ದೇಶದಾದ್ಯಂತ ಪತಂಜಲಿ ಉತ್ಪನ್ನಗಳು ಭಾರೀ ಜನಪ್ರಿಯತೆ ಗಳಿಸಿದ್ದು, ಎಲ್ಲರ ನೆಚ್ಚಿನ ಸರಕುಗಳಾಗುತ್ತಿವೆ. ಇದೀಗ ಪತಂಜಲಿ ತನ್ನ ವ್ಯಾಪ್ತಿಯನ್ನು ದೂರಸಂಪರ್ಕ ಕ್ಷೇತ್ರಕ್ಕೂ ಪಸರಿಸಲು ಸಜ್ಜಾಗಿದೆ.
ಪತಂಜಲಿ ಕಂಪನಿಯು ಭಾರತದ ಅತ್ಯಂತ ವಿಶ್ವಾಸಾರ್ಹ ಫಾಸ್ಟ್ ಮೂವಿಂಗ್ ಕನ್ಸ್ಯೂಮರ್ ಗೂಡ್ಸ್ ಬ್ರಾಂಡ್ ಆದ ನಂತರ ಯೋಗ ಗುರು ಬಾಬಾ ರಾಮದೇವ್ ಅವರ ಪತಂಜಲಿ ಸಂಸ್ಥೆ ಟೆಲಿಕಾಂ ವಲಯವನ್ನು ಪ್ರವೇಶಿಸಿದೆ. ದೇಶದಾದ್ಯಂತ ಪತಂಜಲಿ ಉತ್ಪನ್ನಗಳು ಭಾರೀ ಜನಪ್ರಿಯತೆ ಗಳಿಸಿದ್ದು, ಎಲ್ಲರ ನೆಚ್ಚಿನ ಸರಕುಗಳಾಗುತ್ತಿವೆ. ಇದೀಗ ಪತಂಜಲಿ ತನ್ನ ವ್ಯಾಪ್ತಿಯನ್ನು ದೂರಸಂಪರ್ಕ ಕ್ಷೇತ್ರಕ್ಕೂ ಪಸರಿಸಲು ಸಜ್ಜಾಗಿದೆ. ನರೇಂದ್ರ ಮೋದಿ ಸರ್ಕಾರದ ಈ ಯೋಜನೆಯಿಂದ 6 ತಿಂಗಳಲ್ಲಿ ರೂ. 5 ಕೋಟಿ ಗಳಿಸುವುದು ಹೇಗೆ?
ಸ್ವದೇಶಿ ಸಮೃದ್ಧಿ ಸಿಮ್ ಕಾರ್ಡ್
ಬಾಬಾ ರಾಮದೇವ್ ಸ್ವದೇಶಿ ಸಮೃದ್ಧಿ ಸಿಮ್ ಕಾರ್ಡ್ಗಳನ್ನು ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ಎನ್ಎಲ್) ಮೈತ್ರಿಯೊಂದಿಗೆ ಪ್ರಾರಂಭಿಸಿದ್ದಾರೆ. ಆರಂಭದಲ್ಲಿ, ಪತಂಜಲಿಯ ಉದ್ಯೋಗಿಗಳು ಮತ್ತು ಕಚೇರಿ ಅಧಿಕಾರಿಗಳು ಕೇವಲ ಸಿಮ್ ಕಾರ್ಡ್ ಪ್ರಯೋಜನಗಳನ್ನು ಪಡೆಯಲಿದ್ದಾರೆ.
ಸಿಮ್ ಸೌಲಭ್ಯಗಳು
ರೂ. 144 ರಿಚಾರ್ಜ್ ಮಾಡಿದಲ್ಲಿ ಗ್ರಾಹಕರು 2 ಜಿಬಿ ಡೇಟಾ ಹಾಗೂ ಅನಿಯಮಿತ ಕರೆಗಳನ್ನು ಮಾಡಬಹುದಾಗಿದೆ. ಜತೆಗ ದಿನಕ್ಕೆ 100 ಎಸ್ಎಂಎಸ್ ಉಚಿತವಾಗಿ ನೀಡಲಿದೆ. ಪತಂಜಲಿ ನೌಕರರಿಗೆ ಮಾತ್ರ ಲಭ್ಯವಿರುವ ಈ ಸಿಮ್ ಸದ್ಯದಲ್ಲಿಯೇ ಗ್ರಾಹಕರಿಗೂ ಸಿಗಲಿದೆ.
ಶೇ. 10ರಷ್ಟು ರಿಯಾಯಿತಿ
ಸಿಮ್ ಪೂರ್ಣ ಪ್ರಮಾಣದಲ್ಲಿ ಬಿಡುಗಡೆಯಾದ ನಂತರ, ಗ್ರಾಹಕರು ಈ ಕಾರ್ಡ್ ನೊಂದಿಗೆ ಪತಂಜಲಿಯ ಉತ್ಪನ್ನಗಳ ಮೇಲೆ ಶೇ. 10 ರಷ್ಟು ರಿಯಾಯಿತಿಯನ್ನು ಪಡೆಯಲಿದ್ದಾರೆ.
ರೂ. 5 ಲಕ್ಷ ವರೆಗೆ ಜೀವ ವಿಮೆ
ಇಷ್ಟೇ ಅಲ್ಲ ಈ ಸಿಮ್ ಕಾರ್ಡ್ ಗ್ರಾಹಕರಿಗೆ ರೂ. 2.5 ಲಕ್ಷ ವರೆಗೆ ವೈದ್ಯಕೀಯ ವಿಮೆ ಹಾಗೂ ರೂ. 5 ಲಕ್ಷದವರೆಗೆ ಜೀವ ವಿಮೆ ಸಿಗಲಿದೆ.
ಬಿಎಸ್ಎನ್ಎಲ್ ಸ್ವದೇಶಿ ನೆಟ್ವರ್ಕ್ ಸಂಸ್ಥೆಯಾಗಿದ್ದು, ಪತಂಜಲಿ ಕೂಡ ಸ್ವದೇಶಿ ಕಂಪನಿಯಾಗಿದೆ. ಎರಡೂ ಸೇರಿ ದೇಶ ಸೇವೆ ಮಾಡಲಿವೆ ಎಂದು ಬಾಬಾ ರಾಮದೇವ್ ಹೇಳಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications