇ ಭಾರತ್ ರೈಲಿನ ವಿಶೇಷ ಮಾರ್ಗಗಳಿವು!

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications