ಶೂನ್ಯ ಬಂಡವಾಳ ಕೃಷಿ ಯೋಜನೆಗೆ ಪ್ರೇಮ್ ಜೀ ಫೌಂಡೇಶನ್ ಸಹಕಾರ: ಎಚ್.ಡಿ. ಕುಮಾರಸ್ವಾಮಿ
ಶೂನ್ಯ ಬಂಡವಾಳ ಕೃಷಿ ಯೋಜನೆಯನ್ನು ನನಸು ಮಾಡಲು ಅಜೀಂ ಪ್ರೇಮ್ಜೀ ಫೌಂಡೇಶನ್ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಸಾಥ್ ನೀಡಲಿದೆ.
ಕೃಷಿ ಯಂತ್ರೋಪಕರಣಗಳ ಬೆಲೆ, ಅನಿಶ್ಚಿತ ಮಳೆಯಿಂದಾಗಿ ರೈತರ ಸಾಲ ಹೆಚ್ಚಾಗುತ್ತಿದ್ದು, ಈ ಪರಿಸ್ಥಿತಿಯಿಂದ ರೈತರನ್ನು ಹೊರ ತರಲು ಶೂನ್ಯ ಬಂಡವಾಳ ಕೃಷಿ ಪದ್ದತಿಯನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಸಂದರ್ಭದಲ್ಲಿ ಹೇಳಿದ್ದರು.
ಶೂನ್ಯ ಬಂಡವಾಳ ಕೃಷಿ ಯೋಜನೆಯನ್ನು ನನಸು ಮಾಡಲು ಅಜೀಂ ಪ್ರೇಮ್ಜೀ ಫೌಂಡೇಶನ್ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಸಾಥ್ ನೀಡಲಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಅಜೀಂ ಪ್ರೇಮ್ಜೀ ಭೇಟಿಯಾಗಿ ಚರ್ಚೆ ನಡೆಸಿದ್ದು, ''ಶಿಕ್ಷಣ, ಮಾಲಿನ್ಯ ನಿಯಂತ್ರಣ ಕ್ಷೇತ್ರದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸುವುದರ ಜತೆಗೆ ಶೂನ್ಯ ಬಂಡವಾಳ ಕೃಷಿಗೂ ಸಹಕಾರ ನೀಡುತ್ತೇವೆ ಎಂದು ಹೇಳಿದ್ದಾರೆ.
ಶೂನ್ಯ ಬಂಡವಾಳ ಕೃಷಿಗೆ ಬಜೆಟ್ನಲ್ಲಿ ರೂ. 50 ಕೋಟಿ ಮೀಸಲು ಇಡಲಾಗಿದ್ದು, ಭವಿಷ್ಯದಲ್ಲಿ ಇನ್ನಷ್ಟು ಉತ್ತೇಜನ ನೀಡಲಾಗುತ್ತದೆ ಎಂದು ಅಜೀಂ ಪ್ರೇಮ್ಜೀ ಜತೆಗಿನ ಸಭೆ ಬಳಿಕ ಕುಮಾರಸ್ವಾಮಿ ಹೇಳಿದರು.
ಈ ನಿಟ್ಟಿನಲ್ಲಿ ನಾನಾ ಸಂಘಟನೆಗಳ ಸಹಕಾರ ಅಗತ್ಯವಾಗಿದ್ದು, ಅಜೀಂ ಪ್ರೇಮ್ಜೀ ಅವರು ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದರು.
ಇಸ್ರೇಲ್ ಮಾದರಿ ಹಾಗು ಶೂನ್ಯ ಬಂಡವಾಳ ಕೃಷಿ ಯೋಜನೆಗೆ ಹೆಚ್ಚು ಒತ್ತು ನೀಡಿ ಅನುಷ್ಠಾನಕ್ಕೆ ತರಲು ಮುಖ್ಯಮಂತ್ರಿಯವರು ಕಾರ್ಯಪ್ರವೃತ್ತರಾಗಿದ್ದಾರೆ.