ಪ್ರಧಾನ ಮಂತ್ರಿ ಮುದ್ರಾ ಯೋಜನೆ (ಪಿಎಂಎಂವೈ) ಅಡಿಯಲ್ಲಿ ಸಣ್ಣ ಉದ್ಯಮಿಗಳಿಗೆ ಸುಲಭದ ಹಣಕಾಸು ಒದಗಿಸುವ ಸಲುವಾಗಿ ಅಇಪ್ಪತ್ತಕ್ಕೂ ಹೆಚ್ಚು ಇ-ಕಾಮರ್ಸ್ ಸಂಸ್ಥೆಗಳೊಂದಿಗೆ ಹಣಕಾಸು ಇಲಾಖೆ ಕೈ ಜೋಡಿಸಿದೆ.
ಪ್ರಧಾನ ಮಂತ್ರಿ ಮುದ್ರಾ ಯೋಜನೆ (ಪಿಎಂಎಂವೈ) ಅಡಿಯಲ್ಲಿ ಸಣ್ಣ ಉದ್ಯಮಿಗಳಿಗೆ ಸುಲಭದ ಹಣಕಾಸು ಒದಗಿಸುವ ಸಲುವಾಗಿ ಅಮೆಜಾನ್, ಫ್ಲಿಪ್ಕಾರ್ಟ್, ಒಲಾ ಮತ್ತು ಉಬರ್ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಇ-ಕಾಮರ್ಸ್ ಸಂಸ್ಥೆಗಳೊಂದಿಗೆ ಹಣಕಾಸು ಇಲಾಖೆ ಕೈ ಜೋಡಿಸಿದೆ.

ಸಾಲದಾತರು, ಉದ್ಯಮ ಮತ್ತು ಸರ್ಕಾರದ ನಡುವಿನ ಪಾಲುದಾರಿಕೆ ಮೂಲಕ ಸಣ್ಣ ವ್ಯವಹಾರ ಸಾಲಗಳನ್ನು ಸುಲಭಗೊಳಿಸಲು ಉದ್ದೇಶಿಸಿದೆ.
ಸಣ್ಣ ಉದ್ಯಮಿಗಳಿಗೆ ರೂ. 10 ಲಕ್ಷಗಳವರೆಗೆ ಸಾಲ ಒದಗಿಸುವುದು ಮುದ್ರಾ ಯೋಜನೆಯ ಗುರಿಯಾಗಿದೆ. ಬ್ಯಾಂಕುಗಳು, ಸಣ್ಣ ಹಣಕಾಸು ಬ್ಯಾಂಕುಗಳು, ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳು (NBFCs) ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲವನ್ನು ಒದಗಿಸುತ್ತವೆ. 'ಮುದ್ರಾ ಬ್ಯಾಂಕ್' ಪ್ರಯೋಜನಗಳೇನು?
ಓಲಾ, ಫ್ಲಿಪ್ಕಾರ್ಟ್, ಉಬರ್, ಡಬ್ಬವಾಲಾಸ್, ಕೇಬಲ್ ಆಪರೇಟರ್ ಗಳು, ಝೊಮಾಟೊ, ಕಂಪೆನಿಗಳು ಸಾಲ ಒದಗಿಸುವ ಪಾಲುದಾರರಾಗಿದ್ದಾರೆ. ಮುದ್ರಾ ಯೋಜನೆಯಡಿ ಹೆಚ್ಚಿನ ಸೌಲಭ್ಯ ಒದಗಿಸಲು ನಾವು ಬಯಸುತ್ತೇವೆ ಎಂದು ಹಣಕಾಸು ವ್ಯವಹಾರಗಳ ಕಾರ್ಯದರ್ಶಿ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಉದ್ಯಮದಾರರಿಗೆ ಬ್ಯಾಮಕ್ ಸಾಲಗಳು ಉತ್ತಮ. ಆದರೆ ಕಂಪನಿಗಳು ಪಾಲುದಾರರಿಂದ ಬೆಂಬಲ ಬಯಸುತ್ತಿವೆ. ಹೀಗಾಗಿ ನಾವು ಅವುಗಳ ಸಂಪರ್ಕ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತೇವೆ ಎಂದರು. ಮೇಕ್ ಮೈ ಟ್ರಿಪ್, ಓಯೋ, ಮೆರು ಕ್ಯಾಬ್, ಬಿಗ್ ಬಾಸ್ಕೆಟ್, ಕಾರ್ಜ್ ಆನ್ ರೆಂಟ್ ಇತ್ಯಾದಿ ಇದರಲ್ಲಿ ಸೇರಿವೆ.
ಕಳೆದ ಹಣಕಾಸು ವರ್ಷದಲ್ಲಿ ಸರಕಾರ ಮುದ್ರಾ ಯೋಜನೆಯಡಿ ರೂ. 2.53 ಲಕ್ಷ ಕೋಟಿ ವರೆಗೆ ಸಾಲವನ್ನು ವಿಸ್ತರಿಸಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications