ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರದ ಮೊದಲ ಬಜೆಟ್ ಅನ್ನು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಯವರು ಇಂದು ಮಂಡನೆ ಮಾಡಲಿದ್ದಾರೆ.ಸಾಲಮನ್ನಾ ಮಾಡುವುದಾಗಿ ಹೇಳಿರುವ ಸರ್ಕಾರ, ಇದು ಸಂಪೂರ್ಣ ಮನ್ನಾವೋ ಅಥವಾ ಅರ್ಧ ಮನ್ನಾವೋ ಎಂಬ ಕುತೂಹಲ.
ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರದ ಮೊದಲ ಬಜೆಟ್ ಅನ್ನು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಯವರು ಇಂದು ಮಂಡನೆ ಮಾಡಲಿದ್ದಾರೆ.
ಸಾಲಮನ್ನಾ ಮಾಡುವುದಾಗಿ ಹೇಳಿರುವ ಸರ್ಕಾರ, ಇದು ಸಂಪೂರ್ಣ ಮನ್ನಾವೋ ಅಥವಾ ಅರ್ಧ ಮನ್ನಾವೋ ಎಂಬ ಕುತೂಹಲದ ಚರ್ಚೆಗೆ ಕಾರಣವಾಗಿದೆ. ರೈತರ ಸಾಲಮನ್ನಾ ಕಾರಣದಿಂದ ದೋಸ್ತಿ ಸರ್ಕಾರದ ಮೊದಲ ಹೆಚ್ಚು ಆಕರ್ಷಕವಾಗಿದೆ.
ಬಜೆಟ್ ನಿರೀಕ್ಷೆಗಳು
- ಈಗಾಗಲೇ ಗೊತ್ತಿರುವಂತೆ ಗರ್ಭಿಣಿ, ಬಾಣಂತಿಯರಿಗೆ ರೂ. 6 ಸಾವಿರದಂತೆ 6 ತಿಂಗಳವರೆಗೆ ಮಾಶಾಸನ ಸಾಧ್ಯತೆ
- ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಮಹಿಳಾ ಪೊಲೀಸರಿಗೆ ವಿಶೇಷ ಅನುದಾನ ಘೋಷಣೆ ನಿರೀಕ್ಷೆ
- ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಏರಿಕೆ ಸಾಧ್ಯತೆ
- ನೋಂದಣಿ, ಮುದ್ರಾಂಕ ಶುಲ್ಕ, ಅಬಕಾರಿ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಸಾಧ್ಯತೆ
ಕೃಷಿ ವಲಯ ಸಾಧ್ಯಾಸಾಧ್ಯತೆ
- ಇಸ್ರೇಲ್ ಮಾದರಿ ಕೃಷಿ, ಹೊಸ ಮಾದರಿ ಕೃಷಿ ಪದ್ದತಿ ಘೋಷಣೆ
- ಕೃಷಿ ಹೊಂಡ ನಿರ್ಮಾಣಕ್ಕೆ ಹೆಚ್ಚಿನ ಅನುದಾನ
- ಸ್ವಯಂ ಉದ್ಯೋಗ ಮಾಡುವವರಿಗೆ ಕಾಯಕ ಯೋಜನೆಯಡಿ ರೂ. ೧೦ ಲಕ್ಷ ಸಾಲ
- ಉದ್ಯೋಗ ಸೃಷ್ಟಿಗೆ ಆದ್ಯತೆ
ಇತರೆ ಸಂಭವನೀಯ ಘೋಷಣೆಗಳು
- ಹೆಣ್ಣುಮಕ್ಕಳಿಗೆ ಪದವಿ ಮುಗಿಯುವವರೆಗೆ ಉಚಿತ ಶಿಕ್ಷಣ ಯೋಜನೆ
- ಫಿಲಂ ಸಿಟಿ ನಿರ್ಮಾಣ ಘೋಷಣೆ ಸಾಧ್ಯತೆ
- ಮೆಟ್ರೋಗೆ ಹೆಚ್ಚಿನ ಅನುದಾನ ಸಾಧ್ಯತೆ
- ವೃದ್ದಾಪ್ಯ ವೇತನ 500 ರಿಂದ 1000ಕ್ಕೆ ಹೆಚ್ಚಳ ಸಾಧ್ಯತೆ
- ಸಿದ್ದರಾಮಯ್ಯ ಸರ್ಕಾರದ `ಆರೋಗ್ಯ ಕರ್ನಾಟಕ' ಯೋಜನೆ ಮುಂದುವರಿಕೆ ಸಾಧ್ಯತೆ
ಸಾಲಮನ್ನಾ ಪ್ರಭಾವ
ಸಾಲಮನ್ನಾ ಕುರಿತಂತೆ ಈಗಾಗಲೇ ಭಾರೀ ಚರ್ಚೆಗಳು ಶುರುವಾಗಿದ್ದು, ಮುಖ್ಯಂತ್ರಿ ಕುಮಾರಸ್ವಾಮಿಯವರು ರಾಜ್ಯದ ಹಣಕಾಸಿನ ಸ್ಥಿತಿಗತಿಗಳನ್ನು ಅದ್ಯಯನ ಮಾಡುತ್ತಿರುವುದರಿಂದ ಸಾಲಮನ್ನಾ ಮಾಡಲು ವಿಳಂಬವಾಗುತ್ತಿದೆ ಎಂದು ಹಿಂದೆ ಹೇಳಿದ್ದರು.
ಅದೇ ರೀತಿ ಆರ್ಥಿಕ ತಜ್ಞರುಹಾಗು ಸರ್ಕಾರಿ ಅಧಿಕಾರಿಗಳು ಸಾಲಮನ್ನಾದಿಂದ ರಾಜ್ಯದ ಹಣಕಾಸು ಮೇಲೆ ಆಗಬಹುದಾದ ಪರಿಣಾಮಗಳ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications