ಜಗತ್ತಿನಲ್ಲೇ ಹೆಸರುವಾಸಿಯಾದ ಇನ್ಫೊಸಿಸ್, ಐಬಿಎಂ, ಡೆಲಾಯಿಟ್, ಅಕ್ಸೆಂಚರ್, ಟಿಸಿಎಸ್ ಸೇರಿದಂತೆ ಇನ್ನೂ ಅನೇಕ ಐಟಿ ಹಾಗೂ ತಂತ್ರಜ್ಞಾನದ ಕಂಪನಿಗಳು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿವೆ.
ಕರ್ನಾಟಕದ ರಾಜಧಾನಿ, ಉದ್ಯಾನ ನಗರಗಳ ಖ್ಯಾತಿಯ ಬೆಂಗಳೂರು ದೇಶದ ಪ್ರಮುಖ ಮಹಾನಗರಗಳಲ್ಲೊಂದಾಗಿ ಗುರುತಿಸಿಕೊಂಡಿದೆ. ಇದು ಭಾರತದ ಸಿಲಿಕಾನ್ ಸಿಟಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದ್ದು, ಇಲ್ಲಿನ ವಾಣಿಜ್ಯ ವಹಿವಾಟಿನಿಂದ ದೇಶದ ಜಿಡಿಪಿಗೆ ಬಹುದೊಡ್ಡ ಪ್ರಮಾಣದ ಆದಾಯ ನೀಡುತ್ತಿದೆ.
ಜಗತ್ತಿನಲ್ಲೇ ಹೆಸರುವಾಸಿಯಾದ ಇನ್ಫೊಸಿಸ್, ಐಬಿಎಂ, ಡೆಲಾಯಿಟ್, ಅಕ್ಸೆಂಚರ್, ಟಿಸಿಎಸ್ ಸೇರಿದಂತೆ ಇನ್ನೂ ಅನೇಕ ಐಟಿ ಹಾಗೂ ತಂತ್ರಜ್ಞಾನದ ಕಂಪನಿಗಳು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿವೆ. ಇವುಗಳಿಂದ ಇನ್ಫಾರ್ಮೇಶನ್ ಟೆಕ್ನಾಲಜಿ ಹಾಗೂ ಐಟಿ ಸಂಬಂಧಿತ ವಲಯದಲ್ಲಿ ದೇಶ ಅಪಾರ ಅಭಿವೃದ್ಧಿ ಸಾಧಿಸಿದೆ.
ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕೆಲಸ ಮಾಡುವ ಬಹುತೇಕ ಜನತೆ ಒಂದು ರೀತಿಯ ಅರ್ಥವಿಲ್ಲದ ಜೀವನ ಕಳೆಯುತ್ತಿದ್ದಾರೆ. ಈ ರೀತಿಯ ಅಸಂತೃಪ್ತಿ ಹಾಗೂ ಅನಾರೋಗ್ಯಕರ ಜೀವನ ಶೈಲಿಗೆ ಕಾರಣವಾಗುತ್ತಿರುವ ಅಂಶಗಳನ್ನು ತಿಳಿದುಕೊಳ್ಳುವುದು ಅಗತ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ವಾರ್ಷಿಕ ವೇತನ ಎಷ್ಟು? ಕೇಳಿದ್ರೆ ಶಾಕ್ ಆಗ್ತಿರಾ!
ಗೊಂದಲದ ಮಾನಸಿಕ ಸ್ಥಿತಿ, ಕಳವಳ
ಕುಟುಂಬ ಬಿಟ್ಟು ಒಂಟಿಯಾಗಿ ಜೀವನ
ದೇಶದ ಐಟಿ ಹಬ್ ಆಗಿರುವ ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕೆಲಸ ಮಾಡಿ, ಬದುಕು ಕಟ್ಟಿಕೊಳ್ಳಲು ದೇಶದ ಎಲ್ಲ ಭಾಗಗಳಿಂದ ಜನ ಆಗಮಿಸುತ್ತಾರೆ. ಆದರೆ ಇವರಲ್ಲಿ ಬಹುತೇಕರು ತಮ್ಮ ಕುಟುಂಬವನ್ನು ಊರಲ್ಲಿಯೇ ಬಿಟ್ಟು ಇಲ್ಲಿ ಒಂಟಿ ಜೀವನ ಕಳೆಯಲಾರಂಭಿಸುತ್ತಾರೆ. ಹಲವಾರು ದಿನ, ವರ್ಷಗಳವರೆಗೆ ತಮ್ಮ ಗೆಳೆಯರು, ಸಹೋದ್ಯೋಗಿಗಳೊಂದಿಗೆ ವಾಸಿಸುತ್ತಾರೆ. ಈ ರೀತಿಯ ಜೀವನದಿಂದ ಅವರಲ್ಲಿ ಒಂದು ರೀತಿಯ ಹತಾಶೆ ಹಾಗೂ ಉದ್ವಿಗ್ನತೆ ಮನೆ ಮಾಡುತ್ತದೆ. ಅವರ ಮಾನಸಿಕ ಸಂತುಲನ ಏರುಪೇರಾಗಿ ಅರ್ಥವಿಲ್ಲದ ಜೀವನ ಸಾಗಿಸುವಂತಾಗುತ್ತದೆ.
ಟ್ರಾಫಿಕ್ ಸಮಸ್ಯೆ ಹಾಗೂ ಒತ್ತಡದ ಜೀವನ ಶೈಲಿ
ಬಹುತೇಕ ಐಟಿ ಉದ್ಯೋಗಿಗಳು ಬೆಂಗಳೂರಿನಲ್ಲಿ ಕೇವಲ ಕೆಲಸ ಮಾಡಿ ದುಡ್ಡು ಸಂಪಾದನೆ ಮಾಡುವ ದೃಷ್ಟಿಯಿಂದ ಇಲ್ಲಿ ವಾಸಿಸುತ್ತಾರೆ. ಆದರೆ ಬೆಂಗಳೂರಿನಲ್ಲಿ ದಿನೆ ದಿನೆ ಹೆಚ್ಚುತ್ತಿರುವ ಜನಸಂಖ್ಯೆಯಿಂದ ಟ್ರಾಫಿಕ್ ಸಮಸ್ಯೆ ವಿಪರೀತವಾಗುತ್ತಿದೆ. ಯಾವಾಗ ನೋಡಿದರೂ ವಾಹನಗಳಿಂದ ಗಿಜಿಗುಡುತ್ತಿರುವ ಬೆಂಗಳೂರಿನ ರಸ್ತೆಗಳು ನಿರಂತರವಾಗಿ ಮನಸ್ಸಿಗೆ ಕಿರಿಕಿರಿ ಉಂಟುಮಾಡುತ್ತವೆ. ಇನ್ನು ಅನೇಕ ಐಟಿ ಉದ್ಯೋಗಿಗಳು ತಮ್ಮ ಜೀವನವನ್ನು ನೆಮ್ಮದಿಯಾಗಿ ಅನುಭವಿಸುವ ಬದಲು ಕೇವಲ ಕೆಲಸದ ಮೇಲೆಯೇ ಮನಸ್ಸು ಕೇಂದ್ರೀಕರಿಸಿರುತ್ತಾರೆ.
ಅತಿಯಾದ ಒತ್ತಡದ ಜೀವನ ಶೈಲಿಯಿಂದ ನಿರಾಳವಾದ ಬದುಕು ನಡೆಸಲು ಸಾಧ್ಯವಾಗದೆ, ಈ ಪರಿಸ್ಥಿತಿಯಿಂದ ಹೊರಬರಲು ಸಹ ಆಗದೆ ಐಟಿ ಉದ್ಯೋಗಿಗಳು ಚಡಪಡಿಸುತ್ತಾರೆ. ಇದರಿಂದ ಜೀವನ ಮತ್ತಷ್ಟು ಒತ್ತಡಕ್ಕೀಡಾಗಿ ಅತಿಯಾದ ಬಳಲಿಕೆ, ಆಯಾಸ ಅನುಭವಿಸುವಂತಾಗುತ್ತದೆ.
ಬಿಡುವಿನ ವೇಳೆಯಲ್ಲಿಯೂ ಭವಿಷ್ಯದ್ದೇ ಚಿಂತೆ
ಐಟಿ ವಲಯದಲ್ಲಿ ಕೆಲಸ ಮಾಡುವವರು ಪ್ರತಿದಿನ ಬದಲಾಗುವ ತಂತ್ರಜ್ಞಾನದ ಬಗ್ಗೆ ಆಗಿಂದಾಗ ಜ್ಞಾನ ಪಡೆಯುವುದು ಅನಿವಾರ್ಯ. ನೂತನ ತಂತ್ರಜ್ಞಾನದ ಬಗ್ಗೆ ಅಪ್ಡೇಟ್ ಆಗದಿದ್ದರೆ ಮುಂದೇನು ಎಂಬ ಚಿಂತೆ ಕಾಡುತ್ತದೆ. ಹೀಗಾಗಿ ಕೆಲವರು ಹೆಚ್ಚಿನ ವಿದ್ಯಾಭ್ಯಾಸಕ್ಕೆ ಮೊರೆ ಹೋದರೆ, ಇನ್ನು ಹಲವರು ಹೊಸ ಟೆಕ್ನಾಲಜಿಯ ಅಧ್ಯಯನದ ಮೊರೆ ಹೋಗುತ್ತಾರೆ. ಮುಂದಿನ ದಿನಗಳಲ್ಲಿ ನೆಮ್ಮದಿಯ ಸಮಯ ಬರಲಿದೆ ಎಂಬ ನಿರೀಕ್ಷೆಯಲ್ಲಿ ಸಾಕಷ್ಟು ಸಮಯಾವಕಾಶ ಕಳೆದು ಹೋಗುತ್ತದೆ. ಬಿಡುವಿನ ವೇಳೆಯಲ್ಲಿ ಕಂಪನಿಗಳ ವತಿಯಿಂದ ಆಗಾಗ ಟೂರ್ಗಳಿಗೆ ಹೋದರೂ ಜೀವನೋತ್ಸಾಹಕ್ಕೆ ಬೇಕಾದ ಸ್ಫೂರ್ತಿ ದೊರೆಯುವುದಿಲ್ಲ. ಇವೆಲ್ಲ ಕಾರಣಗಳಿಂದ ಜೀವನ ಖಾಲಿ ಎನಿಸತೊಡಗುತ್ತದೆ.
ಹತಾಶೆ, ಉದ್ವಿಗ್ನತೆ
ಸಮಯ ಕಳೆದಂತೆ ಇಂಥ ಒಂದು ಖಾಲಿ ಜೀವನಕ್ಕೆ ಇವರು ಒಗ್ಗಿಕೊಳ್ಳುತ್ತ ಸಾಗುತ್ತಾರೆ. ಆದರೆ ಹತಾಶೆ, ಉದ್ವಿಗ್ನತೆಗಳು ಹೆಚ್ಚಾಗುತ್ತ ಹೋಗುವುದರಿಂದ ಇವರು ತಮ್ಮ ಕೆಲಸದ ಮೇಲೂ ಸರಿಯಾಗಿ ಗಮನವಿಡಲು ಸಾಧ್ಯವಾಗುವುದಿಲ್ಲ. ಬೆಂಗಳೂರು ಮಹಾನಗರ ಐಟಿ ವಲಯದಲ್ಲಿನ ಉದ್ಯೋಗಿಗಳಿಗೆ ಅಪಾರ ಭವಿಷ್ಯ ನೀಡುವುದು ನಿಜವಾದರೂ ಜೊತೆಗೆ ಹತಾಶೆಯ ಜೀವನವೂ ಸುತ್ತಿಕೊಳ್ಳುತ್ತದೆ.
ಒಟ್ಟಾರೆಯಾಗಿ ಒತ್ತಡದ ಜೀವನದಲ್ಲಿ ರಿಲ್ಯಾಕ್ಸ್ ಆಗಲು ಸಮಯವೇ ಸಿಗುವುದಿಲ್ಲ. ಹೀಗಾಗಿ ಹತಾಶೆಯ ಸುಳಿಯಲ್ಲಿ ಸಿಲುಕುವ ಐಟಿ ಉದ್ಯೋಗಿಗಳ ಜೀವನದಲ್ಲಿ ನೆಮ್ಮದಿ ಎಂಬುದು ಮರೀಚಿಕೆಯಾಗುತ್ತಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications