ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮೊಬೈಲ್ ಬ್ಯಾಂಕಿಂಗ್ ವಹಿವಾಟು ರೂ. 3,360 ಲಕ್ಷಕ್ಕೆ ಏರಿಕೆಯಾಗಲಿದೆ ಎಂದು ದೇಶದ ಅತಿ ದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ನಿರೀಕ್ಷಿಸಿದೆ.
ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮೊಬೈಲ್ ಬ್ಯಾಂಕಿಂಗ್ ವಹಿವಾಟು ರೂ. 3,360 ಲಕ್ಷಕ್ಕೆ ಏರಿಕೆಯಾಗಲಿದೆ ಎಂದು ದೇಶದ ಅತಿ ದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ನಿರೀಕ್ಷಿಸಿದೆ.

ಒಟ್ಟಾರೆ ವಹಿವಾಟು ರೂ. 7,56,000 ಕೋಟಿಗೆ ತಲುಪಲಿದೆ ಎಂದು ಎಸ್ಬಿಐ ಅಂದಾಜಿಸಿದೆ. ಬ್ಯಾಂಕುಗಳಲ್ಲಿ ಮೊಬೈಲ್ ಬ್ಯಾಂಕಿಂಗ್ ಸೌಲಭ್ಯಕ್ಕಾಗಿ ನೋಂದಾಯಿಸಿಕೊಂಡಿರುವ ಗ್ರಾಹಕರ ಸಂಖ್ಯೆ ಮಾರ್ಚ್ 31ರ ಅಂತ್ಯದ ವೇಳೆಗೆ 305 ಲಕ್ಷ ತಲುಪಿದೆ ಎಂದು ಎಸ್ಬಿಐ ಉಪ ವ್ಯವಸ್ಥಾಪಕ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರಾ ತಿಳಿಸಿದ್ದಾರೆ.
ಟೆಲಿಕಾಂ ಕ್ಷೇತ್ರದಲ್ಲಿನ ಸ್ಪರ್ಧೆ, ಡಿಜಿಟಲೀಕರಣದಿಂದಾಗಿ ಸ್ಮಾರ್ಟ್ಫೋನ್ಗಳ ಬಳಕೆ ಹೆಚ್ಚಾಗುತ್ತಿದೆ. ಡೇಟಾ ಸೌಲಭ್ಯ ಹೆಚ್ಚೆಚ್ಚು ಸಿಗುತ್ತಿದ್ದು, ವೈ-ಫೈ, 3ಜಿ, 4ಜಿ ಲಭ್ಯತೆಯಿಂದ ಬ್ಯಾಂಕಿಂಗ್ ವಹಿವಾಟು ಹೆಚ್ಚು ಸುಲಭಗೊಂಡಿದೆ. ಕಳೆದ ಸಾಲಿನಲ್ಲಿ ರೂ. 6 ಲಕ್ಷ ಕೋಟಿ ಮೊತ್ತದ 2,706 ಲಕ್ಷದಷ್ಟು ಮೊಬೈಲ್ ಬ್ಯಾಂಕಿಂಗ್ ವಹಿವಾಟುಗಳು ನಡೆದಿದ್ದವು.
ಇಂಟರ್ನೆಟ್ ಬ್ಯಾಂಕಿಂಗ್, ಪಾಯಿಂಟ್ ಆಫ್ ಸೇಲ್, ಮೊಬೈಲ್ ಬ್ಯಾಂಕಿಂಗ್ ಮತ್ತು ಎಟಿಎಂಗಳ ಮೂಲಕ ಶೇ. 80ರಷ್ಟು ವಹಿವಾಟು ನಡೆಯುತ್ತಿರುವುದರಿಂದ ಬ್ಯಾಂಕ್ ಶಾಖೆಗಳಲ್ಲಿನ ವಹಿವಾಟು ಶೇ. 20ರಷ್ಟಕ್ಕೆ ಇಳಿದಿದೆ ಎಂದು ಬ್ಯಾಂಕ್ನ ಅಧ್ಯಕ್ಷ ರಜನೀಶ್ ಕುಮಾರ್ ಇತ್ತೀಚೆಗೆ ಹೇಳಿದ್ದರು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications